ಅಡಿಕೆ ಹಳದಿ ರೋಗಕ್ಕೆ  ಬೇಕಿದೆ ಶಾಶ್ವತ ಪರಿಹಾರ ಕ್ರಮ


Team Udayavani, Aug 9, 2021, 4:30 AM IST

ಅಡಿಕೆ ಹಳದಿ ರೋಗಕ್ಕೆ  ಬೇಕಿದೆ  ಶಾಶ್ವತ ಪರಿಹಾರ ಕ್ರಮ

ತೋಟಗಾರಿಕ ಬೆಳೆಯಾಗಿರುವ ಅಡಿಕೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ತಾಲೂಕುಗಳ ಕೃಷಿಕರ ಜೀವನಕ್ಕೆ ಆಧಾರವಾಗಿದೆ. ಧಾರಣೆಯ ಏರಿಳಿತಗಳ ಹೊರತಾಗಿಯೂ ಈ ಭಾಗಗಳ ಜನ ಅಡಿಕೆ ಬೆಳೆಯನ್ನೇ ಅವಲಂಬಿಸಿದ್ದಾರೆ. ದಶಕಗಳ ಹಿಂದೆ ಅಡಿಕೆ ಮರಗಳಿಗೆ ತಗಲಿದ ಹಳದಿ ರೋಗವೆಂಬ ಹೆಮ್ಮಾರಿ ಈಗ ಹೆಮ್ಮರವಾಗಿ ಬೆಳೆದು ಎಕರೆಗಟ್ಟಲೆ ಅಡಿಕೆ ತೋಟಗಳನ್ನು ನಾಶ ಮಾಡಿದೆ. ಪುತ್ತೂರು, ಸುಳ್ಯ, ಕಡಬ ತಾಲೂಕಿನ ಹಲವೆಡೆ ಅಡಿಕೆ ಮರಗಳನ್ನು ಬಾಧಿಸಿರುವ ಈ ರೋಗಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸರಕಾರದ ಇಲಾಖೆಗಳಿಗಾಗಲಿ, ತೋಟಗಾರಿಕ ತಜ್ಞರಿಗಾಗಲಿ ಇನ್ನೂ ಸಾಧ್ಯವಾಗಿಲ್ಲ. ವರ್ಷಗಳುರುಳಿದಂತೆ ಹಳದಿ ರೋಗದ ಸಮಸ್ಯೆ ಅಧಿಕಗೊಳ್ಳುತ್ತಲೇ ಸಾಗಿದ್ದು ಬೆಳೆಗಾರರ ಪಾಲಿಗೆ ಇದೊಂದು ಬಗೆಹರಿಯದ ಜಟಿಲ ಸಮಸ್ಯೆಯಾಗಿಯೇ  ಉಳಿದಿದೆ.

ಅಡಿಕೆಗೆ ಮಾರುಕಟ್ಟೆಯಲ್ಲಿ ಸೂಕ್ತ ಧಾರಣೆ, ಬೇಡಿಕೆ ಇರುವ ಸಂದರ್ಭದಲ್ಲಿಯೇ ಹಳದಿ ರೋಗಕ್ಕೆ ಅಡಿಕೆ ಮರಗಳು ತುತ್ತಾಗುತ್ತಿರುವುದು ಬೆಳೆಗಾರರನ್ನು ಆತಂಕದ ಮಡುವಿಗೆ ತಳ್ಳಿದೆ.   ಸುಳ್ಯದ ಸಂಪಾಜೆಯಲ್ಲಿ ಹಲವು ದಶಕಗಳ ಹಿಂದೆ ಕಾಣಿಸಿಕೊಂಡ ಅಡಿಕೆ ಹಳದಿ ರೋಗವೀಗ ಹತ್ತಾರು ಗ್ರಾಮಗಳ ಅಡಿಕೆ ತೋಟಗಳಿಗೆ ವ್ಯಾಪಿಸಿದೆ. ಈಗಾಗಲೇ ಪುತ್ತೂರು ತಾಲೂಕಿನ ಕೆಲವೆಡೆ ಅಡಿಕೆ ತೋಟಗಳಿಗೂ ಹಳದಿ ರೋಗ ಕಾಲಿಟ್ಟಿದ್ದು   ತೀವ್ರ ಗತಿಯಲ್ಲಿ ವ್ಯಾಪಿಸುತ್ತಿದೆ.

ಹಲವಾರು ವರ್ಷಗಳಿಂದ ಹಳದಿ ರೋಗದ  ಕುರಿತಂತೆ ನಿರಂತರವಾಗಿ ಸಂಶೋಧನೆ, ಅಧ್ಯಯನಗಳು ನಡೆಯುತ್ತಲೇ ಬಂದಿವೆಯಾದರೂ ಇಂದಿಗೂ ಈ ರೋಗ ತಡೆಗಟ್ಟಲು ಔಷಧ ಕಂಡುಹಿಡಿಯುವಲ್ಲಿ ಸಂಶೋಧನ ಕೇಂದ್ರಗಳು ಸಫಲವಾಗಿಲ್ಲ. ಸಾವಯವ, ವೈಜ್ಞಾನಿಕ ಮಾದರಿಯಲ್ಲಿ ರೋಗ ತಡೆಯುವ ಪ್ರಯತ್ನಗಳು ಮುಂದುವರಿದಿವೆಯಾದರೂ ಇವ್ಯಾವೂ ಶಾಶ್ವತ ಫಲ ನೀಡಿಲ್ಲ.

ಶೇ. 85ಕ್ಕೂ ಅಧಿಕ ಭಾಗ ಕೃಷಿಯಿಂದ ಆವೃತವಾಗಿರುವ ಈ 3 ತಾಲೂಕುಗಳಲ್ಲಿ ಹಳದಿ ರೋಗ ವ್ಯಾಪಿಸಿದ ತೋಟಗಳಲ್ಲಿ ಅಡಿಕೆ ಮರಗಳು ಸಂಪೂರ್ಣ ನಾಶವಾಗಿವೆ. ರೋಗದ ತೀವ್ರತೆಯಿಂದಾಗಿ ಹಿಂದೆ ಅಡಿಕೆ ತೋಟಗಳಿದ್ದ ಜಾಗದಲ್ಲಿ ಪುನಃ ಅಡಿಕೆ ಕೃಷಿ ಸಾಧ್ಯವಾಗುತ್ತಿಲ್ಲ. ರೋಗ ಬಾಧಿಸಿದ ತೋಟದಲ್ಲಿ ಹೊಸದಾಗಿ ಅಡಿಕೆ ಗಿಡ ನೆಟ್ಟರೂ ಅವು ಚಿಗುರುತ್ತಿಲ್ಲ. ಹತ್ತಾರು ವಿಜ್ಞಾನಿಗಳ ತಂಡ ಹಲವು ಪರೀಕ್ಷೆಗಳನ್ನು ನಡೆಸಿದರೂ ರೋಗದ ಮೂಲ ಪತ್ತೆ, ನಿಯಂತ್ರಣ ಕ್ರಮ, ಶಾಶ್ವತ ಪರಿಹಾರ ಇವೆಲ್ಲವೂ ಇಂದಿಗೂ ಬಗೆಹರಿಯದ ಸಮಸ್ಯೆಗಳಾಗಿಯೇ ಉಳಿದಿವೆ.

ಹಳದಿ ರೋಗದ ಸಮಸ್ಯೆ ಉಲ್ಬಣಿಸಿದಾಗಲೆಲ್ಲ ಅಡಿಕೆ ಬೆಳೆಗಾರರ ನಿಯೋಗ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಬಳಿಗೆ ತೆರಳಿ ನಷ್ಟಕ್ಕೆ ಪರಿಹಾರ, ನಿಯಂತ್ರಣ ಕ್ರಮಗಳ ಬಗೆಗೆ ಬೇಡಿಕೆ ಸಲ್ಲಿಸುತ್ತಲೇ ಬಂದಿದೆ. ಆದರೆ ಇದುವರೆಗೂ ಬೆಳೆಗಾರರ ಬೇಡಿಕೆಗೆ ಸೂಕ್ತ ಸ್ಪಂದನೆ ದೊರಕಿಲ್ಲ. ಹಳದಿ ರೋಗ ಪೀಡಿತ ಪ್ರದೇಶದ ಅಡಿಕೆ ಬೆಳೆಗಾರರ ನೆರವಿಗೆ ಪ್ಯಾಕೇಜ್‌ ಘೋಷಿಸುವ ಭರವಸೆಯನ್ನು ಸಚಿವರು, ಅಧಿಕಾರಿಗಳು ನೀಡಿದರೂ ಅದಿನ್ನೂ ಜಾರಿ ಆಗಿಲ್ಲ. ಇತ್ತ ಜಿಲ್ಲೆಯ ನೂತನ ಸಚಿವರು ತತ್‌ಕ್ಷಣ ಗಮನಹರಿಸಿ ಅಡಿಕೆ ಬೆಳೆಗಾರರ ಗೋಳಿಗೆ ಸ್ಪಂದಿಸಬೇಕಿದೆ.

-ಸಂ

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.