“ಸಾಮಾಜಿಕ ಸಮಸ್ಯೆ ಪರಿಹರಿಸಲು ಗರಿಷ್ಠ ಪ್ರಯತ್ನ’

2ನೇ ಹೆಚ್ಚುವರಿ ಸಿವಿಲ್‌, ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನೆ

Team Udayavani, May 28, 2019, 6:00 AM IST

w-13

ಪುತ್ತೂರು: ನ್ಯಾಯದ ನಿರೀಕ್ಷೆಯಲ್ಲಿ ಬರುವ ಜನರ ನಿರೀಕ್ಷೆಗೆ ಚ್ಯುತಿ ಬಾರದಂತೆ ನ್ಯಾಯ ಒದಗಿಸುವ ಜವಾಬ್ದಾರಿ ನ್ಯಾಯಾಲಯಕ್ಕಿದೆ. ನ್ಯಾಯಾಧೀಶರು ಮತ್ತು ವಕೀಲರು ಸೇರಿ ಸಮಾಜದ ಸಮಸ್ಯೆಗಳನ್ನು ಬಗೆಹರಿಸಲು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರುಡಾಲ್ಫ್ ಪಿರೇರಾ ಹೇಳಿದರು.

ನೂತನವಾಗಿ ಪುತ್ತೂರಿಗೆ ಮಂಜೂರಾದ ಎರಡನೇ ಹೆಚ್ಚುವರಿ ಸಿವಿಲ್‌ ಮತ್ತು ಜೆಎಂ ಎಫ್‌ಸಿ ನ್ಯಾಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪುತ್ತೂರಿನಲ್ಲಿ ಅಧಿಕಾರ ಸ್ವೀಕರಿಸಿದ ಅವರು 150 ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರಿನ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಣೆ ಅವಕಾಶ ಲಭಿಸಿರುವುದು ಖುಷಿ ನೀಡಿದೆ ಎಂದರು.

ಪಾರದರ್ಶಕ ನ್ಯಾಯ
ನ್ಯಾಯಾಧೀಶರು ಹಾಗೂ ನ್ಯಾಯವಾದಿ ಗಳು ಪರಸ್ಪರ ಸಹಕಾರ ಮನೋ ಭಾವದೊಂದಿಗೆ ಕೆಲಸ ನಿರ್ವಹಿಸುವ ಮೂಲಕ ನ್ಯಾಯಾಲಯ ವ್ಯವಸ್ಥೆಯ ಗೌರವ ಹೆಚ್ಚಿಸಬಹುದು. ಕ್ಲಪ್ತ ಹಾಗೂ ಪಾರದರ್ಶಕವಾಗಿ ನ್ಯಾಯ ಒದಗಿಸುವ ಆವಶ್ಯಕತೆ ಇಂದು ಇದೆ. ಕಲಿಕೆ ಎಂಬುದಕ್ಕೆ ಕೊನೆಯೇ ಇಲ್ಲದಿರುವುದರಿಂದ ಎಲ್ಲ ರಿಂದಲೂ ತಿಳಿದುಕೊಂಡು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಸಹಕಾರ ನಿರೀಕ್ಷೆ
ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾ ಧೀಶ ಮಂಜುನಾಥ್‌ ಮಾತನಾಡಿ, ನ್ಯಾಯಾಲಯ ವ್ಯವಸ್ಥೆಗೆ ಅಪಾರ ಗೌರವ ನೀಡುವ ಪುತ್ತೂರಿನಲ್ಲಿ ಕೆಲಸ ಮಾಡಲು ತುಂಬಾ ಖುಷಿ ಇದೆ. ವ್ಯವಸ್ಥೆಗೆ ತಪ್ಪಾಗುವಂತಹ ಯಾವುದೇ ಪ್ರಕರಣಗಳು ಇಲ್ಲಿ ನಡೆಯುವುದಿಲ್ಲ. ಇಂತಹ ಉತ್ತಮ ಸಹಕಾರವನ್ನು ಮುಂದೆಯೂ ನೀಡಬೇಕು ಎಂದು ವಿನಂತಿಸಿದರು.

ಕಲಾಪಕ್ಕೆ ಚಾಲನೆ
ಹಾಲಿ 5 ಕೋರ್ಟುಗಳಿರುವ ಪುತ್ತೂರಿಗೆ 6ನೇ ಕೋರ್ಟು ರೂಪದಲ್ಲಿ ಮಂಜೂರಾದ 2ನೇ ಹೆಚ್ಚುವರಿ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ವ್ಯವಸ್ಥೆಯನ್ನು ಮಿನಿ ವಿಧಾನಸೌಧದ ಬಳಿಯ ಮಧ್ಯಸ್ಥಿಕಾ ಕೇಂದ್ರದಲ್ಲಿ ನ್ಯಾಯಾಧೀಶ ರುಡಾಲ್ಫ್ ಪಿರೇರ ಅವರು ಉದ್ಘಾಟಿಸಿದರು. ಅನಂತರ ಆರಂಭಿಕ ನ್ಯಾಯಾಲಯ ಕಲಾಪಕ್ಕೆ ಚಾಲನೆ ನೀಡಲಾಯಿತು.

ಆನೆಮಜಲಿನಲ್ಲಿ ಕೋರ್ಟ್‌
ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ್‌ ಕೆ.ವಿ. ಸ್ವಾಗತಿಸಿ ಮಾತ ನಾಡಿ, 2016ರಲ್ಲಿ ನೂತನ ಕೋರ್ಟ್‌ಗೆ ನೋಟಿಫಿಕೇಶನ್‌ ಆಗಿತ್ತು ಎಂದು ತಿಳಿಸಿದರು. ಬೇಸಗೆ ರಜೆಯ ಸಂದರ್ಭ ಅನಿರೀಕ್ಷಿತವಾಗಿ ಮಂಜೂರಾತಿ ಲಭಿಸಿದೆ. ಮುಂದೆ ಬನ್ನೂರು ಆನೆಮಜಲಿನಲ್ಲಿ ನಿರ್ಮಾಣವಾಗುವ ನ್ಯಾಯಾಲಯ ಸಂಕೀರ್ಣದಲ್ಲಿ ಎಲ್ಲ ನ್ಯಾಯಾಲಯ ವ್ಯವಸ್ಥೆಗಳು ಒಂದೇ ಕಡೆ ಕಾರ್ಯನಿರ್ವಹಿಸಲಿವೆ ಎಂದರು.

ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶೆ ಲತಾದೇವಿ ಜಿ.ಎ., 1ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶ ಕಿಶನ್‌ ಬಿ. ಮಡಲಗಿ, ಪುತ್ತೂರು ವಕೀಲರ ಸಂಘದ ಪದಾಧಿಕಾರಿಗಳಾದ ಸುರೇಶ್‌ ರೈ, ಮಂಜುನಾಥ ಎನ್‌.ಎಸ್‌. ವೆಂಕಟೇಶ್‌ ಎನ್‌., ಮಮತಾ, ದಿವ್ಯರಾಜ್‌ ಹೆಗ್ಡೆ ಉಪಸ್ಥಿತರಿದ್ದರು.
ಪುತ್ತೂರು ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಭಾಸ್ಕರ ಕೋಡಿಂಬಾಳ ಕಾರ್ಯಕ್ರಮ ನಿರ್ವಹಿಸಿದರು. ವಕೀಲರ ಸಂಘದ ಸದಸ್ಯರು, ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

ನ್ಯಾಯಾಧೀಶರಿಗೆ ಸ್ವಾಗತ
ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ನೂತನವಾಗಿ ಆಗಮಿಸಿದ ರುಡಾಲ್ಫ್ ಪಿರೇರ ಹಾಗೂ ಎರಡನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾಗಿ ಆಗಮಿಸಿದ ವೆಂಕಟೇಶ ಎನ್‌. ಅವರನ್ನು ಸ್ವಾಗತಿಸಿ ಗೌರವಿಸಲಾಯಿತು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.