ಫಲ್ಗುಣಿ ನದಿಯಲ್ಲಿ ಉಕ್ಕಿ ಹರಿದ ನೀರು; ಪೊಳಲಿ, ಅಮ್ಮುಜೆ ಭಾಗದಲ್ಲಿ ತಗ್ಗು ಪ್ರದೇಶ ಜಲಾವೃತ
Team Udayavani, Aug 1, 2024, 9:27 AM IST
ಬಂಟ್ವಾಳ: ಫಲ್ಗುಣಿ ನದಿಯಲ್ಲಿ ಏಕಾಏಕಿ ನೀರು ಏರಿಕೆಯಾಗಿದ್ದು, ಪೊಳಲಿ ಸಮೀಪದ ಅಮ್ಮುಂಜೆ ಗ್ರಾಮದ ಹೊಳೆಬದಿಯ ಕಡಪು ಕರಿಯ ಎಂಬಲ್ಲಿ ಸುಮಾರು 8 ಕುಟುಂಬಗಳಿಗೆ ನೀರು ನುಗ್ಗಿದ್ದು ಎಲ್ಲಾ ಕುಟುಂಬಗಳನ್ನು ತಹಶೀಲ್ದಾರ್ ಅರ್ಚನಾ ಭಟ್ ಅವರ ನಿರ್ದೇಶನದಂತೆ ಆ.1ರ ಗುರುವಾರ ತಾಲೂಕು ಆಡಳಿತ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳ ನೆರವಿನಿಂದ ರಕ್ಷಣೆ ಕಾರ್ಯ ಮಾಡುತ್ತಿದ್ದಾರೆ.
ಪಲ್ಗುಣಿ ನದಿಯಲ್ಲಿ ನೀರು ಏರಿಕೆಯಾದ ಬಳಿಕ ಕೃತಕ ನೆರೆಯ ರೂಪದಲ್ಲಿ ಈ 8 ಮನೆಗಳಿಗೆ ನೀರು ನುಗ್ಗಿದೆ ಎನ್ನಲಾಗಿದೆ, ಅದರಲ್ಲಿ ಮೂರು ಮನೆಗಳು ಅಪಾಯಕಾರಿಯಾಗಿದ್ದು, ಇದೀಗ ಅಗ್ನಿಶಾಮಕ ದಳದ ಬೋಟ್ ಮೂಲಕ ಅವರನ್ನು ರಕ್ಷಣೆಯಲ್ಲಿ ತೊಡಗಿದ್ದಾರೆ.
ನದಿಯಲ್ಲಿ ಕಸದ ರಾಶಿಯಿಂದ ರಕ್ಷಣಾ ಕಾರ್ಯಕ್ಕೆ ಕೊಂಚ ಮಟ್ಟಿಗೆ ತೊಂದರೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೆಸ್ಕಾಂ ವಿದ್ಯುತ್ ತಂತಿಗಳು ಕೂಡ ಇಲ್ಲಿ ಇದ್ದ ಕಾರಣಕ್ಕೆ ಕರೆಂಟ್ ಕಡಿತಗೊಳಿಸಿದ ಬಳಿಕ ರಕ್ಷಣಾ ಕಾರ್ಯದಲ್ಲಿ ತೊಡಗಿದರು.
ಎಲ್ಲಾ ಕುಟುಂಬಕ್ಕೆ ಪೊಳಲಿ ಸರ್ವಮಂಗಲ ಸಭಾಭವನದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ ಎಂದು ತಹಶಿಲ್ದಾರ್ ಅರ್ಚನಾ ಭಟ್ ತಿಳಿಸಿದ್ದಾರೆ. ಸ್ಥಳೀಯ ಗ್ರಾ.ಪಂ.ತಂಡ ಕೂಡ ರಕ್ಷಣಾ ಕಾರ್ಯದಲ್ಲಿ ತೊಡಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.