Fruit Plants; ಕಲ್ಲುಗುಡ್ಡೆ ಅಂಗನವಾಡಿ ವಠಾರದಲ್ಲಿ ಹಣ್ಣಿನ ತೋಟ

ಫ‌ಲ ನೀಡಿದ 10ಕ್ಕೂ ಅಧಿಕ ವಿಧದ ಹಣ್ಣಿನ ಗಿಡಗಳು

Team Udayavani, May 17, 2023, 3:18 PM IST

ಕಲ್ಲುಗುಡ್ಡೆ ಅಂಗನವಾಡಿ ವಠಾರದಲ್ಲಿ ಹಣ್ಣಿನ ತೋಟ

ಸುಬ್ರಹ್ಮಣ್ಯ: ಅಂಗನವಾಡಿ ಕೇಂದ್ರ ಎಂದರೆ ಅಲ್ಲಿ ಪುಟಾಣಿ ಮಕ್ಕಳ ಕಲರವ, ಆಟೋಟ, ಕಲಿಕೆ ಇತ್ಯಾದಿಗಳನ್ನು ಕಾಣಬಹುದಾಗಿದೆ. ಆದರೆ ಇಲ್ಲೊಂದು ಅಂಗನವಾಡಿ ಕೇಂದ್ರದ ವಠಾರದಲ್ಲಿ ಇದರ ಜತೆಗೆ ಸುಂದರ ಹಣ್ಣಿನ ತೋಟ ನಿರ್ಮಾಣಗೊಂಡು ಅಂಗನವಾಡಿ ಕೇಂದ್ರವನ್ನೇ ಕಂಗೊಳಿಸುತ್ತಿದೆ.

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಅಂಗನವಾಡಿ ಕೇಂದ್ರ ಈ ವಿಭಿನ್ನ ಕಾರ್ಯ ಯೋಜನೆಯಿಂದ ಗುರುತಿಸಿಕೊಂಡಿದೆ. ಅಂಗನವಾಡಿ ಕೇಂದ್ರ ಎಂದರೆ ಬರೀ ಮಕ್ಕಳ ಲಾಲನೆ-ಪಾಲನೆ, ಸರಕಾರದ ಕೆಲಸ ಎಂಬಂತೆ ಎನ್ನುವ ದಿನದಲ್ಲಿ ವಿಶೇಷ ಚಿಂತನೆ ಮೂಲಕ ಅಂಗನವಾಡಿ ವಠಾರದಲ್ಲಿ ಹಣ್ಣಿನ ಗಿಡಗಳನ್ನು ನಾಟಿ ಮಾಡಿ ಫ‌ಸಲು ಬಂದಿದ್ದು, ಇದೀಗ ಅಂಗನವಾಡಿ ವಠಾರ ಹಣ್ಣಿನ ಗಿಡಗಳು ಹಾಗೂ ಅದರಲ್ಲಿ ಫ‌ಸಲು ನೀಡಿರುವ ಹಣ್ಣುಗಳಿಂದ ಕಂಗೊಳಿಸುತ್ತಿದೆ.

ಇಲ್ಲಿ ಅಂಗನವಾಡಿ ಕಾರ್ಯಕರ್ತೆ ಯಾಗಿರುವ ಅಮೀನಾ ಕೆ. ಅವರ ಪತಿ ಖಾದರ್‌ ಸಾಹೇಬ್‌ ಅವರ ವಿಶೇಷ ಮುತುವರ್ಜಿ ಹಾಗೂ ಅವರ ಕಲ್ಪನೆಯಂತೆ ಇಲ್ಲಿ ಹಣ್ಣಿನ ತೋಟ ನಿರ್ಮಾಣಗೊಂಡಿದೆ. ನೂಜಿಬಾಳ್ತಿಲ ಗ್ರಾಮ ಪಂಚಾಯತ್‌ನ ಉದ್ಯೋಗ ಖಾತರಿ ಹಾಗೂ ಊರವರ ಸಹಕಾರದಲ್ಲಿ ಹಣ್ಣಿನ ತೋಟ ನಿರ್ಮಾಣವಾಗಿದೆ. ಖಾಸಗಿ ನರ್ಸರಿಯಿಂದ ಹಣ್ಣಿನ ಗಿಡಗಳನ್ನು ತಂದು ಮಣ್ಣನ್ನು ಅಗೆದು ನಾಟಿ ಮಾಡಲಾಗಿತ್ತು. ಬಳಿಕದ ದಿನಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಅವರು ಹಣ್ಣಿನ ಗಿಡಗಳ ಪೋಷಣೆ ಮಾಡಿದ್ದಾರೆ. ವಿಶೇಷ ಎಂದರೆ ನಾಟಿ ಮಾಡಿದ ಎಲ್ಲ ಗಿಡಗಳು ಬೆಳೆದು ಇಂದು ಫ‌ಲ ನೀಡುತ್ತಿದೆ.

ಕಲ್ಲುಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ 36 ಮಕ್ಕಳು ದಾಖಲಾಗಿದ್ದಾರೆ. ಇಲ್ಲಿ ಬೆಳೆದ ಹಣ್ಣಿನ ಗಿಡದಲ್ಲಿ ಫ‌ಸಲು ನೀಡಿದ ಹಣ್ಣುಗಳನ್ನು ಅಂಗನವಾಡಿಯ ಪುಟಾಣಿಗಳಿಗೆ ತಿನ್ನಲು ನೀಡಲಾಗುತ್ತದೆ. ಮಕ್ಕಳಿಗೆ ಪ್ರತೀ ದಿನ ವಿವಿಧ ಬಗೆಯ ಹಣ್ಣುಗಳನ್ನು ನೀಡಲು ಸಿಗುತ್ತಿದೆ. ಇದು ಮಕ್ಕಳ ಪೌಷ್ಟಿಕ ಆಹಾರ-ಆರೋಗ್ಯಕ್ಕೂ ಪೂರಕವಾಗಿದೆ.

34 ಹಣ್ಣಿನ ಗಿಡಗಳು
ಅಂಗನವಾಡಿಯು ಕಲ್ಲುಗುಡ್ಡೆ ಪೇಟೆಯಲ್ಲಿದ್ದು, ಅಂಗನವಾಡಿ ಸಮೀಪವಿದ್ದ ಖಾಲಿ ಜಾಗದಲ್ಲಿ ಸುಮಾರು ಎರಡು ವರ್ಷಗಳ ಹಿಂದೆ ಹಣ್ಣಿನ ಗಿಡಗಳನ್ನು ನಾಟಿ ಮಾಡಲಾಗಿತ್ತು. ಅದು ಇದೀಗ ಫ‌ಲ ನೀಡಿದೆ. ಇಲ್ಲಿ ಸುಮಾರು 10ಕ್ಕೂ ಅಧಿಕ ವಿಧದ 34 ಹಣ್ಣಿನ ಗಿಡಗಳಿವೆ. 10 ರಂಬುಟಾನ್‌, 4 ಪೇರಳೆ, 5 ಮಾವು, 6 ಚಿಕ್ಕು, 5 ರಾಮಫ‌ಲ, 2 ಸೀತಾಫ‌ಲ, 2 ಹಲಸು, ಬಾಳೆಗಿಡಗಳು ಬೆಳೆದು ನಿಂತಿದ್ದು, ಫ‌ಲ ನೀಡಿದೆ.

ಶ್ರಮಕ್ಕೆ ಫ‌ಲ
ಎರಡು ವರ್ಷಗಳ ಹಿಂದೆ ನಾಟಿ ಮಾಡಿದ ಹಣ್ಣಿನ ಗಿಡಗಳು ಇಂದು ಬೆಳೆದು ಫ‌ಲ ನೀಡಿದೆ. ಇಲ್ಲಿನ ಬೆಳೆದಿರುವ ಹಣ್ಣನ್ನು ಮಕ್ಕಳಿಗೆ ನೀಡುತ್ತಿದ್ದೇವೆ. ನಮ್ಮ ಶ್ರಮಕ್ಕೆ ಇಂದು ಫ‌ಲ ಸಿಕ್ಕಿದೆ.
– ಅಮೀನಾ ಕೆ., ಅಂಗನವಾಡಿ ಕಾರ್ಯಕರ್ತೆ, ಕಲ್ಲುಗುಡ್ಡೆ

 

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.