Mr. Corrupt; ಸಿದ್ದರಾಮಯ್ಯ ಮಿಸ್ಟರ್‌ ಕ್ಲೀನ್‌ ಅಲ್ಲ: ಸಿ.ಟಿ. ರವಿ


Team Udayavani, Oct 19, 2024, 12:42 AM IST

CT Ravi

ಬೆಳ್ತಂಗಡಿ: ಮೂಡ ಹಗರಣದ ಮೂಲಕ ರಾಜ್ಯದಲ್ಲಿ ಸಿದ್ದರಾಮಯ್ಯ ಮಿಸ್ಟರ್‌ ಕ್ಲೀನ್‌ ಅಲ್ಲ, ಮಿಸ್ಟರ್‌ ಕರಪ್ಟ್ ಎಂಬುದು ದಾಖಲೆ ಸಮೇತ ಬಹಿರಂಗವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಉಜಿರೆಯಲ್ಲಿ ಅ.18ರಂದು ನಡೆದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಭ್ರಷ್ಟಾಚಾರ ಮತ್ತು ಮತಾಂಧ‌ನ್ನು ಓಲೈಸುವ ಸರಕಾರವಾಗಿದೆ. ಮುಡಾ ಹಗರಣದಲ್ಲಿ ಕಾನೂನು ಕುಣಿಕೆ ಬಿಗಿಯಾಗುತ್ತಿದೆ ಎಂದು ಅರಿತು ಅಲ್ಲಿಂದ ಪಾರಾಗಲು ಯೋಚನೆ ಮಾಡಿ ಸಿದ್ದರಾಮಯ್ಯ ತಮ್ಮ ಪತ್ನಿ ಹೆಸರಲ್ಲಿದ್ದ ಸೈಟನ್ನು ಹಿಂದಿರುಗಿಸಿದ್ದಾರೆ. ಸರಕಾರ ಎಲ್ಲ ರಂಗದಲ್ಲೂ ವಿಫ‌ಲವಾಗುತ್ತಿದ್ದು, ಈಗ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲು ಹೊರಟಿದೆ ಎಂದರು.

ನಮ್ಮ ಅಭ್ಯರ್ಥಿ ಗೆಲುವು ನಿಶ್ಚಿತ
ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಕಿಶೋರ್‌ ಕುಮಾರ್‌ 2 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ. ಎರಡು ಜಿಲ್ಲೆಯಲ್ಲಿ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹೆಚ್ಚಿನ ಗ್ರಾ.ಪಂ. ಸದಸ್ಯರನ್ನು ಹೊಂದಿಲ್ಲ. ವಾಸ್ತವವಾಗಿ ಅವಿರೋಧ ಆಯ್ಕೆಗೆ ಅವಕಾಶ ಕೊಡಬೇಕಿತ್ತು ಎಂದರು.

ಸರಕಾರದ ವಿರುದ್ಧ ಹುಬ್ಬಳಿ ಚಲೋ ಹೋರಾಟ
ರಾಜ್ಯ ಸರಕಾರ ಮತಾಂಧರನ್ನು ಮತ್ತು ಪಾತಕಿಗಳನ್ನು ಬೆಂಬಲಿಸುವ ಸರಕಾರವಾಗಿದೆ. 8 ವರ್ಷಗಳ ಹಿಂದೆ ಪಿಎಫ್‌ಐ ಮತ್ತು ಎಸ್‌ಡಿಪಿಐ ಮೇಲಿನ 2000 ಹೆಚ್ಚು ಮೊಕದ್ದಮೆಗಳನ್ನ ಹಿಂಪಡೆದ ಪರಿಣಾಮ ರಾಜ್ಯದಲ್ಲಿ 21 ಹಿಂದೂ ಕಾರ್ಯಕರ್ತರ ಹತ್ಯೆಗೆ ಕಾರಣವಾಯಿತು. ಈಗ ಹುಬ್ಬಳ್ಳಿ ಪೊಲೀಸ್‌ ಠಾಣೆ ದಾಳಿ ಪ್ರಕರಣವನ್ನೂ ಹಿಂಪಡೆಯುವ ಕೆಟ್ಟ ಕೆಲಸವನ್ನು ಈ ಸರಕಾರ ಮಾಡಲು ಹೊರಟಿದೆ. ಇದರ ವಿರುದ್ಧ ಚುನಾವಣೆ ಮುಗಿದ ಕೂಡಲೇ ಹುಬ್ಬಳಿ ಚಲೋ ನಡೆಸಲಿದ್ದೇವೆ, ಜತೆಗೆ ನ್ಯಾಯಾಲಯದಲ್ಲೂ ಪ್ರಶ್ನೆ ಮಾಡಲಿದ್ದೇವೆ ಎಂದು ಹೇಳಿದರು.
ಚನ್ನಪಟ್ಟಣ ಅಭ್ಯರ್ಥಿ ವಿಚಾರ ಪ್ರಶ್ನೆಗೆ ಉತ್ತರಿಸಿದ ಅವರು ನಮ್ಮ ಪಕ್ಷದಿಂದ ಸಿ.ಪಿ.ಯೋಗೇಶ್ವರ್‌ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಶಿಗ್ಗಾವಿಯಲ್ಲಿ 16ಕ್ಕೂ ಹೆಚ್ಚು ಹಾಗೂ ಸಂಡೂರಿನಲ್ಲಿ ಐವರು ಆಕಾಂಕ್ಷಿಗಳಿದ್ದಾರೆ. ಕೇಂದ್ರ ಸಚಿವರು, ಜೆಡಿಎಸ್‌ ವರಿಷ್ಠ ನಾಯಕರಾದ ಎಚ್‌.ಡಿ.ಕುಮಾರ ಸ್ವಾಮಿ, ದೇವೇಗೌಡರೊಂದಿಗೆ ಚರ್ಚಿಸಿ ಕೇಂದ್ರದ ನಾಯಕರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

ಸಂಸದ ಬ್ರಿಜೇಶ್‌ ಚೌಟ, ಬಿಜೆಪಿ ಅಭ್ಯರ್ಥಿ ಕಿಶೋರ್‌ ಕುಮಾರ್‌, ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಶಾಸಕ ಹರೀಶ್‌ ಪೂಂಜ ಸಹಿತ ಜಿಲ್ಲೆ, ತಾಲೂಕಿನ ಸ್ಥಳೀಯ ಪ್ರಮುಖ ನಾಯಕರಿದ್ದರು.

ಟಾಪ್ ನ್ಯೂಸ್

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide (2)

Panja:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

police crime

Uppinangady; ಹುಟ್ಟು ಹಬ್ಬಕ್ಕಾಗಿ ಕಡವೆ ಹ*ತ್ಯೆ!: ಕೋವಿ, ಮಾಂಸ ವಶ

drowned

Subrahmanya: ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ

arrested

Sullia;ಮಹಿಳೆಯರ ಅವಹೇಳನ ಆರೋಪ: ಅರಣ್ಯಾಧಿಕಾರಿಯ ಬಂಧನ, ಬಿಡುಗಡೆ

Kota-1

Guarantee; ಗೃಹಲಕ್ಷ್ಮಿ ಆರ್ಥಿಕ ಸಂಕಷ್ಟ ಸರಿದೂಗಿಸಲು ಬಿಪಿಎಲ್‌ ಕಾರ್ಡ್‌ ರದ್ದು: ಕೋಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.