Puttur: ಶುಲ್ಕ ಪಾವತಿಸದಿದ್ದರೆ ನಳ್ಳಿ ನೀರಿನ ಸಂಪರ್ಕ ಕಡಿತ
Team Udayavani, Aug 27, 2024, 4:20 PM IST
ಪುತ್ತೂರು: ಗ್ರಾ.ಪಂ.ನಿಂದ ಕುಡಿಯುವ ನೀರಿನ ಸಂಪರ್ಕ ಪಡೆದು ಶುಲ್ಕ ಪಾವತಿಸದೇ ಇರುವವರ ನಳ್ಳಿ ನೀರಿನ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬನ್ನೂರು ಗ್ರಾ.ಪಂ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಗ್ರಾ.ಪಂ. ಅಧ್ಯಕ್ಷೆ ಸ್ಮಿತಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಬನ್ನೂರು, ಪಟ್ನೂರು, ಚಿಕ್ಕಮುಟ್ನೂರು ಗ್ರಾಮಗಳಲ್ಲಿ ನೀರಿನ ಶುಲ್ಕ ಪಾವತಿಸಲು ಬಾಕಿಯಿದ್ದು ಈಗಾಗಲೇ ನೋಟೀಸ್ ನೀಡಲಾಗಿದೆ ಎಂದು ಅಧ್ಯಕ್ಷರು ಹೇಳಿದರು.
ಘನತ್ಯಾಜ್ಯ ಘಟಕವನ್ನು ಸಂಜೀವಿನಿ ಒಕ್ಕೂಟದೊಂದಿಗೆ ಒಪ್ಪಂದದ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ.ಇದರ ಮಾಸಿಕ ಶುಲ್ಕ ಸಂಗ್ರಹಣೆ ಮಾಡಲು ಸಿಬಂದಿ ಮನೆ ಮನೆ ಭೇಟಿ ನೀಡುವ ಸಂದರ್ಭದಲ್ಲಿ ಶುಲ್ಕ ನೀಡಬೇಕು, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಬೇಕು. ಇದರ ಬಗ್ಗೆ ಸ್ವತ್ಛವಾಹಿನಿ ಮೂಲಕ ಜನರಿಗೆ ಅರಿವು ಮೂಡಿಸಲು ನಿರ್ಣಯ ಕೈಗೊಳ್ಳಲಾಯಿತು.
ಗ್ರಾ.ಪಂ ಉಪಾಧ್ಯಕ್ಷ ಶೀನಪ್ಪ ಕುಲಾಲ್, ಸದಸ್ಯರಾದ ಶ್ರೀನಿವಾಸ ಪೆರ್ವೋಡಿ, ತಿಮ್ಮಪ್ಪ ಪೂಜಾರಿ, ಗಿರಿಧರ ಗೌಡ, ರಾಘವೇಂದ್ರ ಹಂದ್ರಟ್ಟ, ಗಣೇಶ್ ಹೆಗ್ಡೆ, ರಮಣಿ ಡಿ.ಗಾಣಿಗ, ಜಯ ಏಕ, ಹರಿಣಾಕ್ಷಿ, ವಿಮಲ, ಗೀತಾ, ಸುಪ್ರಿತಾ ಉಪಸ್ಥಿತರಿದ್ದರು.
ಸಾಕುಪ್ರಾಣಿ ಬೀದಿಗೆ ಬಿಡಬೇಡಿ ಸಾಕುಪ್ರಾಣಿಗಳನ್ನು ಬೀದಿಗೆ ಬಿಡುವುದರಿಂದ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಹಲವಾರು ದೂರುಗಳು ಬರುತ್ತಿರುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪವಾಯಿತು. ವಾಹನ ಸವಾರರಿಗೆ ತೊಂದರೆ ಉಂಟಾದರೆ ಆ ವೆಚ್ಚಗಳನ್ನು ಸಾಕು ಪ್ರಾಣಿಗಳ ಮಾಲಕರು ಭರಿಸಬೇಕು ಎಂದು ನಿರ್ಣಯಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.