Sullia: ವಿದ್ಯುತ್ ಲೈನ್ ದುರಸ್ತಿ ವೇಳೆ ಲೈನ್ ಚಾರ್ಜ್ ಮಾಡಲು ಯತ್ನ ತಪ್ಪಿದ ದುರಂತ
Team Udayavani, May 30, 2024, 10:06 PM IST
ಸುಳ್ಯ: ವಿದ್ಯುತ್ ಲೆ„ನ್ ದುರಸ್ತಿ ವೇಳೆ ಲೈನ್ ಆಫ್ ಮಾಡಲಾಗಿದ್ದನ್ನು ಆನ್ ಮಾಡಲು ಯತ್ನಿಸಿದ ಯುವಕನ ಕೃತ್ಯ ಸಿಸಿ ಕೆಮರಾದಲ್ಲಿ ಪತ್ತೆಯಾದ ಘಟನೆ ಬುಧವಾರ ಸುಳ್ಯ ತಾಲೂಕಿನ ಕರಿಕ್ಕಳ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬಾರೀ ದುರಂತವೊಂದು ತಪ್ಪಿದೆ.
ಪಂಜ ಮೆಸ್ಕಾಂ ವ್ಯಾಪ್ತಿಯ ಸಿಬ್ಬಂದಿಗಳು ಕರಿಕ್ಕಳ ಸಮೀಪ ವಿದ್ಯುತ್ ಲೆ„ನ್ಗೆ ತಾಗುತ್ತಿದ್ದ ಮರದ ಗೆಲ್ಲು ತೆರವು ಮಾಡಲು ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಯಾರೂ ಕೂಡ ಆಫ್ ಮಾಡದಂತೆ ಅದನ್ನು ತಂತಿಯಲ್ಲಿ ಕಟ್ಟಿ ಬಳಿಕ ಕೆಲಸ ನಿರ್ವಹಿಸಲು ತೆರಳಿದ್ದು. ಅದೇ ವೇಳೆಗೆ ಅಲ್ಲೇ ಸಮೀಪದ ರೂಂನಲ್ಲಿದ್ದ ರಬ್ಬರ್ ಟ್ಯಾಪರ್ ಕೆಲಸ ನಿರ್ವಹಿಸುವ ಯುವಕನೋರ್ವ ಚಾರ್ಜ್ ಮಾಡಲು ಯತ್ನಿಸಿದ್ದು, ಈ ವೇಳೆ ಜೆಒಸಿ ಉಪಕರಣದ ಬೋಲ್ಟ್ ತುಂಡಾಗಿ ವಿದ್ಯುತ್ ಪ್ರವಹಿಸಲು ಕೆ ಇಂಚು ಬಾಕಿ ಉಳಿದ ಕಾರಣ ಬಾರೀ ದುರಂತವೊಂದು ತಪ್ಪಿದೆ. ಕೆಲ ಸಮಯದ ಬಳಿಕ ಘಟನೆ ಮೆಸ್ಕಾಂ ಸಿಬ್ಬಂದಿಗಳ ಗಮನಕ್ಕೆ ಬಂದಿದ್ದು, ಅವರು ಸಮೀಪದ ಸಿಸಿ ಕೆಮರಾ ಪರಿಶೀಲನೆ ವೇಳೆ ಅಲ್ಲಿನ ಯುವಕನ ಕೃತ್ಯ ಬೆಳಕಿಗೆ ಬಂದಿದೆ. ಆರೋಪಿ ಯುವಕನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದು ಮುಚ್ಚಲಿಕೆ ಬರೆಸಿ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.