ನಂದಾವರದಲ್ಲಿ ಎನ್‌ಐಎ ದಾಳಿ ಪ್ರಕರಣ: ತಡರಾತ್ರಿವರೆಗೂ ತನಿಖೆ


Team Udayavani, Mar 7, 2023, 7:10 AM IST

ನಂದಾವರದಲ್ಲಿ ಎನ್‌ಐಎ ದಾಳಿ ಪ್ರಕರಣ: ತಡರಾತ್ರಿವರೆಗೂ ತನಿಖೆ

ಬಂಟ್ವಾಳ: ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ತಂಡವು ಮಾ. 5ರಂದು ನಂದಾವರದ ನಾಲ್ಕೈದು ಮನೆಗಳಿಗೆ ದಾಳಿ ನಡೆಸಿದ್ದು, ನಾಲ್ವರನ್ನು ವಶಕ್ಕೆ ಪಡೆದು ತಡರಾತ್ರಿಯ ವರೆಗೂ ತೀವ್ರ ಸ್ವರೂಪದ ತನಿಖೆ ನಡೆಸಿ, ನಗದು ಸಹಿತ ಕೆಲವು ಸೊತ್ತುಗಳನ್ನು ವಶಪಡಿಸಿಕೊಂಡಿದೆ.

ಬಿಹಾರದ ಪಟ್ನಾದಲ್ಲಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಬಾಂಬ್‌ ಇರಿ ಸಿದ ಆರೋಪಕ್ಕೆ ಸಂಬಂಧಿಸಿ ಬಂಧಿತ ರಾಗಿರು ವವರಿಗೆ ಹಣಕಾಸಿನ ನೆರವು ಒದಗಿಸಿದ್ದಾರೆ ಎಂಬ ಆರೋಪದಲ್ಲಿ ಈ ದಾಳಿ ನಡೆದಿದ್ದು, ನಂದಾವರದ ಒಬ್ಟಾತ ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದಾನೆ. ಉಳಿದವರು ಆತನಿಗೆ ನೆರವಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಂದಾವರ ಭಾಗಕ್ಕೆ ಸಂಜೆಯ ವೇಳೆಗೆ ಪೊಲೀಸ್‌ ವಾಹನಗಳು ತೆರಳಿದ್ದವಾದರೂ ಎನ್‌ಐಎ ಅಧಿಕಾರಿಗಳು ಆರೋಪಿಗಳನ್ನು ಅದಕ್ಕೂ ಮೊದಲೇ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದರು. ನಂದಾವರ ನಿವಾಸಿ ಮಹಮ್ಮದ್‌ ಸಿನಾನ್‌, ಇಕ್ಬಾಲ್‌, ಸರ್ಪಾಜ್‌ ನವಾಜ್‌, ನೌಫಲ್‌ನನ್ನು ವಶಕ್ಕೆ ಪಡೆದು ಬಂಟ್ವಾಳ ನಿರೀಕ್ಷಣ ಮಂದಿರದಲ್ಲಿ ತಡರಾತ್ರಿ 12ರ ವರೆಗೂ ವಿಚಾರಣೆ ನಡೆಸಲಾಗಿತ್ತು.

ಆರೋಪಿಗಳನ್ನು ಅಧಿಕಾರಿಗಳು ತಮ್ಮ ವಶದಲ್ಲಿಯೇ ಇರಿಸಿಕೊಂಡಿದ್ದಾರೆಯೇ ಅಥವಾ ಮನೆಗೆ ಕಳು ಹಿಸಿ ದ್ದಾರೆಯೇ ಎಂಬ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಆರೋಪಿಗಳ ಮನೆಯಿಂದ 2 ಮೊಬೈಲ್‌, 2 ಡಿವಿಆರ್‌ ಹಾಗೂ 1.50 ಲಕ್ಷ ರೂ. ವಶಪಡಿಸಿಕೊಂಡಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿದೆ.

ಸೋಮವಾರ ಬೆಳಗ್ಗೆ ಬಿ.ಸಿ. ರೋಡಿನಲ್ಲಿರುವ ಬಂಟ್ವಾಳ ತಾಲೂಕು ಕಚೇರಿಯ ಮುಂಭಾಗದಲ್ಲಿ 2 ಕೆಎಸ್‌ಆರ್‌ಪಿ ಬಸ್‌ಗಳು ನಿಂತಿದ್ದು, ಆರೋಪಿಗಳನ್ನು ಮಹಜರಿಗೆ ತಹಶೀಲ್ದಾರ್‌ ಬಳಿಗೆ ಕರೆದುಕೊಂಡು ಬರುವ ಸಂಶಯ ಹುಟ್ಟಿಕೊಂಡಿತ್ತು. ಆದರೆ ತಾಲೂಕು ಕಚೇರಿಗೆ ಯಾವುದೇ ಆರೋಪಿಯನ್ನು ಕರೆತರದೇ ಇರುವುದರಿಂದ ವಶಕ್ಕೆ ಪಡೆದಿರುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.ರಿಯಾಜ್‌ ಫರಂಗಿಪೇಟೆ ವಿಚಾರಣೆ ನಡೆಸಿತ್ತು

2022ರ ಸೆ. 8ರಂದು ಬಿಹಾರದಲ್ಲಿ ನಡೆದ ಘಟನೆಗೆ ಸಂಬಂಧಿಸಿ ಎಸ್‌ಡಿಪಿಐ ಮುಖಂಡ ರಿಯಾಜ್‌ ಫರಂಗಿಪೇಟೆ ಅವರ ಬಿ.ಸಿ. ರೋಡಿನ ಪರ್ಲಿಯಾದಲ್ಲಿರುವ ಮನೆಗೆ ಎನ್‌ಐಎ ತಂಡ ದಾಳಿ ನಡೆಸಿ ವಿಚಾರಣೆ ನಡೆಸಿತ್ತು. ಈ ವೇಳೆ ರಿಯಾಜ್‌ ಅವರನ್ನು ವಶಕ್ಕೆ ಪಡೆಯದೆ, ಮೊಬೈಲ್‌ ಫೋನ್‌ಗಳು ಹಾಗೂ ಪಕ್ಷಕ್ಕೆ ಸಂಬಂಧಿಸಿ ಕೆಲವು ಕರಪತ್ರಗಳನ್ನು ತೆಗೆದುಕೊಂಡು ಹೋಗಿದ್ದರು.

ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್‌ ಫರಂಗಿಪೇಟೆ ಪಕ್ಷದ ಬಿಹಾರ ಉಸ್ತುವಾರಿಯಾಗಿದ್ದ ವೇಳೆ ಬಿಹಾರ ಪ್ರಕರಣದ ಓರ್ವ ಬಂಧಿತ ಆರೋಪಿ ಅಥಾರ್‌ ಪರ್ವೇಜ್‌ನನ್ನು ಭೇಟಿಯಾಗಿದ್ದ ಹಿನ್ನೆಲೆ ಯಲ್ಲಿ ವಿಚಾರಣೆ ನಡೆಸಲಾಗಿತ್ತು. ಪರ್ವೇಜ್‌ ಎಸ್‌ಡಿಪಿಐ ಪಕ್ಷದ ಪಟ್ನಾ ಜಿಲ್ಲೆಯ ಪ್ರಧಾನ ಕಾರ್ಯ ದರ್ಶಿಯಾಗಿರುವುದರಿಂದ ಆತನನ್ನು ಭೇಟಿಯಾಗಿದ್ದೆ ಎಂದು ರಿಯಾಜ್‌ ಅಧಿಕಾರಿಗಳಿಗೆ ತಿಳಿಸಿದ್ದರು.

ಮತ್ತೆ ಈ ಪ್ರಕರಣ ಬಂಟ್ವಾಳದತ್ತ ಮುಖ ಮಾಡಿದ್ದು, ನಂದಾವರ ಆರೋಪಿಗಳು ಎಲ್ಲಿಂದ ಹಣ ವರ್ಗಾಯಿಸುತ್ತಿದ್ದರು, ಅವರಿಗೆ ಹಣಕಾಸಿನ ನೆರವು ಒದಗಿಸಿದವರು ಯಾರು ಎಂಬ ಸತ್ಯಾಂಶ ಹೊರಬೀಳಬೇಕಿದೆ.

ಎನ್‌ಐಎ ವ್ಯವಸ್ಥಿತ ಕಾರ್ಯಾಚರಣೆ
ಆರೋಪಿಗಳಿಗೆ ದುಬಾೖಯ ವ್ಯಕ್ತಿಯ ಜತೆ ಸಂಪರ್ಕ ಇತ್ತು ಎನ್ನಲಾಗಿದ್ದು, ಕೋಟ್ಯಂತರ ರೂ. ವರ್ಗಾವಣೆಯಾಗಿದೆ ಎನ್ನಲಾಗುತ್ತಿದ್ದರೂ ಅದರ ನಿಖರ ಮೌಲ್ಯ ಎಷ್ಟು? ಅದು ಎಲ್ಲಿಂದ ಬರುತ್ತಿತ್ತು? ಎಂಬುದು ಇನ್ನೂ ಸ್ಪಷ್ಟಗೊಂಡಿಲ್ಲ. ನಿರ್ದಿಷ್ಟವಾಗಿ ಯಾರ ಖಾತೆಗೆ ವರ್ಗಾವಣೆಯಾಗಿದೆ ಎಂಬುದೂ ಗೊತ್ತಾಗಿಲ್ಲ. ಯಾವುದೇ ಸುಳಿವು ನಾಶವಾಗದಂತೆ ಮತ್ತು ಸೋರಿಕೆಯಾಗದಂತೆ ಎನ್‌ಐಎ ತಂಡ ತನ್ನ ಕಾರ್ಯಾಚರಣೆಯನ್ನು ಗೌಪ್ಯವಾಗಿಯೇ ನಡೆಸಿದ್ದು, ಪ್ರಕರಣ ತನಿಖಾ ಹಂತದಲ್ಲಿದೆ.

ಎನ್‌ಐಎ ತಂಡವು ಮೆಲ್ಕಾರ್‌ ಹಾಗೂ ಪಾಣೆಮಂಗಳೂರಿನ ಸೈಬರ್‌ಗಳಿಗೂ ದಾಳಿ ನಡೆಸಿದೆ ಎನ್ನಲಾಗಿದ್ದರೂ ಖಚಿತಗೊಂಡಿಲ್ಲ. ಎನ್‌ಐಎ ಅಧಿಕಾರಿಗಳು ದಾಳಿಯ ವೇಳೆ ಭದ್ರತೆಯ ದೃಷ್ಟಿಯಿಂದ ಸ್ಥಳೀಯ ಪೊಲೀಸರ ನೆರವನ್ನೂ ಪಡೆದುಕೊಂಡಿದ್ದು, ತಾಲೂಕು ಕಚೇರಿಗೂ ಮಾಹಿತಿ ನೀಡಿದ್ದರು. ಆದರೆ ರವಿವಾರ ರಜಾ ದಿನವಾದ ಕಾರಣ ತಾಲೂಕು ಕಚೇರಿಯ ಅಧಿಕಾರಿಗಳು ಪೊಲೀಸ್‌ ಸಂಪರ್ಕಕ್ಕೆ ಸಿಕ್ಕಿರಲಿಲ್ಲ.

ಇರ್ದೆ ವ್ಯಕ್ತಿಯ ತೀವ್ರ ವಿಚಾರಣೆ
ಪುತ್ತೂರು: ಪಟ್ನಾ ಬಾಂಬ್‌ ಪ್ರಕರಣದ ಆರೋಪಿಗಳಿಗೆ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿ ರವಿವಾರ ರಾತ್ರಿ ಪುತ್ತೂರಿನ ಇರ್ದೆಯಲ್ಲಿ ಬಂಧಿತನಾಗಿರುವ ರಫೀಕ್‌ನನ್ನು ಎನ್‌ಐಎ ತೀವ್ರ ವಿಚಾರಣೆಗೆ ಗುರಿಪಡಿಸಿರುವ ಮಾಹಿತಿ ಲಭ್ಯವಾಗಿದೆ.

ಆತನ ಬ್ಯಾಂಕ್‌ ಖಾತೆಯಿಂದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ಮಾಹಿತಿ ಕಲೆ ಹಾಕಿರುವ ಎನ್‌ಎಐ ಹಣದ ಮೂಲದ ಬಗ್ಗೆ ತನಿಖೆ ಕೈಗೆತ್ತಿಕೊಂಡಿದೆ. ಸ್ಥಳೀಯ ಮಾಹಿತಿ ಪ್ರಕಾರ ಆರೋಪಿಯ ಆರ್ಥಿಕ ಸ್ಥಿತಿ ಸಾಧಾರಣವಾಗಿದ್ದು, ಪ್ರಸ್ತುತ ಹೊಸ ಮನೆ ನಿರ್ಮಾಣ ಹಂತದಲ್ಲಿದೆ. ಈತ ಕೆಲವು ವರ್ಷ ವಿದೇಶದಲ್ಲಿ ಕೆಲಸ ಮಾಡಿದ್ದ ಎನ್ನುವ ಮಾಹಿತಿ ಇದೆ.

ಈತ ಹವಾಲಾ ದಂಧೆಯಲ್ಲಿ ತೊಡಗಿರುವ ಶಂಕೆ ಇದೆ. ಕೊಬ್ಬರಿ ವ್ಯಾಪಾರಿಯಾಗಿ ಗುರುತಿಸಿಕೊಂಡಿದ್ದ ಈತನ ಖಾತೆಯ ಮೂಲಕ ಬೇರೆಯವರು ಹಣ ವರ್ಗಾಯಿಸಿ ಈತನಿಗೆ ಕಮಿಷನ್‌ ಪಾವತಿಸಿರ ಲೂಬಹುದು, ಹಣದ ಆಸೆಗೆ ಈ ಕೃತ್ಯದಲ್ಲಿ ಭಾಗಿಯಾಗಿರುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.

ಪಟ್ನಾ ಪ್ರಕರಣವಲ್ಲದೆ ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಗಳಿಗೂ ಹಣದ ನೆರವು ಅಥವಾ ಆಶ್ರಯ ನೀಡುವಲ್ಲಿ ಈತ ಸಹಕಾರ ನೀಡಿದ್ದಾನೆಯೇ ಎನ್ನುವ ನಿಟ್ಟಿನಲ್ಲಿಯೂ ತನಿಖೆ ಕೇಂದ್ರೀಕರಿಸಲಾಗಿದೆ. ದೇಶದ ನಾನಾ ಭಾಗದಲ್ಲಿ ನಡೆಸಲು ಉದ್ದೇಶಿಸಿರುವ ಸಂಚು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈತನ ಕೈವಾಡ ಇದೆಯೇ ಎನ್ನುವ ಬಗ್ಗೆ ಕೂಡ ತನಿಖೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.