ಪುತ್ತೂರಿನಲ್ಲಿ ಮಣ್ಣು ಪರೀಕ್ಷೆ ಕೇಂದ್ರಕ್ಕೆ ಪ್ರಸ್ತಾವ


Team Udayavani, Feb 6, 2022, 1:20 PM IST

ಪುತ್ತೂರಿನಲ್ಲಿ ಮಣ್ಣು ಪರೀಕ್ಷೆ ಕೇಂದ್ರಕ್ಕೆ ಪ್ರಸ್ತಾವ

ಪುತ್ತೂರು: ಕೃಷಿಯಲ್ಲಿ ಮಣ್ಣಿನ ಗುಣ ಧರ್ಮಗಳನ್ನು ತಿಳಿಯುವ ಸಲುವಾಗಿ ಪುತ್ತೂರಿನಲ್ಲಿ ಮಣ್ಣು ಪರೀಕ್ಷಾ ಕೇಂದ್ರ ತೆರೆಯುವ ನಿಟ್ಟಿನಲ್ಲಿ ಪ್ರಸ್ತಾವ ಸಲ್ಲಿಸಲಾಗಿದೆ.

ಜಂಟಿ ಕೃಷಿ ನಿರ್ದೇಶಕರ ಮೂಲಕ ಕೃಷಿ ಆಯುಕ್ತರ ಕಚೇರಿಗೆ ಕೇಂದ್ರ ನಿರ್ಮಾಣದ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಜನಪ್ರತಿನಿಧಿಗಳು ಒತ್ತಡ ಹೇರಿದರೆ ಕೃಷಿ ಆಧಾರಿತ ತಾಲೂಕಿನ ಜನರ ಬಹುದಿನದ ಬೇಡಿಕೆ ಈಡೇರಲಿದೆ.

ಜಿಲ್ಲಾ ಕೇಂದ್ರದ ಆಸರೆ:

ರೈತರು ಮಣ್ಣಿನ ಗುಣಮಟ್ಟ ತಿಳಿಯದೆ ಯಥೇತ್ಛವಾಗಿ ರಸಗೊಬ್ಬರ ಬಳಸುತ್ತಿದ್ದಾರೆ. ಇದರಿಂದ ಭೂಮಿಯ ಸಾರ ಹಾಳಾಗುತ್ತಿದೆ. ಆದ್ದ ರಿಂದ ಈ ಪರೀಕ್ಷೆ ಕೇಂದ್ರದಲ್ಲಿ ಮಣ್ಣನ್ನು ವಿಶ್ಲೇಷಣೆಗೊಳಪಡಿಸಿ, ಪೋಷಕಾಂಶಗಳ ಲಭ್ಯತೆಯ ಬಗ್ಗೆ ಅರಿತುಕೊಳ್ಳಲಾಗುತ್ತದೆ. ಆದರೆ ಜಿಲ್ಲಾ ಕೇಂದ್ರದಲ್ಲಿ ಮಾತ್ರ ಪರೀಕ್ಷ ಕೇಂದ್ರಗಳಿರುವ ಕಾರಣ ಬಹುತೇಕ ಕೃಷಿಕರು ಇದರ ಉಸಾಬರಿಯೇ ಬೇಡ ಎಂದು ಸುಮ್ಮನಾಗುತ್ತಿದ್ದಾರೆ.

ವರದಿಗೆ ವಾರ ಕಾಯಬೇಕು :

ಪುತ್ತೂರು, ಸುಳ್ಯ ತಾ|ನ ಎರಡು ಸೊಸೈಟಿಗಳಲ್ಲಿ ಖಾಸಗಿ ಪರೀಕ್ಷ ಕೇಂದ್ರಗಳಿವೆ. ಆದರೆ ತಾ| ಕೇಂದ್ರದಲ್ಲಿ ಸರಕಾರಿ ಮಣ್ಣು ಪರೀಕ್ಷ ಕೇಂದ್ರ ಇಲ್ಲ. ಪುತ್ತೂರು, ಸುಳ್ಯದ ಕೃಷಿಕರು ಮಣ್ಣನ್ನು ತೆಗೆದುಕೊಂಡು ಜಿಲ್ಲಾ ಕೇಂದ್ರಕ್ಕೆ ತೆರಳಿದರೆ ಅಲ್ಲಿಂದ ವರದಿ ಸಿಗಲು ವಾರವೇ ಹಿಡಿಯುತ್ತದೆ. ಇಲಾಖೆಯ ಮೂಲಕ ಕಳು ಹಿಸುವ ಅವಕಾಶ ಇದ್ದರೂ, ನೇರವಾಗಿ ರೈತರು ಕೊಂಡು ಹೋಗಲೂಬಹುದು. ಇವೆರೆಡು ಪ್ರಕ್ರಿಯೆ ತತ್‌ಕ್ಷಣಕ್ಕೆ ಆಗದು. ಏಕೆಂದರೆ ಇಡೀ ಜಿಲ್ಲೆಯ ಕೃಷಿ ಭೂಮಿಗೆ ಸಂಬಂಧಿಸಿದ ಮಣ್ಣು ತಪಾಸಣೆ ಜಿಲ್ಲಾ ಕೇಂದ್ರದಲ್ಲಿ ನಡೆಯುವ ಕಾರಣ ಗುಣ ಮಟ್ಟದ ವರದಿ ಕೈ ಸೇರಲು ವಿಳಂಬವಾಗು ತ್ತಿದೆ.

ಮಣ್ಣು ಮಾದರಿ ಸಂಗ್ರಹ ಹೇಗೆ? :

ಮಣ್ಣಿನ ವಿಶ್ಲೇಷಣೆಗೆ ಸುಮಾರು ಅರ್ಧ ಕೆ.ಜಿ. ಮಣ್ಣು ಸಾಕಾಗುತ್ತದೆ. ಸಂಗ್ರಹಿಸಿದ ಎಲ್ಲ ಮಣ್ಣಿನ ಉಪ ಮಾದರಿಗಳನ್ನು ಮಿಶ್ರಣ ಮಾಡಿ ಅಗಲವಾದ ಪಾಲಿಥಿನ್‌ ಹಾಳೆಯ ಮೇಲೆ ಸುರಿದು, ಸಮವಾಗಿ ಹರಡಿ ನಾಲ್ಕು ಭಾಗಗಳಾಗಿ ಮಾಡಿ ಗುರುತು ಹಾಕಲಾಗುತ್ತದೆ. ಕೆಲವು ಪ್ರಕ್ರಿಯೆ ನಡೆದ ಬಳಿಕ ಪ್ಲಾಸ್ಟಿಕ್‌ ಚೀಲ ಅಥವಾ ಬಟ್ಟೆಯಲ್ಲಿ ಮಣ್ಣನ್ನು ತುಂಬಿ, ಅದರ ಮೇಲೆ ರೈತನ ಹೆಸರು, ಗ್ರಾಮ, ತಾಲೂಕು, ಮಣ್ಣಿನ ಮಾದರಿ ಅನುಕ್ರಮ ಸಂಖ್ಯೆ, ಸರ್ವೇ ನಂಬರ್‌, ಮಣ್ಣಿನ ನಮೂನೆ, ಮಾದರಿಯನ್ನು ತೆಗೆದ ಆಳ, ಮೂರು ವರ್ಷಗಳಲ್ಲಿ ಬೆಳೆದ ಬೆಳೆಗಳು, ಬಳಸಿದ ಗೊಬ್ಬರಗಳು ಹಾಗೂ ನೀರಾವರಿ ಮತ್ತು ಬೆಳೆಯಲು ಉದ್ದೇಶಿಸಿರುವ ಬೆಳೆಗಳು ಸೇರಿದಂತೆ ಎಲ್ಲ ವಿವರಗಳನ್ನು ದಾಖಲಿಸಿ, ಪ್ರಯೋಗಾಲಯಕ್ಕೆ ಕಳುಹಿಸಿ ಮಣ್ಣಿನ ಗುಣಮಟ್ಟವನ್ನು ಪರೀಕ್ಷಿಸಲಾಗುತ್ತದೆ.

ರೈತರಿಗೆ ಪೋಷಕಾಂಶಗಳ ತಿಳಿವಳಿಕೆ :

ಮಣ್ಣು ಪರೀಕ್ಷೆ ಕೇಂದ್ರದಲ್ಲಿ ಮಣ್ಣಿನ ಫಲವತ್ತತೆಗೆ ಸಂಬಂಧಿಸಿದಂತೆ ಸಾರಜನಕ,ರಂಜಕ, ಪೊಟಾಷ್‌, ರಸಸಾರ, ಸಾವಯವ ಇಂಗಾಲ, ಲಭ್ಯವಿರುವ ಗಂಧಕ, ಸತು, ಬೋರಾನ್‌, ಕಬ್ಬಿಣ, ಮ್ಯಾಂಗನೀಸ್‌ ಹಾಗೂ ತಾಮ್ರದ ಅಂಶಗಳು ಯಾವ ಪ್ರಮಾಣದಲ್ಲಿವೆ ಎಂಬುದನ್ನು ಆಂಶಿಕವಾಗಿ ವಿಶ್ಲೇಷಣೆ ಮಾಡಲಾಗುತ್ತದೆ. ಪರೀಕ್ಷೆ ಅನಂತರ ರೈತರಿಗೆ ನೀಡಿರುವ “ಮಣ್ಣು ಆರೋಗ್ಯ ಚೀಟಿ’ಯಲ್ಲಿ ಎಲ್ಲ ವಿವರಗಳನ್ನು ದಾಖಲಿಸಲಾಗುತ್ತದೆ. ಮಣ್ಣಿನ ಫಲವತ್ತತೆಗೆ ಅನುಗುಣವಾಗಿ ರೈತರು ಬಳಸಬೇಕಿರುವ ಗೊಬ್ಬರ ಹಾಗೂ ಪೋಷಕಾಂಶಗಳ ಬಗ್ಗೆ ತಿಳಿವಳಿಕೆ ನೀಡಲಾಗುತ್ತದೆ.

ಭವಿಷ್ಯದಲ್ಲಿ ಜಿಲ್ಲಾ ಕೇಂದ್ರವಾಗಲಿರುವ ಪುತ್ತೂರಿನಲ್ಲಿ ಮಣ್ಣು ಪರೀಕ್ಷ ಕೇಂದ್ರ ತೆರೆಯಲು ಕೃಷಿ ಇಲಾಖೆಗೆ ಸೂಚಿಸಲಾಗಿದೆ. ಇದರಿಂದ ಕೃಷಿಕರು ಜಿಲ್ಲಾ ಕೇಂದ್ರಕ್ಕೆ ತೆರಳಬೇಕಾದ ಪ್ರಮೇಯ ತಪ್ಪಲಿದೆ. ಜತೆಗೆ ಪ್ರತಿ ಕೃಷಿಕನಿಗೆ ತನ್ನ ಜಮೀನಿನ ಮಣ್ಣಿನ ಪರೀಕ್ಷೆ ಮಾಡಿಸಲು ಅವಕಾಶ ಸಿಗುತ್ತದೆ. -ಸಂಜೀವ ಮಠಂದೂರು,  ಶಾಸಕರು, ಪುತ್ತೂರು

ಪುತ್ತೂರಿನಲ್ಲಿ ಮಣ್ಣು ಪರೀಕ್ಷ ಕೇಂದ್ರ ತೆರೆಯವಂತೆ ಶಾಸಕರು ಸೂಚಿಸಿದ ಹಿನ್ನೆಲೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಮೂಲಕ ಕೃಷಿ ಆಯುಕ್ತರ ಕಚೇರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. -ನಾರಾಯಣ ಶೆಟ್ಟಿ, ಸಹಾಯಕ ಕೃಷಿ ನಿರ್ದೇಶಕ,ಪುತ್ತೂರು ತಾಲೂಕು

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.