Puttur : ಬಿಜೆಪಿ ನಗರ, ಗ್ರಾಮಾಂತರ ಮಂಡಲ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಆಯ್ಕೆ


Team Udayavani, Aug 14, 2024, 7:14 PM IST

Puttur : ಬಿಜೆಪಿ ನಗರ, ಗ್ರಾಮಾಂತರ ಮಂಡಲ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಆಯ್ಕೆ

ಪುತ್ತೂರು: ಪುತ್ತೂರು ಬಿಜೆಪಿ ಗ್ರಾಮಾಂತರ ಮತ್ತು ನಗರ ಮಂಡಲದ ನೂತನ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಯನ್ನು ನೇಮಿಸಲಾಗಿದೆ. ಆಯ್ಕೆಯಲ್ಲಿ ಪುತ್ತಿಲ ಪರಿವಾರ, ಬಿಜೆಪಿ ಬಣ ಎರಡಕ್ಕೂ ಮನ್ನಣೆ ನೀಡಿ ವಿವಾದ ಉಂಟಾಗದಂತೆ ಎಚ್ಚರ ವಹಿಸಿದೆ.

ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ರ್ಯದರ್ಶಿಗಳಾಗಿ ಉಮೇಶ್ ಗೌಡ, ಪ್ರಶಾಂತ ನೆಕ್ಕಿಲಾಜೆ, ಪುತ್ತೂರು ನಗರ ಮಂಡಲದ ಅಧ್ಯಕ್ಷರಾಗಿ ಶಿವಕುಮಾರ್ ಕಲ್ಲಿಮಾರ್, ಪ್ರಧಾನ ಕಾರ್ಯದರ್ಶಿಗಳಾಗಿ ನಾಗೇಶ್ ಪ್ರಭು, ಅನಿಲ್ ತೆಂಕಿಲ ಅವರನ್ನು ನೇಮಕ ಮಾಡಲಾಗಿದೆ. ಎರಡೂ ಮಂಡಲದಲ್ಲಿ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡು ಅನಂತರ ಬಿಜೆಪಿಗೆ ಸೇರ್ಪಡೆಯಾಗಿದ್ದ ಮುಖಂಡರಿಗೆ ನೀಡಲಾಗಿದೆ. ತನ್ಮೂಲಕ ಎರಡೂ ಬಣವನ್ನು ಒಂದಾಗಿ ಕೊಂಡೊಯ್ಯಲು ಹೈಕಮಾಂಡ್ ತಂತ್ರ ರೂಪಿಸಿರುವುದು ಸ್ಪಷ್ಟವಾಗಿದೆ. ಇದರ ಜತೆಗೆ ಪುತ್ತಿಲ ಪರಿವಾರದಲ್ಲಿ ಮುಂಚೂಣಿ ನಾಯಕರಾಗಿದ್ದ ಪುತ್ತಿಲ ಪರಿವಾರದ ಅಧ್ಯಕ್ಷರಾಗಿದ್ದ ಪ್ರಸನ್ನ ಮಾರ್ಥ ಅವರನ್ನು ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷರನ್ನಾಗಿ ನಿಯಕ್ತಿಗೊಳಿಸಲಾಗಿದೆ.

ಆಯ್ಕೆಯ ಸವಾಲು
ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷೇತರವಾಗಿ ಸ್ಪರ್ದಿಸಿದ್ದ ಅರುಣ್ ಪುತ್ತಿಲ ಅವರು ರಾಜ್ಯಮಟ್ಟದ ನಾಯಕರ ಸಂಧಾನದ ಫಲವಾಗಿ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಮರಳಿ ಬಿಜೆಪಿ ಸೇರಿದ್ದರು. ಪಕ್ಷಕ್ಕೆ ಸೇರ್ಪಡೆ ಸಂದರ್ಭದಲ್ಲಿ ಮಂಡಲ ಅಧ್ಯಕ್ಷತೆಯ ಬೇಡಿಕೆಯನ್ನು ಇರಿಸಲಾಗಿತ್ತುಆರಂಭದಲ್ಲಿ ಅರುಣ್ ಅವರಿಗೆ ಜಿಲ್ಲಾಧ್ಯಕ್ಷತೆ ನೀಡುವಂತೆ ಪುತ್ತಿಲ ಬೆಂಬಲಿಗರು ಪಟ್ಟು ಹಿಡಿದಿದ್ದರು. ಪಕ್ಷವು ಪಾಧ್ಯಕ್ಷತೆಯ ಆಫರ್ ನೀಡಿತ್ತು. ಇದನ್ನು ಪುತ್ತಿಲ ಬೆಂಬಲಿಗರು ತಿರಸ್ಕರಿಸಿದ್ದರು. ಲೋಕಸಭಾ ಚುನಾವಣೆ ಬಳಿಕ ಅರುಣ್ ಅವರಿಗೆ ಮಂಡಲ ಅಧ್ಯಕ್ಷತೆ ದೊರೆಯುವ ಮಾತು ಕೇಳಿ ಬಂದಿತ್ತು. ಪರ ವಿರೋಧದ ಗೊಂದಲದಿಂದ ಆಯ್ಕೆ ಪ್ರಕ್ರಿಯೆಯು ಅರ್ಧದಲ್ಲೇ ಬಾಕಿಯಾಗಿತ್ತು. ಜು.17 ರಂದು ನಡೆದ ಮಂಡಲ ಅಧ್ಯಕ್ಷರ ಅಪೇಕ್ಷಿತರ ಸಭೆಯಲ್ಲಿ ಅಧ್ಯಕ್ಷತೆ ಸ್ಥಾನಕ್ಕೆ ಅರುಣ್ ಪುತ್ತಿಲ ಅವರ ಹೆಸರನ್ನು ಯಾರೂ ಸೂಚಿಸಿರಲಿಲ್ಲ. ಹೀಗಾಗಿ ಪುತ್ತಿಲ ಬದಲಾಗಿ ಬೇರೆಯವರಿಗೆ ಅವಕಾಶ ನೀಡುವುದು ನಿಶ್ಚಿತವಾಗಿತ್ತು.

ಇದನ್ನೂ ಓದಿ: Gadaga: ಸೊಸೆ ಮಾಡಿದ ಮೋಸಕ್ಕೆ ಬೀದಿಗೆ ಬಂದ ಬದುಕು… ದಯಾಮರಣ ಕೋರಿ ಅರ್ಜಿ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.