NEET ನಲ್ಲಿ ಗುರುವಾಯನಕೆರೆ ಎಕ್ಸೆಲ್‌ ಕಾಲೇಜಿನ ಪ್ರಜ್ವಲ್‌ ಟಾಪರ್

ಕಾಲೇಜಿನ ಅಧ್ಯಕ್ಷರಿಂದ 10 ಲಕ್ಷ ರೂ. ಬಹುಮಾನ

Team Udayavani, Jun 6, 2024, 8:08 AM IST

2-neet

ಬೆಳ್ತಂಗಡಿ: ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಾದ ನೀಟ್‌ನಲ್ಲಿ 720 ಅಂಕಗಳ ಪೈಕಿ 710 ಅಂಕ ಪಡೆದು ಸಾಧನೆ‌‌ ಮಾಡಿದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಎಚ್.ಎಂ.ಗೆ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರೇ ಸ್ವತಃ 10 ಲಕ್ಷ‌ ರೂ.‌‌ ಬಹುಮಾನ ನೀಡುವ ಮೂಲಕ ಸಾಧನೆಗೆ ವಿಶೇಷವಾಗಿ ಬೆನ್ನುತಟ್ಟಿದ್ದಾರೆ.

ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಜೂ.5ರಂದು ನಡೆದ ಕಾರ್ಯಕ್ರಮದಲ್ಲಿ ಪ್ರಜ್ವಲ್ ಎಚ್.ಎಂ. ತಂದೆ ಮರಿಸ್ವಾಮಿ ಎಚ್.ಎಂ., ತಾಯಿ ಸೌಮ್ಯ ಅವರ ಸಮ್ಮುಖದಲ್ಲಿ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ 10 ಲಕ್ಷ ರೂಪಾಯಿ ಬಹುಮಾನದ ಜತೆಗೆ ಸಮ್ಮಾನಿಸಿ ಗೌರವಿಸಿದ್ದಾರೆ.

ಪ್ರಜ್ವಲ್ ಒಂದು ಪ್ರಶ್ನೆಗೆ ಉತ್ತರಿಸುವಲ್ಲಿ ಕೊಂಚ ಎಡವಿದ‌ ಪರಿಣಾಮ 720 ರಲ್ಲಿ 720 ಅಂಕ ಗಳಿಸುವ ಸಾಧ್ಯತೆಯನ್ನು ಸ್ವಲ್ಪದರಲ್ಲೆ ಕೈಚೆಲ್ಲಿದ್ದಾರೆ. ಇಲ್ಲವಾದಲ್ಲಿ ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಈ ಸಾಧನೆ‌ ಮಾಡಿದಂತಾಗುತ್ತಿತ್ತು.

ಪ್ರಜ್ವಲ್ ಎಚ್.ಎಂ. ಸಾಧನೆಯನ್ನು ಗುರುತಿಸುವ ಸಲುವಾಗಿ ಕಾಲೇಜಿನ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ಕಾಲೇಜು ‌ಆವರಣದಿಂದ ಬೆಳ್ತಂಗಡಿ ಬಸ್ ನಿಲ್ದಾಣದ ವರೆಗೆ ತೆರೆದ ವಾಹನದಲ್ಲಿ ಪೋಷಕರ ಸಮ್ಮುಖದಲ್ಲಿ ಮೆರವಣಿಗೆ ನಡೆಸಿದರು. ವಿವಿಧ ಸಂಘ ಸಂಸ್ಥೆಗಳು ಪ್ರಜ್ವಲ್ ಅವರನ್ನು ಗೌರವಿಸಿದ್ದಾರೆ.

ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಅಭಿರಾಮ್, ಪ್ರಾಂಶುಪಾಲ ಡಾ| ನವೀನ್ ಕುಮಾರ್ ಎಂ., ಆಡಳಿತ ಮಂಡಳಿಯ ಸಹನಾ ಜೈನ್, ಆಡಳಿತಾಧಿಕಾರಿ ಕೀರ್ತಿನಿಧಿ, ಶಾಂತಿರಾಜ್ ಜೈನ್, ಪ್ರಾಧ್ಯಾಪಕರಾದ ಶ್ರೀನಿಧಿ ರಾಜ್, ನಿಶಾ ಪೂಜಾರಿ, ವಿಲ್ಸನ್ ತಳ್ತೊಟ್ಟಿ, ಕೇಶವ್ ರಾವ್, ಡಾ| ಸತ್ಯನಾರಾಯಣ್ ಭಟ್, ಈಶ್ವರ್ ಶರ್ಮಾ, ಜೈಸ ಆಂಟನಿ, ಚಿಗುರು ಪ್ರಕಾಶ್, ಗ್ರಿಷಿನ್ ಡಿಸೋಜ, ಡಾ| ಆಸ್ಟಿನ್ ಡಿಸೋಜ, ಸಾರ್ವಜನಿಕ ಸಂಪರ್ಕಾಽಕಾರಿ ರಿಚರ್ಡ್ ಜೀವನ್ ಮೊರಾಸ್ ಮತ್ತಿತರ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

1-saasdsdsa-d

Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Bantwal: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Bantwal: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Uppinangady ಅನುಮತಿ ಇಲ್ಲದೇ ರಸ್ತೆ ಅಗೆದ ವ್ಯಕ್ತಿಗೆ ದಂಡದ ಶಿಕ್ಷೆ

Uppinangady ಅನುಮತಿ ಇಲ್ಲದೇ ರಸ್ತೆ ಅಗೆದ ವ್ಯಕ್ತಿಗೆ ದಂಡದ ಶಿಕ್ಷೆ

Road Mishap ಮರ್ದಾಳ ಜಂಕ್ಷನ್‌: ಕೆಎಸ್ಸಾರ್ಟಿಸಿ ಬಸ್‌-ಜೀಪು ಢಿಕ್ಕಿ

Road Mishap ಮರ್ದಾಳ ಜಂಕ್ಷನ್‌: ಕೆಎಸ್ಸಾರ್ಟಿಸಿ ಬಸ್‌-ಜೀಪು ಢಿಕ್ಕಿ

Aranthodu; Man slipped and fell into the river

Aranthodu; ಕಾಲು ಜಾರಿ ಹೊಳೆಗೆ ಬಿದ್ದು ಸಾವು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ED

ED; ದಿಲ್ಲಿ ಅಬಕಾರಿ ನೀತಿ ಹಗರಣ: 9ನೇ ಆರೋಪಪಟ್ಟಿ ಸಲ್ಲಿಕೆ

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

MONEY (2)

Small savings ಮೇಲಿನ ಬಡ್ಡಿದರದಲ್ಲಿ ಬದಲಾವಣೆ ಇಲ್ಲ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.