ಬೆಳ್ತಂಗಡಿ ಮತಎಣಿಕೆ ಕೇಂದ್ರದ ಬಳಿ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ ಕೂಗಿದ ಎಸ್ ಡಿಪಿಐ?
Team Udayavani, Dec 30, 2020, 3:23 PM IST
ಬೆಳ್ತಂಗಡಿ: ಇಲ್ಲಿನ ಮತ ಎಣಿಕೆ ಕೇಂದ್ರದ ಹೊರಗಡೆ ಎಸ್ ಡಿಪಿಐ ಕಾರ್ಯಕರ್ತರು ವಿಜಯೋತ್ಸವ ಆಚರಿಸುತ್ತಿದ್ದ ಸಂದರ್ಭದಲ್ಲಿ ಕೆಲವು ಪಾಕಿಸ್ಥಾನ ಪರ ಘೋಷಣೆ ಕೂಗಿರುವುದು ಕೇಳಿಬಂದಿದೆ.
ಮತ ಏಣಿಕೆ ಕೇಂದ್ರದ ಹೊರಗೆ ರಾಜಕೀಯ ಪಕ್ಷಗಳ ಸಾವಿರಾರು ಕಾರ್ಯಕರ್ತರು ಸೇರಿದ್ದರು. ಒಂದೊಂದೇ ಕ್ಷೇತ್ರದ ಫಲಿತಾಂಶ ಹೊರ ಬೀಳುತ್ತಿದ್ದಂತೆ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಿದ್ದರು.
ಬಿಜೆಪಿ ಕಾರ್ಯಕರ್ತರು ತಮ್ಮ ಬೆಂಬಲಿತ ಅಭ್ಯರ್ಥಿಗಳು ವಿಜಯಿಯಾದಾಗ ಪಕ್ಷದ ಘೋಷಣೆ ಕೂಗೂತ್ತಾ, ಬವುಟ ಹಾರಸಿ ವಿಜಯೋತ್ಸವದಲ್ಲಿ ತೊಡಗಿದ್ದರು. ಈ ವೇಳೆ ಎಸ್ ಡಿಪಿಐ ಪಕ್ಷದ ಕಾರ್ಯಕರ್ತರು ಘೋಷಣೆಗಳನ್ನು ಕೂಗೂತ್ತಾ ಬಿಜೆಪಿ ಕಾರ್ಯಕರ್ತರ ಬಳಿ ಬಂದರು. ಎರಡೂ ಪಕ್ಷದ ಬೆಂಬಲಿಗರ ಘೋಷಣೆಗಳು ತಾರಕಕ್ಕೇರಿದಾಗ ಎಸ್ ಡಿಪಿಐ ಕಡೆಯಿಂದ “ಪಾಕಿಸ್ಥಾನ ಜಿಂದಾಬಾದ್” ಘೋಷಣೆ ಕೂಗಿರುವುದು ಕೇಳಿಬಂದಿದೆ.
ಇದನ್ನೂ ಓದಿ:ಜ.1ರಿಂದ ಶಾಲಾರಂಭ : ಶಿಕ್ಷಣ ಸಚಿವರಿಂದ ಶಾಲಾ ಕಾಲೇಜುಗಳ ಸಿದ್ಧತೆ ಪರಿಶೀಲನೆ
ವಿಷಯ ತಿಳಿದು ಸ್ಥಳಕ್ಕಾಗಮಿಸಿ ವೃತ್ತ ನಿರೀಕ್ಷಕ ಸಂದೇಶ್ ಪಿಜಿ ಗುಂಪು ಚದುರಿಸಿದರು. ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮತ ಎಣಿಕೆ ಕೇಂದ್ರದ ಬಳಿ ವಿಜಯೋತ್ಸವ ಆಚರಿಸದಂತೆ ತಾಕೀತು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.