ಪುತ್ತೂರು: ಪಾರ್ಕಿಂಗ್‌ ಸಂಕಟ 


Team Udayavani, Sep 3, 2021, 3:10 AM IST

ಪುತ್ತೂರು: ಪಾರ್ಕಿಂಗ್‌ ಸಂಕಟ 

ಪುತ್ತೂರು: ಸಾವಿರಾರು ವಾಹನ ಪ್ರವೇಶಿಸುವ ಪುತ್ತೂರು ನಗರದಲ್ಲಿ ಎರಡು ಪೇ-ಪಾರ್ಕಿಂಗ್‌ ವಾಹನ ನಿಲುಗಡೆ ಸ್ಥಳ ಭಾರ ಹೊರಬೇಕು.

ಜಿಲ್ಲಾ ಕೇಂದ್ರವಾಗುವ ಕನಸಿನಲ್ಲಿರುವ ಪುತ್ತೂರು ನಗರವು ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಇಲ್ಲದೆ ಕಿಷ್ಕಿಂಧೆಯಂತಾಗಿದ್ದು ದಿನೇ ದಿನೇ ವಾಹನ ದಟ್ಟಣೆ ಹೆಚ್ಚಾಗಿ ಸಂಚಾರ ಸಮಸ್ಯೆಯಲ್ಲಿ ಸಿಲುಕಿದೆ.

ನಿಲುಗಡೆಗೆ ಜಾಗವಿಲ್ಲ:

ದರ್ಬೆ, ಕೆಸ್‌ಆರ್‌ಟಿಸಿ ಬಸ್‌ ನಿಲ್ದಾಣ ಸನಿಹ ಪೇ ಪಾರ್ಕಿಂಗ್‌ ಇದ್ದು ಅವೆರೆಡು ಸೇರಿ ಹೆಚ್ಚೆಂದರೆ 100 ವಾಹನ ನಿಲುಗಡೆ ಸಾಮರ್ಥ್ಯವನ್ನಷ್ಟೇ ಹೊಂದಿದೆ. ಇತ್ತೀಚಿನ ದಿನಗಳಲ್ಲಿ ನಿರ್ಮಾಣಗೊಂಡ ಬೃಹತ್‌ ಕಟ್ಟಡಗಳ ಮುಂಭಾಗ ಆ ಕಟ್ಟಡಕ್ಕೆ ಬರುವ ಗ್ರಾಹಕರಿಗೆ ಮಾತ್ರ ಪಾರ್ಕಿಂಗ್‌ ಒದಗಿಸುವುದು ಬಿಟ್ಟರೆ ಉಳಿದೆಡೆ ರಸ್ತೆ ಬದಿಯೇ ಆಸರೆ. ಪ್ರತೀ ವರ್ಷ ರಸ್ತೆ ಅಗಲದ ಸಂದರ್ಭ ಇರುವ ಅಲ್ಪ ಪಾರ್ಕಿಂಗ್‌ ಸ್ಥಳಗಳು ಕಣ್ಮರೆಯಾಗುತ್ತಿದ್ದು ಭವಿಷ್ಯದಲ್ಲಿ ನಗರಕ್ಕೆ ವಾಹನ ಸಂಚಾರವೇ ದೊಡ್ಡ ಸವಲಾಗಿ ಪರಿಣಮಿಸಲಿದೆ.

ಗ್ರಾಹಕರಿಗೆ ಸಂಕಷ್ಟ :

ನಗರದ ಶೇ. 60ಕ್ಕೂ ಅಧಿಕ ಅಂಗಡಿ ಮುಂಭಾಗ ಪಾರ್ಕಿಂಗ್‌ ಜಾಗವಿಲ್ಲದೆ ರಸ್ತೆ ಇಕ್ಕಲಗಳಲ್ಲಿ ವಾಹನ ನಿಲ್ಲಿಸಬೇಕಾದ ಅನಿವಾರ್ಯ ಸೃಷ್ಟಿ ಯಾಗಿದೆ. ಗ್ರಾಹಕರು ರಸ್ತೆ ಬದಿ ವಾಹನ ನಿಲ್ಲಿಸಿದರೆ ಸಂಚಾರ ಪೊಲೀಸರು ದಂಡ ವಿಧಿಸುತ್ತಾರೆ. ನಗರಸಭೆ ಪಾರ್ಕಿಂಗ್‌ ಜಾಗ ಕಲ್ಪಿಸದಿರುವುದು ಸಮಸ್ಯೆಯಾಗಿದ್ದರೂ ಅದರ ಪರಿಣಾಮ ಜನರ ಮೇಲಾಗುತ್ತಿದೆ. ಪಾರ್ಕಿಂಗ್‌ ಎಲ್ಲಿ ಮಾಡಬೇಕು ಎಂದು ಗ್ರಾಹಕರು ಸಂಚಾರ ಪೊಲೀಸರನ್ನು ಮರು ಪ್ರಶ್ನಿಸಿದರೆ ಅವರ ಬಳಿಯು ಉತ್ತರವಿಲ್ಲ. ಒಟ್ಟಿನಲ್ಲಿ ಕಟ್ಟಡ, ರಸ್ತೆ ನಿರ್ಮಾಣ ಸಂದರ್ಭ ಪಾರ್ಕಿಂಗ್‌ ಬಗ್ಗೆ ನಿರ್ಲಕ್ಷé ವಹಿಸಿ ಪರ ವಾನಿಗೆ ನೀಡಿರುವುದೆ ಈ ಇಕ್ಕಟ್ಟಿಗೆ ಕಾರಣ.

ನಗರಕ್ಕೆ ನುಗ್ಗುವ ವಾಹನ :

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಉಪವಿಭಾಗದ ತಾಲೂಕುಗಳ ಪೈಕಿ ಮುಂಚೂಣಿಯಲ್ಲಿರುವ ಪುತ್ತೂರು ನಗರಕ್ಕೆ ಸುಳ್ಯ, ಕಡಬ, ಬಂಟ್ವಾಳ, ಬೆಳ್ತಂಗಡಿ ಭಾಗದಿಂದ ದಿನನಿತ್ಯದ ವ್ಯವಹಾರಕ್ಕೆ ನೂರಾರು ವಾಹನಗಳು ಪ್ರವೇಶಿಸುತ್ತವೆ.

ಬಹಳಷ್ಟು ಜಾಗ ಅಗತ್ಯ :

ದರ್ಬೆಯಿಂದ ಬೊಳುವಾರು ತನಕ ನೂರಾರು ಅಟೋ ರಿಕ್ಷಾಗಳು ಬಾಡಿಗೆ ಮಾಡುತ್ತಿದ್ದು ಅವುಗಳ ನಿಲುಗಡೆಗೆ ಬಹಳಷ್ಟು ಜಾಗದ ಅಗತ್ಯ ಇದೆ. ಮಂಗಳೂರು-ಮಡಿಕೇರಿ ಸಂಪರ್ಕದ ನಡುವೆ ತುರ್ತು ಸಂದರ್ಭದಲ್ಲಿ ಅತಿ ಅಗತ್ಯವಿರುವ ಪಟ್ಟಣ ಪುತ್ತೂರಾಗಿದ್ದು ಮಿನಿ ವಿಧಾನಸಭೆ, ಸಹಾಯಕ ಆಯುಕ್ತ, ಸಬ್‌ ರಿಜಿಸ್ಟ್ರಾರ್‌, ಡಿವೈಎಸ್‌ಪಿ ಕಚೇರಿ, ಕ್ಯಾಂಪ್ಕೋ ಹೀಗೆ ಹತ್ತಾರು ಸೌಲಭ್ಯಗಳಿಗೆ ಪುತ್ತೂರನ್ನೇ ಆಶ್ರಯಿಸಬೇಕಾಗಿರುವ ಕಾರಣ ಇಲ್ಲಿನ ವಾಹನ ದಟ್ಟಣೆ ಹೆಚ್ಚಳಕ್ಕೆ ಕಾರಣವೆನಿಸಿದೆ.

ಪ್ರಸ್ತಾವನೆ ನೆನೆಗುದಿಗೆ :

ನಗರದ ಟ್ರಾಫಿಕ್‌ ದಟ್ಟಣೆ ತಗ್ಗಿಸಲು ಪುತ್ತೂರು ನಗರಸಭೆ ಪೇಟೆಯ ಕೇಂದ್ರದಲ್ಲೇ ಅರಣ್ಯ ಇಲಾಖೆಗೆ ಸೇರಿದ 1.5 ಎಕ್ರೆ ಜಾಗದ ಮೇಲೆ ಕಣ್ಣಿಟ್ಟಿತ್ತು. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗವೇ ಇರುವ ಅರಣ್ಯ ಇಲಾಖೆಯ ಕಚೇರಿ ಇರುವ ಜಾಗವದು. ಹಲವಾರು ವರ್ಷಗಳಿಂದ ಈ ಜಾಗ ಅರಣ್ಯ ಇಲಾಖೆಯ ಸುಪರ್ದಿಯಲ್ಲೇ ಇದೆ.

ಪ್ರಯೋಜನ ಆಗಲಿಲ್ಲ :

ಮರಗಳನ್ನು ಉಳಿಸಿಕೊಂಡು, ಉಳಿದ ಜಾಗದಲ್ಲಿ ಪಾರ್ಕಿಂಗ್‌ ಮಾಡಬೇಕು ಎಂದು ನಗರಸಭೆ ಯೋಜನೆ ರೂಪಿಸಿತ್ತು. ಇದಕ್ಕೆ ಅರಣ್ಯ ಇಲಾಖೆ ಗ್ರೀನ್‌ ಸಿಗ್ನಲ್‌ ನೀಡಲಿಲ್ಲ. ಬೆಂಗಳೂರಿನಲ್ಲಿ ಸರಕಾರದ ಹಂತದಲ್ಲಿ ಪ್ರಯತ್ನ ನಡೆಸಿದರೂ ಅದು ಪ್ರಯೋಜನ ಆಗಲಿಲ್ಲ.

ಅರಣ್ಯ ಇಲಾಖೆಗೆ ಸೇರಿದ ಜಾಗವನ್ನು ನಗರಸಭೆಗೆ ನೀಡುವ ಪ್ರಸ್ತಾವನೆ ನಮ್ಮ ಮುಂದಿಲ್ಲ. ಕಳೆದ ಒಂದು ವರ್ಷದಿಂದ ಆ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ. ಸುಬ್ಬಯ್ಯ ನಾಯ್ಕ, ವಲಯ ಅರಣ್ಯಧಿಕಾರಿ, ಪುತ್ತೂರು

ಪಾರ್ಕಿಂಗ್‌ ಸಮಸ್ಯೆ ಬಗ್ಗೆ ಶೀಘ್ರ ಸಭೆ ಕರೆಯ ಲಾಗುವುದು. ಸಮಸ್ಯೆಗೆ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಅಭಿಪ್ರಾಯ ಸಂಗ್ರಹಿ ಸಲಾಗುವುದು. ಸದ್ಯಕ್ಕೆ ನಗರಾಡಳಿತದ ಮೂಲಕ 2 ಪೇ ಪಾರ್ಕಿಂಗ್‌ ಸೌಲಭ್ಯವಿದೆ. ಮಧು ಎಸ್‌. ಮನೋಹರ್‌,  ಪೌರಾಯುಕ್ತ, ನಗರಸಭೆ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.