ಮುಕ್ಕೂರು: ಅಂಚೆ ಕಚೇರಿ ಸ್ಥಳಾಂತರ ವಿರುದ್ಧ ಸಭೆ


Team Udayavani, Jun 5, 2019, 6:00 AM IST

e-14

ಮುಕ್ಕೂರು: ಪೆರುವಾಜೆ ಗ್ರಾಮದ ಮುಕ್ಕೂರು ಅಂಚೆ ಕಚೇರಿಯನ್ನು ಗ್ರಾಹಕರಿಗೆ ಮಾಹಿತಿ ನೀಡದೆ ಏಕಾಏಕಿ ಸ್ಥಳಾಂತರಿಸಿದ್ದು, ಇದನ್ನು ಮತ್ತೆ ಮುಕ್ಕೂರಿನಲ್ಲಿ ಆರಂಭಿಸುವ ತನಕ ವಿರಮಿಸದೆ ಹೋರಾಟ ನಡೆಸಲು ಮುಕ್ಕೂರಿನಲ್ಲಿ ಮಂಗಳವಾರ ಸ್ಥಳಾಂತರ ವಿರೋಧಿಸಿ ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ ವತಿಯಿಂದ ನಡೆದ ಗ್ರಾಮಸ್ಥರ ಸಭೆಯಲ್ಲಿ ನಿರ್ಧರಿಸಲಾಯಿತು.

ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಮಾತನಾಡಿ, 55 ವರ್ಷಕ್ಕೂ ಅಧಿಕ ಕಾಲ ಮುಕ್ಕೂರಿನಲ್ಲಿದ್ದ ಅಂಚೆ ಕಚೇರಿಯನ್ನು ಗ್ರಾಹಕರಿಗೆ ಮಾಹಿತಿ ಕೊಡದೆ ಪೆರುವಾಜೆ ಗ್ರಾ.ಪಂ. ಕಟ್ಟಡಕ್ಕೆ ಸ್ಥಳಾಂತರಿಸಿದ್ದಾರೆ. ಇದಕ್ಕೆ ಇಲ್ಲಿನ ಗ್ರಾಮಸ್ಥರ ವಿರೋಧವಿದೆ. ಅಂಚೆ ಕಚೇರಿ ಪುನರಾರಂಭದ ತನಕ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದರು.

ಸೌಲಭ್ಯ ಕಸಿಯಲು ಹುನ್ನಾರ
ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ತಿರುಮಲೇಶ್ವರ ಭಟ್‌ ಕಾನಾವು ಮಾತನಾಡಿ, ಮುಕ್ಕೂರಿನಲ್ಲಿ ಇರುವ ಸೌಲಭ್ಯಗಳನ್ನು ಕಸಿದುಕೊಳ್ಳಲಾಗುತ್ತಿದೆ. ಹಿಂದೆ ಸೊಸೈಟಿ, ಈಗ ಅಂಚೆ ಕಚೇರಿ ಸ್ಥಳಾಂತರಿಸುವ ಮೂಲಕ ಊರನ್ನು ಸೌಲಭ್ಯ ರಹಿತವನ್ನಾಗಿ ಮಾಡುವ ಹುನ್ನಾರ ನಡೆಯುತ್ತಿದೆ. ಇದರ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ಮುಕ್ಕೂರಿನಲ್ಲಿ ಅಂಚೆ ಕಚೇರಿ ಮರು ಸ್ಥಾಪಿಸಬೇಕು ಎಂಬ ನಮ್ಮ ಬೇಡಿಕೆ ಈಡೇರಲೆಬೇಕು ಎಂದವರು ಆಗ್ರಹಿಸಿದರು.

ಉದ್ದೇಶಪೂರ್ವಕ ಸ್ಥಳಾಂತರ
ಪೆರುವಾಜೆ ಗ್ರಾ.ಪಂ. ಸದಸ್ಯ, ಹೋರಾಟ ಸಮಿತಿ ಅಧ್ಯಕ್ಷ ಉಮೇಶ್‌ ಕೆ.ಎಂ.ಬಿ. ಮಾತನಾಡಿ, ನಾನು ಈ ಭಾಗದ ಗ್ರಾ.ಪಂ. ಸದಸ್ಯನಾಗಿದ್ದು, ಅಂಚೆ ಕಚೇರಿಯನ್ನು ಪೆರುವಾಜೆ ಗ್ರಾ.ಪಂ. ಕಟ್ಟಡಕ್ಕೆ ಸ್ಥಳಾಂತರಿಸುವ ಬಗ್ಗೆ ನನಗೆ ಯಾರೂ ಮಾಹಿತಿ ನೀಡಿಲ್ಲ. ಉದ್ದೇಶಪೂರ್ವಕವಾಗಿಯೇ ದಿಢೀರ್‌ ಸ್ಥಳಾಂತರಿಸಲಾಗಿದೆ. ಈ ಬಗ್ಗೆ ಪುತ್ತೂರು ಅಂಚೆ ಕಚೇರಿಗೆ ನಿಯೋಗ ತೆರಳಿ ಮನವಿ ಮಾಡಲಾಗಿದೆ. ಸಂಸದರು ಮುಕ್ಕೂರಿನಲ್ಲಿ ಅಂಚೆ ಕಚೇರಿ ಮರು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶೀಘ್ರವಾಗಿ ಆರಂಭಿಸದಿದ್ದರೆ ಮುಂದೆ ಯಾವುದೇ ಹೋರಾಟಕ್ಕೆ ಸಿದ್ಧ ಎಂದರು.

ಸಭೆಯಲ್ಲಿ ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಗಣೇಶ ಶೆಟ್ಟಿ ಕುಂಜಾಡಿ, ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ ಗೌರವಾಧ್ಯಕ್ಷ ಗೋಪಾಲಕೃಷ್ಣ ಭಟ್‌ ಕಾನಾವು, ಕಾರ್ಯದರ್ಶಿ ಸತ್ಯಪ್ರಸಾದ್‌ ಕಂಡಿಪ್ಪಾಡಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಸುಧಾಕರ ರೈ ಕುಂಜಾಡಿ, ದಾಮೋದರ ಗೌಡ ಕಂಡಿಪ್ಪಾಡಿ, ಗುಡ್ಡಪ್ಪ ಗೌಡ ಅಡ್ಯತಕಂಡ, ಹೊನ್ನಪ್ಪ ಗೌಡ ಚಾಮುಂಡಿಮೂಲೆ, ರಮೇಶ್‌ ಕಾನಾವು, ಕುಶಾಲಪ್ಪ ಪೆರುವಾಜೆ, ಯಶವಂತ ಜಾಲು, ನಾರಾಯಣ ಕೊಂಡೆಪ್ಪಾಡಿ, ಸುಬ್ರಾಯ ಭಟ್‌ ನೀರ್ಕಜೆ, ಕುಂಞಣ್ಣ ನಾಯ್ಕ ಅಡ್ಯತಕಂಡ, ಇಬ್ರಾಹಿಂ ಮುಕ್ಕೂರು, ಸುಜಾತ ವಿ.ರಾಜ್‌ ಕಜೆ, ಜಯಂತ ಕುಂಡಡ್ಕ, ಗ್ರಾಮಸ್ಥರಾದ ಸುಬ್ರಹ್ಮಣ್ಯ ಒರುಂಕು, ಕುಸುಮಾಧರ ಪೂಜಾರಿ, ಯಾಕುಬ್‌ ಖಾನ್‌, ಜನಾರ್ದನ ಕಂಡಿಪ್ಪಾಡಿ, ಮಂಜುನಾಥ ಗೌಡ, ಚೆನ್ನಪ್ಪ ಗೌಡ ಉಪಸ್ಥಿತರಿದ್ದರು.

ಪ್ರತ್ಯೇಕ ಅಂಚೆ ಕಚೇರಿ ಸ್ಥಾಪಿಸಲಿ
ಅರ್ಧ ಶತಮಾನಕ್ಕೂ ಅಧಿಕ ಕಾಲ ಪೆರುವಾಜೆ ಗ್ರಾಮದ ಮುಕ್ಕೂರಿನಲ್ಲಿದ್ದ ಅಂಚೆ ಕಚೇರಿಯನ್ನು ಪೆರುವಾಜೆ ಗ್ರಾ.ಪಂ. ಕಟ್ಟಡಕ್ಕೆ ಸ್ಥಳಾಂತರಿಸಿರುವುದಕ್ಕೆ ಎಲ್ಲರ ವಿರೋಧವಿದೆ. ಪೆರುವಾಜೆಯಲ್ಲಿ ಹೊಸ ಅಂಚೆ ಕಚೇರಿ ತೆರಯಲಿ. ಅದಕ್ಕೆ ನಮ್ಮ ವಿರೋಧವಿಲ್ಲ. ಮುಕ್ಕೂರಿನಿಂದ ಸ್ಥಳಾಂತರಿಸಿರುವುದು ಈ ಊರನ್ನು ಮೂಲ ಸೌಲಭ್ಯ ರಹಿತವನ್ನಾಗಿಸಬೇಕು ಎನ್ನುವ ಷಡ್ಯಂತ್ರವಿದೆ ಎಂದು ಹೋರಾಟ ಸಮಿತಿ ಪದಾಧಿಕಾರಿಗಳು ಹೇಳಿದರು.

ನಿಯೋಗ ತೆರಳಲು ನಿರ್ಧಾರ
ಪುತ್ತೂರು ಅಂಚೆ ವಿಭಾಗದಲ್ಲಿ ಜೂ. 7ರಂದು ನಡೆಯಲಿರುವ ಅಂಚೆ ಅದಾಲತ್‌ನಲ್ಲಿ ಮುಕ್ಕೂರು ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ ವತಿಯಿಂದ ನಿಯೋಗ ತೆರಳಿ ಮುಕ್ಕೂರಿನಲ್ಲಿ ಅಂಚೆ ಕಚೇರಿ ಪುನರಾರಂಭಕ್ಕೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಮುಂದಿನ ಹೋರಾಟಕ್ಕಾಗಿ ಸಮಿತಿ ರಚಿಸಲಾಯಿತು.

ಟಾಪ್ ನ್ಯೂಸ್

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Bela1

Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ

Crime

Sulya: ವಾರಂಟ್‌ ಆರೋಪಿ ಪರಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.