Maninalkur: ಶಿಥಿಲಾವಸ್ಥೆಯಲ್ಲಿ ಹಳೆ ಶಾಲಾ ಕಟ್ಟಡ; ಕ್ರಮಕ್ಕೆ ಆಗ್ರಹ


Team Udayavani, Oct 17, 2024, 1:33 PM IST

5

ಶಿಥಿಲಾವಸ್ಥೆಗೆ ತಲುಪಿರುವ ಮಾವಿನಕಟ್ಟೆ ಸರಕಾರಿ ಶಾಲೆಯ ಕಟ್ಟಡ.

ಬಂಟ್ವಾಳ: ಸರಕಾರಿ ಶಾಲೆಗಳ ಕಟ್ಟಡಗಳು ಶಿಥಿಲಗೊಂಡಾಗ ತತ್‌ಕ್ಷಣಕ್ಕೆ ದುರಸ್ತಿ ಅಥವಾ ಹಳೆ ಕಟ್ಟಡವಾದರೆ ಅದನ್ನು ತೆರವು ಮಾಡುವುದು ಇಲಾಖೆಯ ಕರ್ತವ್ಯವಾಗಿದೆ. ಆದರೆ ಶಿಕ್ಷಣ ಇಲಾಖೆ ಹಲವು ಕಾರಣಗಳನ್ನು ಮುಂದಿಟ್ಟು ಶಿಥಿಲಾವಸ್ಥೆಯ ಕಟ್ಟಡವನ್ನು ಹಾಗೇ ಬಿಡುತ್ತಿದೆ. ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆ ಸರಕಾರಿ ಹಿ.ಪ್ರಾ.ಶಾಲೆಯ ಕಟ್ಟಡವೂ ಶಿಥಿಲಾವಸ್ಥೆಯಲ್ಲಿದ್ದು, ಕಟ್ಟಡದ ಒಂದು ಭಾಗದ ಹಂಚುಗಳನ್ನು ತೆಗೆದಿಟ್ಟು ಹಾಗೇ ಬಿಡಲಾಗಿದೆ. ಕಟ್ಟಡವು ಬಿದ್ದು ಅಪಾಯ ಸಂಭವಿಸುವ ಮೊದಲು ಇಲಾಖೆ ಕ್ರಮಕೈಗೊಳ್ಳುವಂತೆ ಆಗ್ರಹ ಕೇಳಿ ಬರುತ್ತಿದೆ.

ಮಾವಿನಕಟ್ಟೆ ಸರಕಾರಿ ಶಾಲೆಯಲ್ಲಿ 1ರಿಂದ 7ನೇ ತರಗತಿಯ ವರೆಗೆ 77 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಪ್ರಸ್ತುತ ಮಕ್ಕಳಿಗೆ ಬೇಕಾದಷ್ಟು ಸುಸಜ್ಜಿತವಾದ ಆರ್‌ಸಿಸಿ ಕಟ್ಟಡವಿದೆ. ಶಾಲೆಯ ಮುಂಭಾಗದಲ್ಲಿ ಹಳೆಯದಾದ ಕಟ್ಟಡವೊಂದಿದ್ದು, ಇಲಾಖೆಯ ಮಾಹಿತಿ ಪ್ರಕಾರ ಕಟ್ಟಡವನ್ನು ತೆರವು ಮಾಡುವುದಕ್ಕೆ ಪಂಚಾಯತ್‌ರಾಜ್‌ ವಿಭಾಗಕ್ಕೆ ಬರೆಯಲಾಗಿದೆ ಎಂದು ಶಾಲೆಯ ಮೂಲಗಳು ತಿಳಿಸಿದೆ.

ಶಾಲೆಯ ಇನ್ನೊಂದು ಹಳೆ ಕಟ್ಟಡವು ಶಿಥಿಲಾವಸ್ಥೆಗೆ ತಲುಪಿದ್ದು, ಅದನ್ನು ಈಗಾಗಲೇ ತೆರವು ಮಾಡಲಾಗಿದೆ. ಪ್ರಸ್ತುತ ಮುಂಭಾಗದಲ್ಲಿರುವ ಈ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ತೆರವು ಮಾಡದೇ ಇದ್ದರೆ ಕಟ್ಟಡದ ಸಾಮರ್ಥ್ಯವನ್ನು ಪರಿಶೀಲಿಸಿ ದುರಸ್ತಿಗಾದರೂ ಕ್ರಮಕೈಗೊಳ್ಳಬೇಕಿದೆ.

ಮಳೆ ನೀರು ಕಟ್ಟಡದ ಒಳಕ್ಕೆ
ಶಾಲಾ ಕಟ್ಟಡದ ಒಂದು ಬದಿಯ ಮೇಲ್ಛಾವಣಿ ಶಿಥಿಲಾವಸ್ಥೆಯಲ್ಲಿದ್ದು, ಮಕ್ಕಳ ಸುರಕ್ಷೆಯ ದೃಷ್ಟಿಯಿಂದ ಹಂಚು ತೆಗೆಯಲಾಗಿದೆ. ಪ್ರಸ್ತುತ ಮಳೆ ನೀರು ನೇರವಾಗಿ ಕಟ್ಟಡದ ಒಳ ಪ್ರವೇಶಿಸುತ್ತಿದ್ದು, ನೀರು ಅಡಿಪಾಯ ಒಳಗೆ ನುಗ್ಗಿ ಇಡೀ ಕಟ್ಟಡವೇ ಕುಸಿದು ಬೀಳುವ ಅಪಾಯವಿದೆ. ಹಂಚು ತೆಗೆದಿರುವ ಭಾಗದಲ್ಲಿ ಮೇಲ್ಛಾವಣಿಯ ಮರಮಟ್ಟು ತುಂಡಾದರೆ ಇಡೀ ಕಟ್ಟಡದ ಮೇಲ್ಛಾವಣಿ ಕೆಳಗೆ ಬೀಳಲಿದೆ.

ಕಟ್ಟಡದ ತೆರವಿಗೆ ಇಲಾಖೆ ನಿರ್ಧಾರ
ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬೇಕಾದಷ್ಟು ಸುಸಜ್ಜಿತ ಕಟ್ಟಡಗಳು ಇರುವುದರಿಂದ ಈ ಹಳೆಯ ಕಟ್ಟಡವನ್ನು ತೆರವು ಮಾಡುವುದಕ್ಕೆ ಇಲಾಖೆ ನಿರ್ಧರಿಸಿ ಈಗಾಗಲೇ ಸಂಬಂಧಪಟ್ಟ ಎಂಜಿನಿಯರಿಂಗ್‌ ವಿಭಾಗಕ್ಕೆ ಬರೆಯಲಾಗಿದೆ. ಇಲಾಖೆಯ ಆದೇಶದ ಬಳಿಕ ಕಟ್ಟಡ ತೆರವುಗೊಳ್ಳಲಿದೆ.
-ಯಶೋದಾ, ಮುಖ್ಯಶಿಕ್ಷಕರು, ಮಾವಿನಕಟ್ಟೆ ಸರಕಾರಿ ಶಾಲೆ.

ಈ ಕಟ್ಟಡವು ಮುಂಭಾಗದಲ್ಲಿದ್ದು, ಇತರ ಕಟ್ಟಡಗಳು ಹಿಂದೆ ಇರುವುದರಿಂದ ವಿದ್ಯಾರ್ಥಿಗಳು ಇದೇ ಕಟ್ಟಡದ ಮೂಲಕವೇ ಹಾದು ಹಿಂದಕ್ಕೆ ಹೋಗಬೇಕಿದೆ. ದುರ್ಘ‌ಟನೆಗಳು ವಿದ್ಯಾರ್ಥಿಗಳು ಇರುವಾಗ ಸಂಭವಿಸಿ ಅನಾಹುತ ಉಂಟಾದರೆ ಯಾರು ಹೊಣೆ. ಕಳೆದ ಆಗಸ್ಟ್‌ ತಿಂಗಳಲ್ಲಿ ಕಡಬ ತಾಲೂಕಿನ ಕುಂತೂರು ಸರಕಾರಿ ಶಾಲೆಯ ಕಟ್ಟಡ ಕುಸಿದು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆಯ ಬಳಿಕವೂ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಂತೆ ಕಂಡುಬರುತ್ತಿಲ್ಲ. ಈ ಶಾಲಾ ಕಟ್ಟಡದ ಅಂಚಿನಲ್ಲೇ ಏರು ರಸ್ತೆಯೊಂದು ಹಾದು ಹೋಗುತ್ತಿದ್ದು, ಜನ ಓಡಾಟದ ಸಂದರ್ಭ ಕಟ್ಟಡ ಕುಸಿದರೆ ಸಾರ್ವಜನಿಕರಿಗೂ ಅಪಾಯ ತಪ್ಪಿದ್ದಲ್ಲ

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

240 Km ಅಂತರದಲ್ಲಿ ಸೇನಾ ದಂಪತಿ ಆತ್ಮಹತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ಮಾಡುವಂತೆ ಪತ್ರ

240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Delhi Capitals Management Change

Delhi Capitals ಆಡಳಿತ ಬದಲಾವಣೆ: ಗಂಗೂಲಿ ಅಧಿಕಾರ ಕಡಿತ; ಪಂತ್‌ ಬಗ್ಗೆಯೂ ಹೊಸ ನಿರ್ಧಾರ

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Puttur: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾದ ಪಿಎಂ ಸ್ವನಿಧಿ ಯೋಜನೆ

3

Kadaba: ಐತ್ತೂರು ಅರಣ್ಯಾಧಿಕಾರಿಗಳಿಂದ ಒತ್ತುವರಿ ತೆರವು

2

Subrahmanya: ನೆಟ್ಟಣ ರೈಲು ನಿಲ್ದಾಣ; ಬಸ್‌ಗಾಗಿ ಕಾದು ಸುಸ್ತಾದ ಪ್ರಕರಣ

1(1)

Vitla: ಈ ಕಿಂಡಿ ಅಣೆಕಟ್ಟಲ್ಲಿ ನೀರೇ ನಿಲ್ಲುವುದಿಲ್ಲ, ಓಡಾಟಕ್ಕೂ ಭಯ!

Symoblic

Belthangady: ಬಾಲಕಿಗೆ ಕಿರುಕುಳ; ಪೋಕ್ಸೋ ಪ್ರಕರಣ ದಾಖಲು

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

240 Km ಅಂತರದಲ್ಲಿ ಸೇನಾ ದಂಪತಿ ಆತ್ಮಹತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ಮಾಡುವಂತೆ ಪತ್ರ

240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.