ಮುಂಡೂರು: ಎಲ್‌.ಕೆ.ಜಿ., ಯು.ಕೆ.ಜಿ. ತರಗತಿ ಉದ್ಘಾಟನೆ


Team Udayavani, Jun 11, 2019, 5:50 AM IST

b-22

ನರಿಮೊಗರು: ಸರಕಾರಿ ಶಾಲೆಗಳು ಎಲ್ಲೂ ಮುಚ್ಚಲ್ಪಡಬಾರದು.ಅದನ್ನು ಉಳಿಸುವ ಕೆಲಸ ನಮ್ಮೆಲ್ಲ ರಿಂದ ಆಗಬೇಕು. ಸರಕಾರಿ ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಎದೆಗುಂದ ಬಾರದು. ಸರಕಾರಿ ಶಾಲೆಗಳ ಜತೆ ಜನಪ್ರತಿನಿಧಿಗಳು ಸದಾ ಇರುತ್ತೇವೆ ಎಂದು ತಾ.ಪಂ. ಸದಸ್ಯ ಶಿವರಂಜನ್‌ ಹೇಳಿದರು.

ಮುಂಡೂರು ಸ.ಉ.ಹಿ.ಪ್ರಾ. ಶಾಲೆ ಯಲ್ಲಿ ಎಲ್‌.ಕೆ.ಜಿ. ಹಾಗೂ ಯು.ಕೆ.ಜಿ. ತರಗತಿ “ಗುಬ್ಬಚ್ಚಿ ಕಲರವ’ ಉದ್ಘಾಟಿಸಿ ಅವರು ಮಾತನಾಡಿದರು. ಮುಂಡೂರಿನಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲು ಭಯಪಡುವ ಅಗತ್ಯವಿಲ್ಲ. ಇಲ್ಲಿ ಸಾಕಷ್ಟು ದಾನಿಗಳಿದ್ದಾರೆ. ಇಲ್ಲಿನ ಎಸ್‌ಡಿಎಂಸಿ ಅಧ್ಯಕ್ಷರೂ ಶಾಲೆಗಾಗಿ ಮುತುವರ್ಜಿ ವಹಿಸಿ ಕೆಲಸ ಮಾಡುತ್ತಿದ್ದಾರೆ. ಮುಂಡೂರು ಶಾಲೆಗೆ ನನ್ನಿಂದ ಸಾಧ್ಯವಾದಷ್ಟು ಅನುದಾನವನ್ನು ಒದಗಿಸಿದ್ದೇನೆ ಎಂದರು.

ಹೊಸ ಹೆಜ್ಜೆಯತ್ತ
ಕೆಯ್ಯೂರು ಪ್ರೌಢಶಾಲೆಯ ಮುಖ್ಯಗುರು ವಿನೋದ್‌ ಕುಮಾರ್‌ ಕೆ.ಎಸ್‌. ಮಾತನಾಡಿ, ಸರಕಾರಿ ಶಾಲೆಗಳು ಇದೀಗ ಹೊಸ ಹೆಜ್ಜೆ ಇಡುತ್ತಿರುವುದು ಖುಷಿಯ ವಿಚಾರ. ಸರಕಾರಿ ಶಾಲೆಗಳಲ್ಲಿ ಕೆಲವು ಕಡೆಗಳಲ್ಲಿ ಪಬ್ಲಿಕ್‌ ಸ್ಕೂಲ್‌ ಆರಂಭಗೊಂಡಿದೆ. ಎಲ್‌ಕೆಜಿ ಯುಕೆಜಿ ತರಗತಿಗಳೂ ಆರಂಭಗೊಳ್ಳುತ್ತಿರುವುದರಿಂದ ಮಕ್ಕಳಿಗೆ ವರದಾನವಾಗಿದೆ. ಮಕ್ಕಳ ಕಲಿಕಾ ವಿಚಾರಗಳ ಬಗ್ಗೆ ಪೋಷಕರು ಗಮನ ಕೊಡಬೇಕು ಎಂದರು.

ತಾಲೂಕು ಬಿಐಆರ್‌ಪಿ ತನುಜಾ, ನರಿಮೊಗರು ಸಿಆರ್‌ಪಿ ದೇವಪ್ಪ, ಮುಂಡೂರು ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷೆ ವೀಣಾ, ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುರೇಶ್‌ ಕಣ್ಣರಾಯ ಬನರಿ, ಶಾಲಾ ಮುಖ್ಯಗುರು ಶಶಿಕಲಾ ಉಪಸ್ಥಿತರಿದ್ದರು. ಪ್ರಮುಖರಾದ ಬಾಲಕೃಷ್ಣ ಕಣ್ಣರಾಯ, ವಾಸುದೇವ ಸಾಲ್ಯಾನ್‌ ಹಾಗೂ ಮಕ್ಕಳ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಖ್ಯಗುರು ಶಶಿಕಲಾ ಸ್ವಾಗತಿಸಿ, ಶಿಕ್ಷಕಿ ಸಂಧ್ಯಾ ವಂದಿಸಿ, ಶಿಕ್ಷಕ ರವೀಂದ್ರ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ರಾಮಚಂದ್ರ, ವನಿತಾ, ನಾಗವೇಣಿ, ಶಶಿಕಲಾ ಹಾಗೂ ಶಕುಂತಳಾ ಮತ್ತು ಹರ್ಷಿತಾ ಸಹಕರಿಸಿದರು.

ಸ್ಪರ್ಧಾತ್ಮಕ ಶಿಕ್ಷಣಕ್ಕೆ ಆದ್ಯತೆ
ಗ್ರಾಮೀಣ ಭಾಗದ ಮಕ್ಕಳಿಗೆ ಸರಕಾರಿ ಶಾಲೆಯಲ್ಲೇ ಎಲ್‌ಕೆಜಿ ಯುಕೆಜಿ ತರಗತಿಗಳನ್ನೊಳಗೊಂಡ ಗುಣಮಟ್ಟದ ಶಿಕ್ಷಣ ದೊರಕಿಸುವ ಹಾಗೂ ಸ್ಪರ್ಧಾತ್ಮಕ ಶಿಕ್ಷಣ ನೀಡುವ ಉದ್ದೇಶದೊಂದಿಗೆ ಮುಂಡೂರು ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಿದ್ದೇವೆ. ಎಸ್‌ಡಿಎಂಸಿ, ಹೆತ್ತವರು ಹಾಗೂ ಊರ ದಾನಿಗಳ ಸಹಕಾರದೊಂದಿಗೆ ಇಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಪ್ರಾರಂಭಿಸಲಾಗಿದ್ದು, ಈಗಾಗಲೇ 15 ಮಕ್ಕಳು ದಾಖಲಾತಿ ಮಾಡಿಕೊಂಡಿದ್ದಾರೆ.
– ರಮೇಶ್‌ ಗೌಡ ಪಜಿಮಣ್ಣು, ಅಧ್ಯಕ್ಷರು, ಎಸ್‌ಡಿಎಂಸಿ, ಮುಂಡೂರು ಶಾಲೆ

ಟಾಪ್ ನ್ಯೂಸ್

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.