![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 4, 2024, 11:01 PM IST
ಪುಂಜಾಲಕಟ್ಟೆ: ಆಟೋ ರಿಕ್ಷಾ ಚಾಲಕರೋರ್ವರು ಬುಧವಾರ ರಾತ್ರಿಯಿಂದ ನಿಗೂಢವಾಗಿ ನಾಪತ್ತೆ ಯಾಗಿದ್ದು, ಗುರುವಾರ ಅವರ ರಿಕ್ಷಾವು ಅಡ್ಡೂರು-ಪೊಳಲಿ ಸೇತುವೆಯಲ್ಲಿ ಚಾಲನೆ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ನೇಲ್ಯಕುಮೇರ್ ಬಾಬು ಪೂಜಾರಿ ಅವರ ಪುತ್ರ ಗಿರೀಶ್ (37) ಕಾಣೆಯಾದವರು. ಈ ಬಗ್ಗೆ ಪತ್ನಿ ತಾರಾ ಗುರುವಾರ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಗಿರೀಶ್ ಎಣ್ಮೂರು ಶ್ರೀ ನಾಗಬ್ರಹ್ಮ ದೈವಸ್ಥಾನದ ಬೈದರ್ಕಳ ಗರಡಿಯಲ್ಲಿ ಕೋಟಿಯ ದರ್ಶನಪಾತ್ರಿ ಯಾಗಿಯೂ ಆಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ.
ಬಜಪೆ ವಿಮಾನ ನಿಲ್ದಾಣಕ್ಕೆ ಬಾಡಿಗೆ ಇದೆ ಎಂದು ಹೇಳಿ ತಡರಾತ್ರಿ ಎರಡು ಗಂಟೆಯ ಹೊತ್ತಿಗೆ ಗಿರೀಶ್ ರಿಕ್ಷಾದಲ್ಲಿ ಹೊರಟವರು ಬಳಿಕ ನಾಪತ್ತೆಯಾಗಿದ್ದಾರೆ. ಇದೇ ವೇಳೆ ಇಲ್ಲಿಗಾಗಮಿಸಿದ ರಾತ್ರಿ ಗಸ್ತಿ ನಲ್ಲಿದ್ದ ಬಜಪೆ ಪೊಲೀಸರು ಅನುಮಾನಾಸ್ಪದ ವಾಗಿ ಎಂಜಿನ್ ಚಾಲನೆಯಲ್ಲೇ ನಿಂತಿದ್ದ ರಿಕ್ಷಾವನ್ನು ಪರಿಶೀಲಿಸಿದರು. ಪರಿಸರದಲ್ಲಿ ಹುಡುಕಿದರೂ ಚಾಲಕನ ಪತ್ತೆಯಾಗಲಿಲ್ಲ, ಬಳಿಕ ರಿಕ್ಷಾದಲ್ಲಿ ದೊರೆತ ದಾಖಲೆಪತ್ರದ ಆಧಾರದಲ್ಲಿ ಅವರ ಮನೆಗೆ ಮಾಹಿತಿ ನೀಡಿದರು.
ಶೋಧ ಕಾರ್ಯಾಚರಣೆ
ಗುರುವಾರ ಬೆಳಗ್ಗಿನಿಂದ ಅಗ್ನಿ ಶಾಮಕ ದಳದ ಸಿಬಂದಿ ಪೊಲೀಸರು ಹಾಗೂ ಸ್ಥಳೀಯರ ಸಹಕಾರದಲ್ಲಿ ಪೊಳಲಿಯ ಫಲ್ಗುಣಿ ನದಿ ಸಹಿತ ವಿವಿಧೆಡೆ ಶೋಧ ನಡೆಸಿದರು. ಸಂಜೆಯವರೆಗೂ ಗಿರೀಶ್ ಸುಳಿವು ಪತ್ತೆಯಾಗಿಲ್ಲ. ಗುರುವಾರ ಬೆಳಗ್ಗಿನ ಜಾವ ಗಿರೀಶ್ನ ಸಹೋದರಿಯ ಮೊಬೈಲಿಗೆ ಪೊಳಲಿ ಸೇತುವೆಯಲ್ಲಿ ಗಿರೀಶ್ ಆಟೋ ರಿಕ್ಷಾ ಪತ್ತೆಯಾದ ಬಗ್ಗೆ ಕರೆ ಬಂದಿತ್ತು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಿರೀಶ್ ಅವರಿಗಾಗಿ ಹುಡುಕಾಟ ಮುಂದುವರಿದಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.