Puttur: ಲಾರಿ-ದೋಸ್ತ್ ವಾಹನ ನಡುವೆ ಢಿಕ್ಕಿ; ಆರೋಪಿಗೆ ಶಿಕ್ಷೆ ಪ್ರಕಟ
Team Udayavani, Oct 28, 2024, 7:30 AM IST
ಪುತ್ತೂರು: ಕಡಬ ತಾಲೂಕು ಕೊಣಾಲು ಗ್ರಾಮದ ಕೋಲ್ಪೆ ಮಸೀದಿ ಬಳಿ 2021ರ ಫೆ. 25ರಂದು ಲಾರಿ ಹಾಗೂ ದೋಸ್ತ್ ವಾಹನ ನಡುವೆ ಢಿಕ್ಕಿ ಸಂಭವಿಸಿ ದೋಸ್ತ್ ವಾಹನ ಚಾಲಕ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಚ್. ಆರ್. ಶಿವಣ್ಣ ಅವರ ಪೀಠ ಲಾರಿ ಚಾಲಕನಿಗೆ 6 ತಿಂಗಳ ಜೈಲು ಶಿಕ್ಷೆ ಮತ್ತು ಒಂದು ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
ಹಾಸನ ಕಡೆಗೆ ಹೋಗುತ್ತಿದ್ದ ಲಾರಿ ಹಾಗೂ ಮಂಗಳೂರು ಕಡೆಗೆ ಹೋಗುತ್ತಿದ್ದ ದೋಸ್ತ್ ಗಾಡಿ ನಡುವೆ ಈ ಢಿಕ್ಕಿ ಸಂಭವಿಸಿತ್ತು. ಪರಿಣಾಮ ದೋಸ್ತ್ ಗಾಡಿ ಚಾಲಕ ಚೇತನ್ ಗಂಭೀರ ಗಾಯಗೊಂಡ ಪರಿಣಾಮ ಮೃತಪಟ್ಟಿದ್ದರು. ಸರಕಾರದ ಪರವಾಗಿ ಅಭಿಯೋಜಕ ಕವಿತಾ ವಾದ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್ಬಸ್ ಸ್ಥಾವರ ಉದ್ಘಾಟನೆ
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್
ಡಾಲರ್ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.