Puttur; ಅಯೋಧ್ಯೆಗೆ ತೆರಳಿದ್ದ ವ್ಯಕ್ತಿಯನ್ನು ರೈಲಿನಲ್ಲಿ ದೋಚಿದರು!

ಪುತ್ತೂರಿನ ಯಾತ್ರಿಗಳ ತಂಡದಿಂದ ಬೇರ್ಪಟ್ಟಿದ್ದಾಗ ನಡೆದ ಘಟನೆ

Team Udayavani, Aug 30, 2024, 7:30 AM IST

pPuttur; ಅಯೋಧ್ಯೆಗೆ ತೆರಳಿದ್ದ ವ್ಯಕ್ತಿಯನ್ನು ರೈಲಿನಲ್ಲಿ ದೋಚಿದರು!Puttur; ಅಯೋಧ್ಯೆಗೆ ತೆರಳಿದ್ದ ವ್ಯಕ್ತಿಯನ್ನು ರೈಲಿನಲ್ಲಿ ದೋಚಿದರು!

ಪುತ್ತೂರು: ಉತ್ತರ ಭಾರತದ ಧಾರ್ಮಿಕ ಕ್ಷೇತ್ರಗಳಿಗೆ ಯಾತ್ರೆಗೆ ತೆರಳಿದ್ದ ವೇಳೆ ತಂಡದಿಂದ ಬೇರ್ಪಟ್ಟಿದ್ದ ಪುತ್ತೂರಿನ ಹಿರಿಯ ವ್ಯಕ್ತಿಯೋರ್ವರನ್ನು ರೈಲಿನಲ್ಲಿ ಅಪರಿಚಿತರ ತಂಡ ದೋಚಿದ ಘಟನೆ ನಡೆದಿದೆ.

ಬೆಟ್ಟಂಪಾಡಿ ಬಳಿಯ ಕಕ್ಕೂರು ನಿವಾಸಿ ಸುಬ್ರಹ್ಮಣ್ಯ ಭಟ್‌ (64) ಅವರ ಲ್ಲಿದ್ದ ಹಣ ಹಾಗೂ ಇತರ ವಸ್ತುಗಳನ್ನು ಅಪರಿಚಿತರು ದಿಲ್ಲಿಯಿಂದ ಅಯೋಧ್ಯೆಗೆ ತೆರಳುತ್ತಿದ್ದ ರೈಲಿನಲ್ಲಿ ದೋಚಿದ್ದು, ಈಗ ಸುರಕ್ಷಿತವಾಗಿ ಮನೆಗೆ ಬಂದಿದ್ದಾರೆ. ಇವರು ವಾರಾಣಸಿ, ಪ್ರಯಾಗ ಮತ್ತು ಗಯಾ ಕ್ಷೇತ್ರಗಳಿಗೆ 30 ಯಾ ತ್ರಿಗಳ ತಂಡದೊಂದಿಗೆ ತೆರಳಿದ್ದರು.

ರಿಕ್ಷಾದಿಂದ ಇಳಿಯುವಾಗ ಬಾಕಿ
ಸುಬ್ರಹ್ಮಣ್ಯ ಭಟ್‌ ಮತ್ತು ಅವರ ಪತ್ನಿ ವೀಣಾ ಸೇರಿದಂತೆ ಜು. 29ರಂದು ಯಾತ್ರಿಗಳ ತಂಡವು ದಿಲ್ಲಿಗೆ ಹೊರಟು, ಜು.31ರಂದು ದಿಲ್ಲಿಯ ನಿಜಾಮುದ್ದೀನ್‌ ರೈಲು ನಿಲ್ದಾಣದಲ್ಲಿ ಇಳಿದಿತ್ತು. ಅಲ್ಲಿ ಊಟ ಮಾಡಲು ಹೊಟೇಲಿಗೆ ತೆರಳಿ, ಬಳಿಕ ರಿಕ್ಷಾದ ಮೂಲಕ ರೈಲು ನಿಲ್ದಾಣಕ್ಕೆ ವಾಪಸು ಬರಬೇಕಿತ್ತು. ಅದರಂತೆ ಊಟ ಮುಗಿಸಿ ಐದಾರು ಆಟೋದಲ್ಲಿ 30 ಜನರು ಹೊರಟರು.

ಸುಬ್ರಹ್ಮಣ್ಯ ಭಟ್‌ ಮತ್ತು ಅವರ ಪತ್ನಿ ಇದ್ದ ರಿಕ್ಷಾದಲ್ಲಿ ಮತ್ತೂ ಮೂವರಿದ್ದರು. ವೀಣಾ ಸಹಿತ ಇತರ ಮೂವರು ರಿಕ್ಷಾದಿಂದ ಇಳಿದು ನಿಲ್ದಾಣಕ್ಕೆ ಹೊರಟರು. ಸುಬ್ರಹ್ಮಣ್ಯ ಭಟ್‌ ಕೊನೆಯವರಾಗಿ ಇಳಿದರು. ಆದರೆ ರಿಕ್ಷಾ ಚಾಲಕ ಹೆಚ್ಚಿನ ಹಣಕ್ಕಾಗಿ ಒತ್ತಾಯಿಸಿದ. ಚಾಲಕನ ಹತ್ತಿರವಿದ್ದ ಸ್ಥಳೀಯರ ಗುಂಪೊಂದು ಒತ್ತಾಯಿಸಿದಾಗ 300 ರೂ. ನೀಡಿ ಬರುಷ್ಟರಲ್ಲಿ ರೈಲು ಹೊರಟಿತ್ತು.

ಪತಿ ರೈಲಿನೊಳಗೆ ಇರಬಹುದು ಎಂದುಕೊಂಡು ವೀಣಾ ರೈಲು ಏರಿದರು. ರೈಲು ಹೊರಟ ಮೇಲೆ ಪತಿ ಇಲ್ಲದಿರುವುದು ಗಮನಕ್ಕೆ ಬಂದಿದ್ದು, ತತ್‌ಕ್ಷಣ ಅವರು ಕರೆ ಮಾಡಿದರು. ಈ ವೇಳೆ ಸುಬ್ರಹ್ಮಣ್ಯ ಭಟ್‌ ತಾನು ಬಾಕಿ ಆಗಿರುವುದಾಗಿ ತಿಳಿಸಿದ್ದು, ಇನ್ನೊಂದು ರೈಲಿನಲ್ಲಿ ಬರುವುದಾಗಿ ಹೇಳಿದ್ದರು. ಬಳಿಕ ರಾತ್ರಿ 8.30ಕ್ಕೆ ರೈಲಿನಲ್ಲಿ ಅಯೋಧ್ಯೆಗೆ ತೆರಳಿದ್ದರು.

ರೈಲಿನ ಸಾಮಾನ್ಯ ಬೋಗಿಯಲ್ಲಿದ್ದ ಸುಬ್ರಹ್ಮಣ್ಯ ಭಟ್ಟರನ್ನು ಅಪರಿಚಿತ ನೋರ್ವ ಸ್ನೇಹದಿಂದ ಮಾತನಾಡಿಸಿ ದ. ಆ.1ರಂದು ಮುಂಜಾನೆ 4 ರ ಹೊತ್ತಿಗೆ ಶೌಚಾಲಯಕ್ಕೆ ಹೋಗಿ ಮರ ಳುವ ವೇಳೆ ಅಪರಿಚಿತನು ಹಣ, ಮೊಬೈಲ್‌, ಬಟ್ಟೆ ಬರೆ ಇದ್ದ ಲಗೇಜ್‌ನೊಂದಿಗೆ ಪರಾರಿಯಾಗಿದ್ದ. ಕಳವಾದ ವಸ್ತುಗಳ ಒಟ್ಟು ಮೌಲ್ಯ ಸುಮಾರು 20 ಸಾವಿರ ರೂ. ಆಗಿತ್ತು. ಅಯೋಧ್ಯೆಗೆ ತೆರಳದೆ ಅದರ ಹಿಂದಿನ ನಿಲ್ದಾಣದಲ್ಲಿ ಇಳಿದ ಭಟ್ಟರು, ಸ್ಥಳೀಯರೋರ್ವರ ಸಹಕಾರ ಪಡೆದು ಲಕ್ನೋ ರೈಲ್ವೇ ಪೊಲೀಸ್‌ ಠಾಣೆಗೆ ತೆರಳಿ ಅವರು ವಿಷಯ ತಿಳಿಸಿದರು.

ಪತ್ನಿಯ ಸಂಪರ್ಕ
ಲಕ್ನೋದಿಂದ ಇನ್ನೊಂದು ರೈಲಿನ ಮೂಲಕ ಪ್ರತಾಪಗಡಕ್ಕೆ ಬಂದ ಅವರು, ಜೇಬಿನಲ್ಲಿದ್ದ ಸ್ವಲ್ಪ ಹಣದಲ್ಲಿ ಸಣ್ಣ ಮೊಬೈಲ್‌, ಸಿಮ್‌ ಖರೀದಿಸಿದರು. ಆ. 1ರ ರಾತ್ರಿ 7ಕ್ಕೆ ದೂರವಾಣಿ ಮೂಲಕ ಪತ್ನಿಯನ್ನು ಸಂಪರ್ಕಿಸಿ ವಿಷಯ ತಿಳಿಸಿದರು. ಅದಾಗಲೇ ಪತ್ನಿ ಅವರು ಆಯೋಧ್ಯೆ ತಲುಪಿದ್ದರು. ಸುಬ್ರಹ್ಮಣ್ಯ ಭಟ್ಟರು ತಂಡದಿಂದ ಪ್ರತ್ಯೇಕಗೊಂಡ ವಿಷಯ ಬೆಂಗಳೂರಿನಲ್ಲಿರುವ ಪುತ್ರಿಯ ಗಂಡ ನಿಗೆ ತಿಳಿದು, ಅವರು ಆ.2ರಂದು ಬೆಳಗ್ಗೆ ಪ್ರತಾಪಗಡಕ್ಕೆ ತಲುಪಿದರು. ಅಲ್ಲಿ ಮಾವನನ್ನು ಸಂಪರ್ಕಿಸಿ ಬಳಿಕ ಗಯಾ, ಕಾಶಿ ದರ್ಶನ ಮುಗಿಸಿ ವಿಮಾನದಲ್ಲಿ ಬೆಂಗಳೂರಿಗೆ ಮಗಳ ಮನೆಗೆ ಬಂದರು. ಎರಡು ದಿನ ಇದ್ದು ಬಳಿಕ ಊರಿಗೆ ಮರಳಿದ್ದಾರೆ.

ಚಹಾದಲ್ಲಿ ಅಮಲು ಪದಾರ್ಥ?
ರೈಲಿನಲ್ಲಿ ಪರಿಚಿತನಂತೆ ವರ್ತಿಸಿ ದ್ದವನ ಜತೆಗೆ ಇನ್ನೂ ಇಬ್ಬರಿದ್ದರು. ಅವರು ಭಟ್ಟರಿಗೆ ಮಧ್ಯರಾತ್ರಿ ಚಹಾ ಕೊಟ್ಟಿದ್ದರು. ಬೆಳಗ್ಗೆ 3.30ರ ಹೊತ್ತಿಗೆ ಅಪರಿಚಿತರು, “ಶೌಚಾಲಯಕ್ಕೆ ಹೋಗಿ ಬನ್ನಿ, ನೀವು ಇಳಿಯುವ ನಿಲ್ದಾಣ ಹತ್ತಿ ರದಲ್ಲಿದೆ’ ಎಂದಿದ್ದರು. ಹೀಗಾಗಿ ಸುಬ್ರಹ್ಮಣ್ಯ ಭಟ್‌ ಶೌಚಾಲಯಕ್ಕೆ ಹೋದಾಗ ಅಪರಿಚಿತರು ಲಗೇ ಜನ್ನು ದೋಚಿದರು. ಚಹಾ ಕುಡಿದ ಬಳಿಕ ನಿದ್ರೆಯ ಮಂಪರು ಆವ ರಿಸಿದ್ದರಿಂದ ಅವರು ಯಾವ ನಿಲ್ದಾ ಣದಲ್ಲಿ ಇಳಿದರು ಎನ್ನುವುದು ತಿಳಿಯದು. ಚಹಾದಲ್ಲಿ ಅಮಲು ಪದಾರ್ಥ ಬೆರೆಸಿರುವ ಸಾಧ್ಯತೆ ಇದೆ ಎನ್ನುತ್ತಾರೆ ಅವರ ಪುತ್ರ ಕೃಷ್ಣ ಪ್ರಸಾದ್‌ ಕಕ್ಕೂರು.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಎಪಿಎಂಸಿ ರೈಲ್ವೇ ಸಂಪರ್ಕ ರಸ್ತೆಗೆ ಭೂ ಸ್ವಾಧೀನವೇ ಸವಾಲು

Puttur: ಎಪಿಎಂಸಿ ರೈಲ್ವೇ ಸಂಪರ್ಕ ರಸ್ತೆಗೆ ಭೂ ಸ್ವಾಧೀನವೇ ಸವಾಲು

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

BC-Road

Audio Contraversy: ಶರಣ್‌ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

Electrcity

Sulya: ಲೈನ್‌ ದುರಸ್ತಿ ವೇಳೆ ಕಾರ್ಮಿಕನಿಗೆ ವಿದ್ಯುತ್‌ ಆಘಾತ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.