Kadaba ಸ್ವಾಭಿಮಾನ ಭರಿತ ಸಮಾಜ ನಿರ್ಮಾಣ ಗುರಿಯಾಗಿರಲಿ: ಡಾ| ನಿರ್ಮಲಾನಂದನಾಥ ಸ್ವಾಮೀಜಿ

ಕಡಬ: ಗೌಡ ಸಮುದಾಯ ಭವನಕ್ಕೆ ಶಿಲಾನ್ಯಾಸ, ಸಹಕಾರ ಸಂಘ ಉದ್ಘಾಟನೆ

Team Udayavani, Dec 27, 2023, 12:04 AM IST

Kadaba ಸ್ವಾಭಿಮಾನ ಭರಿತ ಸಮಾಜ ನಿರ್ಮಾಣ ಗುರಿಯಾಗಿರಲಿ: ಡಾ| ನಿರ್ಮಲಾನಂದನಾಥ ಸ್ವಾಮೀಜಿ

ಕಡಬ: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರು ಬೌದ್ಧಿಕ ಮತ್ತು ಅರ್ಥಿಕವಾಗಿ ಸದೃಢರಾಗುವಂತೆ ಮಾಡಬೇಕು. ತನ್ಮೂಲಕ ಸ್ವಾಭಿಮಾನ ಭರಿತ ಸಮಾಜ ನಿರ್ಮಾಣ ನಮ್ಮ ಗುರಿಯಾಗಿರಲಿ ಎಂದು ಆದಿಚುಂಚನಗಿರಿ ಮಠದ ಡಾ| ನಿರ್ಮಲಾನಂದ ನಾಥ ಸ್ವಾಮೀಜಿ ನುಡಿದರು.

ಅವರು ಮಂಗಳವಾರ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಕಡಬದ ಹೊಸಮಠದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಹಾಗೂ ಕಡಬದಲ್ಲಿ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಉದ್ಘಾಟನೆ ನೆರವೇರಿಸಿ ನೂತನ ತಾಲೂಕು ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

ನಾಡಿಗೆ ಹಲವು ಕೊಡುಗೆಗಳನ್ನು ನೀಡಿದ ಸಮಾಜ ನಮ್ಮದು. ಯಾವುದೇ ರೀತಿಯಲ್ಲಿ ಕೀಳರಿಮೆ ಬೇಡ. ಸ್ವಾಮಿ ವಿವೇಕಾನಂದರ ಪ್ರೇರಣೆಯಂತೆ 1897ರಲ್ಲಿ ಕೆ.ಎಚ್‌. ರಾಮಯ್ಯನವರು ಹುಟ್ಟುಹಾಕಿದ ಒಕ್ಕಲಿಗ ಗೌಡ ಸಂಘದ ಇತಿಹಾಸ ಅತ್ಯಂತ ಹಿರಿದು. ನಾವು ನಮ್ಮ ಪರಂಪರೆ, ಗೌರವವನ್ನು ಉಳಿಸಿಕೊಂಡು ಇತರ ಸಮಾಜಗಳಿಗೂ ಧ್ವನಿಯಾಗುವ ರೀತಿಯಲ್ಲಿ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.

ಕಡಬದಲ್ಲಿ ತಾಲೂಕು ಮಟ್ಟದ ನೂತನ ಸಂಘ ಉದಯವಾಗುವ ಮೊದಲೇ 15 ಕೋಟಿ ರೂ. ವೆಚ್ಚದ ಬೃಹತ್‌ ಸೌಧದ ಶಿಲಾನ್ಯಾಸ ನಡೆಸುವ ಮೂಲಕ ಹೊಸ ಸಾಹಸವನ್ನು ಕೈಗೆತ್ತಿಕೊಂಡು ಸಮಾಜದ ದೃಷ್ಟಿಯಲ್ಲಿ ಅಪ್ಯಾಯಮಾನವಾದ ಕೆಲಸ ಮಾಡಿದೆ. ಸಮಾಜದ ಹೆಮ್ಮೆಯ ಸಂಕೇತವಾಗಿರುವ ಈ ಕಾರ್ಯದಲ್ಲಿ ಆದಿ ಚುಂಚನಗಿರಿ ಮಠವು ಎಲ್ಲ ಸಂದರ್ಭದಲ್ಲಿ ಜತೆಗಿದೆ. ಸಮಾಜದ ಎಲ್ಲ ಸ್ತರದ ಜನರನ್ನು ಒಟ್ಟುಗೂಡಿಸಿಕೊಂಡು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿರುವ ನೂತನ ತಂಡದ ಕಾರ್ಯ ಶ್ಲಾಘನೀಯ ಎಂದು ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ| ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಿ, ನಮ್ಮ ಸಮಾಜವು ಎಂದಿಗೂ ಪರಾವಲಂಬಿ ಗಳಾಗಬಾರದು. ನಮ್ಮನ್ನು ಬೇರೆಯವರು ನಿಯಂತ್ರಿಸಲು ಅವಕಾಶ ನೀಡಬಾರದು. ನಮ್ಮತನಕ್ಕೆ ಧಕ್ಕೆ ಬಂದಾಗ ನಾವು ಹೋರಾಟಕ್ಕೂ ಸಿದ್ಧರಾಗಬೇಕು ಎಂದರು.

ಡಿ.ವಿ. ಸದಾನಂದ ಗೌಡ ಮಾತನಾಡಿ, ಕಡಬದ ಈ ಕಾರ್ಯಕ್ರಮ ಜಿಲ್ಲೆಯ ಜನರಿಗೆ ಒಕ್ಕಲಿಗ ಸಮುದಾಯದ ಶಕ್ತಿಯ ಸಂದೇಶ ನೀಡಿದೆ. ಸುರೇಶ್‌ ಗೌಡ ಬೈಲು ಮತ್ತು ತಂಡದ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.

ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ, ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಹನುಮಂತಯ್ಯ, ವಿಧಾನಪರಿಷತ್‌ ಸದಸ್ಯ ಭೋಜೇ ಗೌಡ, ಮಾಜಿ ಶಾಸಕ ಸಂಜೀವ ಮಠಂದೂರು, ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿಯ ಅಧ್ಯಕ್ಷ ಕಿರಣ್‌ ಬುಡ್ಲೆಗುತ್ತು ಮಾತನಾಡಿದರು.

ಪ್ರಮುಖರಾದ ರವಿ ಮುಂಗ್ಲಿಮನೆ, ಮೋಹನ್‌ರಾಮ್‌ ಸುಳ್ಳಿ, ಚಿದಾನಂದ ಬೈಲಾಡಿ, ಜಾಕೆ ಮಾಧವ ಗೌಡ, ಲೋಕಯ್ಯ ಗೌಡ, ಪದ್ಮ ಗೌಡ ಬೆಳಾಲು, ನಿತ್ಯಾನಂದ ಮುಂಡೋಡಿ, ಎ.ವಿ. ತೀರ್ಥರಾಮ, ಉಮೇಶ್‌ ಎಂಪಿ., ಡಿ.ಬಿ. ಬಾಲಕೃಷ್ಣ ಗೌಡ, ಪಿ.ಸಿ. ಜಯರಾಮ, ಲಿಂಗಪ್ಪ ಗೌಡ ಅಳಿಕೆ, ಚಂದ್ರಾ ಕೋಲ್ಚಾರು, ಕುಶಾಲಪ್ಪ ಗೌಡ ಪೂವಾಜೆ, ಮೋನಪ್ಪ ಗೌಡ, ರಂಜನ್‌ ಜಿ.ಗೌಡ, ಗುರುದೇವ್‌ ಗೌಡ ಯು.ಬಿ., ವಿಶ್ವನಾಥ ಗೌಡ, ಬಾಲಕೃಷ್ಣ ಗೌಡ ಕೇರಿಮಾರ್‌, ಎ.ವಿ. ನಾರಾಯಣ ಗೌಡ ಅತಿಥಿಗಳಾಗಿದ್ದರು. ಕೇಶವ ಗೌಡ ಅಮೈ, ಗೋಪಾಲಕೃಷ್ಣ ಗೌಡ ಪುಯಿಲ, ಪ್ರಶಾಂತ್‌ ಗೌಡ ಪಂಜೋಡಿ, ಶಿವಪ್ರಸಾದ್‌ ಗೌಡ ಪುತ್ತಿಲ, ತಮ್ಮಯ್ಯ ಗೌಡ, ಮಂಜುನಾಥ ಗೌಡ ಉಪಸ್ಥಿತರಿದ್ದರು. ಶಿವರಾಮ ಗೌಡ ಸ್ವಾಗತಿಸಿ, ಸುರೇಶ್‌ ಗೌಡ ಪ್ರಸ್ತಾವನೆಗೈದರು. ಹಿರಿಯಣ್ಣ ಗೌಡ ವಂದಿಸಿದರು. ಚೇತನ್‌, ಸುಶ್ಮಿತಾ ನಿರೂಪಿಸಿದರು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.