ಪೈಪ್ ಅಳವಡಿಕೆ, ಚರಂಡಿ ರಚನೆ
Team Udayavani, Jun 21, 2018, 2:33 PM IST
ಸವಣೂರು: ಸವಣೂರು ಗ್ರಾ.ಪಂ. ವ್ಯಾಪ್ತಿಯ ಪಾಲ್ತಾಡಿ ಗ್ರಾಮದ ನಾಡೋಳಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕದ
ಆವರಣದಲ್ಲೇ ರಾಶಿ ಹಾಕಲಾದ ತ್ಯಾಜ್ಯವನ್ನು ಸವಣೂರು ಗ್ರಾ.ಪಂ. ವತಿಯಿಂದ ಜೂ. 20ರಂದು ತೆರವುಗೊಳಿಸಲಾಯಿತು.
ಈ ಘಟಕದ ಕುರಿತು ಜೂ. 12ರ ಸಂಚಿಕೆಯಲ್ಲಿ ಸಚಿತ್ರ ವರದಿ ಪ್ರಕಟಿಸಲಾಗಿತ್ತು. ಈ ವರದಿಯನ್ನು ಪರಿಗಣಿಸಿ ಸ್ವತ್ಛ ಭಾರತ್ ಜಿಲ್ಲಾ ಸಂಯೋಜಕಿ ಮಂಜುಳಾ ಅವರು ಈ ಕುರಿತು ಸೂಕ್ತ ಕ್ರಮಕೈಗೊಂಡು ವರದಿ ಸಲ್ಲಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಿದ್ದರು. ಇದರ ಅನ್ವಯ ಜೂ. 19ರಂದು ತಾ.ಪಂ. ಸಹಾಯಕ ನಿರ್ದೇಶಕ ನವೀನ್ ಭಂಡಾರಿ, ಪರಿಸರ ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿ ಕಿರಣ್ ಅವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮಕೈಗೊಳ್ಳುವಂತೆ ಗ್ರಾ. ಪಂ. ಅಧಿಕಾರಿಗಳಿಗೆ ಸೂಚಿಸಿದ್ದರು.
ಚರಂಡಿ ನಿರ್ಮಾಣ, ತ್ಯಾಜ್ಯ ತೆರವು
ಘಟಕದ ಆವರಣದ ಲ್ಲಿದ್ದ ತ್ಯಾಜ್ಯ ರಾಶಿಯನ್ನು ಗ್ರಾ.ಪಂ.ವತಿಯಿಂದ ಜೇಸಿಬಿ ಯಂತ್ರದ ಮೂಲಕ ತೆರವು ಮಾಡಲಾಯಿತು. ಘಟಕದ ಆವರಣದಲ್ಲಿ ಮಳೆ ನೀರಿನಿಂದಾಗಿ ಮಣ್ಣು ಕೊಚ್ಚಿಹೋಗುತ್ತಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಚರಂಡಿ ನಿರ್ಮಾಣ ಮಾಡಲಾಯಿತು ಹಾಗೂ ಪೈಪು ಅಳವಡಿಸಲಾಯಿತು. ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ದೇವಪ್ಪ ಪಿ.ಆರ್., ಲೆಕ್ಕ ಸಹಾಯಕ ಎ.ಮನ್ಮಥ, ಸಿಬಂದಿ ಪ್ರಮೋದ್ ಕುಮಾರ್ ರೈ, ದಯಾನಂದ ಮಾಲೆತ್ತಾರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.