ಸ್ವಚ್ಛ ಸರ್ವೇಕ್ಷಣೆ ಸ್ಪರ್ಧೆಯಲ್ಲಿ ನಗರಸಭೆ


Team Udayavani, Apr 26, 2022, 9:41 AM IST

puttur

ಪುತ್ತೂರು: ರಾಷ್ಟ್ರಮಟ್ಟದಲ್ಲಿ ಸ್ವಚ್ಛ ಸರ್ವೇಕ್ಷಣ ಅಭಿಯಾನ ನಡೆಯುತ್ತಿದ್ದು 2021-22ನೇ ಸಾಲಿನ ಪ್ರಶಸ್ತಿಗಾಗಿ ಪ.ಪಂ., ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಸೇರಿದಂತೆ ಪೌರಾಡಳಿತ ಸಂಸ್ಥೆಗಳು ಈ ಸ್ಪರ್ಧೆಯಲ್ಲಿ ಭಾಗವಹಿಸುತಿದ್ದು ಪುತ್ತೂರು ನಗರಸಭೆಯು ಅಖಾಡದಲ್ಲಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರ ಖಾತೆ ಸಚಿವಾಲಯದ ನೇತೃತ್ವದಲ್ಲಿ ಈ ಸ್ಪರ್ಧೆ ಆಯೋಜನೆಗೊಂಡಿದೆ. ಈ ತನಕದ ಅಂಕಿ ಅಂಶದಲ್ಲಿ ದ.ಕ.ಜಿಲ್ಲೆಯಲ್ಲಿ ಪುತ್ತೂರು ನಗರಸಭೆ ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ಎರಡನೇ ಸ್ಥಾನ ಕಾಯ್ದುಕೊಂಡಿದೆ. ಜನಮತ ಸಂಗ್ರಹದಲ್ಲಿ ಮಂಗಳೂರು ಮುಂಚೂಣಿಯಲ್ಲಿದ್ದು ಈ ಬಾರಿ ಪುತ್ತೂರಿಗೆ ಸ್ವಚ್ಛ ಸರ್ವೇಕ್ಷಣ-2022 ಪ್ರಶಸ್ತಿ ದೊರೆಯುವ ಬಗ್ಗೆ ನಿರೀಕ್ಷೆ ಹೊಂದಲಾಗಿದೆ.

ಅಭಿಯಾನದ ರೂಪ

ಸ್ವಚ್ಛ ಸರ್ವೇಕ್ಷಣೆ ಎಂಬುದು ವರ್ಷವಿಡೀ ನಡೆಯುವ ದಾಖಲೀಕರಣ. ಪ್ರತೀ ತಿಂಗಳು ಸರಕಾರ ಪೌರಾಡಳಿತ ಸಂಸ್ಥೆಗಳಿಂದ ಆನ್‌ ಲೈನ್ ವರದಿ ಪಡೆದುಕೊಳ್ಳುತ್ತದೆ. ಘನತ್ಯಾಜ್ಯ ವಿಲೇವಾರಿ, ಸಂಸ್ಕರಣೆ, ಪ್ಲಾಸ್ಟಿಕ್‌ ನಿರ್ಮೂಲನೆ, ಕಾರ್ಯಕ್ರಮದ ವಿವರ ಪಡೆಯಲಾಗುತ್ತದೆ. ಜಾಗೃತಿ ಈ ವರದಿಯ ಹೊರತಾಗಿಯೂ ಸರಕಾರದ ಏಜೆನ್ಸಿಯಿಂದ ಪ್ರತ್ಯೇಕ ಕ್ಷೇತ್ರ ಕಾರ್ಯ ನಡೆಯುತ್ತದೆ. ಡಂಪಿಂಗ್‌ ಯಾರ್ಡ್‌, ತ್ಯಾಜ್ಯ ಸಂಗ್ರಹ, ತ್ಯಾಜ್ಯ ಸಂಸ್ಕರಣೆ, ಪ್ಲಾಸ್ಟಿಕ್‌ ನಿರ್ಮೂಲನೆ ಇತ್ಯಾದಿಗಳನ್ನು ಅಧ್ಯಯನ ಮಾಡಿ ಸರಕಾರಕ್ಕೆ ವರದಿ ಸಲ್ಲಿಸಲಿದೆ.

ಜನಮತ ಸಂಗ್ರಹ

ಸಾರ್ವಜನಿಕರು ವೆಬ್‌ಸೈಟ್‌ ಪ್ರವೇಶಿಸಿ ಪುತ್ತೂರಿನ ಪ್ರಗತಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಪ್ರಾಮಾಣಿಕ ಉತ್ತರ ದಾಖಲಿಸಬಹುದು. ವೆಬ್‌ಸೈಟ್‌ನ ಆನ್‌ಲೈನ್‌ ಲಿಂಕ್‌ಗಳು, ಕ್ಯೂಆರ್‌ ಕೋಡ್‌ ಇದ್ದು ಸಾರ್ವಜನಿಕರು ಇದನ್ನು ಬಳಸಿ ಉತ್ತರ ದಾಖಲಿಸಲ ಅವಕಾಶ ಕಲ್ಪಿಸಲಾಗಿದೆ.

https://ss-cf.sbmurban. org/#/feedback ಇದು ವೆಬ್‌ ಸೈಟ್‌ ಆಗಿದೆ. ಮಾಸಿಕ ವರದಿ, ಕ್ಷೇತ್ರ ಕಾರ್ಯದ ವರದಿ ಮತ್ತು ಸಿಟಿಜನ್‌ ಫೀಡ್‌ಬ್ಯಾಕ್‌ ಈ ಮೂರು ಅಂಶಗಳನ್ನು ಕ್ರೋಢೀಕರಿಸಿದ ಬಳಿಕ ಕೇಂದ್ರ ಸರಕಾರ ಪ್ರಶಸ್ತಿ ಘೋಷಿಸಲಿದೆ.

ಪ್ರಶ್ನಾವಳಿಗಳಿಗೆ ಉತ್ತರಿಸಿ

ಕ್ಯೂಆರ್‌ ಕೋಡ್‌ಗೆ ಮೊಬೈಲ್‌ ಕೆಮರಾದ ಮೂಲಕ ವೆಬ್‌ ಪೇಜ್‌ ತೆರೆದುಕೊಳ್ಳುತ್ತದೆ. ಇದರಲ್ಲಿ ರಾಜ್ಯ, ಜಿಲ್ಲೆ ಪೌರಾಡಳಿತ ಸಂಸ್ಥೆ ಆಯ್ಕೆ ಮಾಡಿಕೊಂಡು ಬಳಿಕ ಸ್ವವಿವರ ದಾಖಲಿಸಿ, ಪ್ರಶ್ನಾವಳಿಗಳಿಗೆ ಉತ್ತರಿಸಿ, ಒಟಿಪಿ ನಮೂದಿಸಬೇಕು. ಅಲ್ಲಿಗೆ ಸಿಟಿಜನ್‌ ಫೀಡ್‌ಬ್ಯಾಕ್‌ ಪೂರ್ಣಗೊಳ್ಳುತ್ತದೆ. ವೋಟಿಂಗ್‌ ಮಾಡಲು ಎ.30 ಕೊನೆಯ ದಿನವಾಗಿದೆ.

ಅಭಿಪ್ರಾಯ ದಾಖಲಿಸಬಹುದು

ಸ್ವಚ್ಛ ಪುತ್ತೂರು ನಿರ್ಮಾಣಕ್ಕಾಗಿ ನಗರಸಭೆ ಮೂಲಕ ಹಲವು ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ಸಾರ್ವಜನಿಕರ ಸಹಕಾರವು ಅತ್ಯಗತ್ಯ. ಈಗಾಗಲೇ ಶಾಶ್ವತ ಕ್ರಮಗಳ ಅನುಷ್ಠಾನ ಪ್ರಕ್ರಿಯೆ ಕೂಡ ಪ್ರಗತಿಯಲ್ಲಿದೆ. ಸ್ವಚ್ಛ ಸರ್ವೇಕ್ಷಣ ಮೂಲಕ ಜನರಿಗೆ ಅಭಿಪ್ರಾಯ ದಾಖಲಿಸಬಹುದು. – ಜೀವಂಧರ್‌ ಜೈನ್‌, ಅಧ್ಯಕ್ಷ, ನಗರಸಭೆ ಪುತ್ತೂರು

ದ್ವಿತೀಯ ಸ್ಥಾನದಲ್ಲಿದೆ

ಸ್ವಚ್ಛ ಸರ್ವೇಕ್ಷಣ 2022 ರ ಆಯ್ಕೆಗಾಗಿ ನಗರದಲ್ಲಿ ಆನ್‌ಲೈನ್‌ ಜನಮತ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ. ಅದಕ್ಕಾಗಿ ಕ್ಯೂಆರ್‌ ಕೋಡ್‌ ಕೂಡ ಇದೆ. ಕೆಲವು ದಿನಗಳ ಹಿಂದಿನ ಅಂಕಿ ಅಂಶದ ಪ್ರಕಾರ ಪುತ್ತೂರು ನಗರಸಭೆ ದ್ವಿತೀಯ ಸ್ಥಾನದಲ್ಲಿದೆ. ಎ.30 ರ ತನಕ ವೋಟಿಂಗ್‌ ಮಾಡಲು ಅವಕಾಶ ಇದೆ. – ಮಧು ಎಸ್‌. ಮನೋಹರ್‌, ಪೌರಾಯುಕ್ತ ನಗರಸಭೆ ಪುತ್ತೂರು

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Untitled-1

Uppinangady ವಿವಾಹಿತೆ ನಾಪತ್ತೆ: ದೂರು ದಾಖಲು

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.