ಸಮಯಕ್ಕೆ ಬಾರದ ಅಧಿಕಾರಿಗಳು: ಗ್ರಾಮಸ್ಥರ ಆಕ್ರೋಶ


Team Udayavani, Feb 2, 2019, 6:33 AM IST

february-11.jpg

ಪೆರುವಾಯಿ: ಪೆರುವಾಯಿ ಗ್ರಾಮಸಭೆ ಬೆಳಗ್ಗೆ 10.30ಕ್ಕೆ ನಿಗದಿ ಯಾಗಿತ್ತು. ಆದರೆ 11ರ ತನಕವೂ ನೋಡಲ್‌ ಅಧಿಕಾರಿ ಆಗಮಿಸಿರಲಿಲ್ಲ. ಕೆಲವು ಇಲಾಖಾಧಿಕಾರಿಗಳೂ ಬರಲಿಲ್ಲ. ಗ್ರಾಮಸ್ಥರು ಬಂದು ಅಧಿಕಾರಿಗಳನ್ನು ಕಾಯ ಬೇಕೇ ಎಂದು ಆಕ್ರೋಶದಿಂದ ಪ್ರಶ್ನಿಸಿದ ನಾಗರಿಕರು, ಅಧಿಕಾರಿಗಳು ಹಾಜರಾಗುವ ದಿನವೇ ನಿಗದಿಪಡಿಸಿ ಗ್ರಾಮಸಭೆಯನ್ನು ಮುಂದೂಡಬೇಕು ಎಂದು ಆಗ್ರಹಿಸಿದರು.

ಪೆರುವಾಯಿ ಶ್ರೀ ರಾಜರಾಜೇಶ್ವರೀ ಭಜನ ಮಂದಿರದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಮಾತನಾಡಿದರು.

ಪೆರುವಾಯಿ ಗ್ರಾಮಸಭೆ ಬಗ್ಗೆ ಗ್ರಾಮಸ್ಥರಿಗೆ ಸಮರ್ಪಕವಾಗಿ ಮಾಹಿತಿ ನೀಡಿಲ್ಲ. ಒಂದು ದಿನ ಹಿಂದೆ ಸದಸ್ಯರಿಗೂ ನೋಟಿಸ್‌ ಕಳುಹಿಸಲಾಗಿದೆ. ಪಂ. ಅಭಿವೃದ್ಧಿ ಅಧಿಕಾರಿಯವರೂ ಸಮಯಕ್ಕೆ ಹಾಜರಾಗಲಿಲ್ಲ ಎಂದು ದೂರಿದರು.

ತಡವಾಗಿ ಬಂದ ಪಂ. ಅಭಿವೃದ್ಧಿ ಅಧಿಕಾರಿ ಅಶೋಕ್‌ ಮಾತನಾಡಿ, ಕಳೆದ 6 ವರ್ಷಗಳಿಂದ ಇದೇ ಪಂ.ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ತಡವಾಗಿ ಬಂದರೂ ಸಭೆಯಲ್ಲಿ ಸಮಸ್ಯೆ ಆಗಲಿಲ್ಲ. ಸಭೆಗೆ ಬಾರದ ಅಧಿಕಾರಿಗಳ ಬಗ್ಗೆ ಈ ಹಿಂದೆಯೂ ತಾ| ಕಾರ್ಯ ನಿರ್ವಹಣಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಈಗಲೂ ಮಾಹಿತಿ ನೀಡಿ ಶೋಕಾಸ್‌ ನೋಟಿಸ್‌ ನೀಡುವಂತೆ ಕೋರಲಾಗುವುದು ಎಂದರು.

ನೋಡಲ್‌ ಅಧಿಕಾರಿ ಮಹೇಶ್‌ ಮಾತನಾಡಿ, ಕಚೇರಿಗೆ ತೆರಳಿ ಸಭೆಗೆ ಆಗಮಿಸುವಾಗ ತಡವಾಗಿದೆ. ಗ್ರಾಮಸಭೆಗೆ ತಯಾರಿ ನಡೆಸಬೇಕಾದ್ದು ನಮ್ಮ ಕರ್ತವ್ಯ ಎಂದರು. ಬಳಿಕ ಗ್ರಾ.ಪಂ. ಅಧ್ಯಕ್ಷ ರಾಲ್ಫ್ ಡಿ’ಸೋಜಾ ಅಧ್ಯಕ್ಷತೆಯಲ್ಲಿ ಗ್ರಾಮಸಭೆ ನಡೆಯಿತು.

ಸಭೆಗೆ ಬಹಿಷ್ಕಾರ 
ಗ್ರಾಮಸ್ಥರೊಬ್ಬರು ಸೋಲಾರ್‌ ಬೀದಿ ದೀಪ ಅಳವಡಿಕೆ ಬಗ್ಗೆ ಮಾಹಿತಿ ನೀಡಲು ವಿನಂತಿಸಿದರು. ಈ ಬಗ್ಗೆ ನೋಡಲ್‌ ಅಧಿಕಾರಿ ಜತೆ ಚರ್ಚಿಸುತ್ತಿದ್ದ ವೇಳೆ ಪೊಲೀಸರು ಮಧ್ಯಪ್ರವೇಶಿಸಿದರು. ಪೊಲೀಸರು ಧಾರ್ಮಿಕ ಕೇಂದ್ರದ ಒಳಗೆ ಪಾದರಕ್ಷೆ ಹಾಕಿಕೊಂಡು ಬಂದರೆಂದು ಗದ್ದಲ ಆರಂಭವಾಯಿತು. ಪೊಲೀಸರು ಅನುಚಿತವಾಗಿ ನಡೆದುಕೊಂಡರು ಎಂದು ಆರೋಪಿಸಿದ ವಿಹಿಂಪ ಹಾಗೂ ಬಜರಂಗದಳ ಬೆಂಬಲಿತರು ಸಭೆಗೆ ಬಹಿಷ್ಕಾರ ಹಾಕಿ ತೆರಳಿದರು.

ಟಾಪ್ ನ್ಯೂಸ್

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.