![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 7, 2021, 8:40 AM IST
ಪುತ್ತೂರು: ಬನ್ನೂರು ಜೈನರಗುರಿ ಸಮೀಪ ಯುವಕರ ಮಧ್ಯೆ ಗಲಾಟೆ ನಡೆದು ಇಬ್ಬರು ಯುವಕರು ತಲವಾರಿನಲ್ಲಿ ಹಲ್ಲೆಗೆ ಯತ್ನಿಸಿ ಪರಾರಿಯಾಗಿರುವುದಾಗಿ ವರದಿಯಾಗಿದೆ.
ಜು.6ರಂದು ರಾತ್ರಿ ಯುವಕರ ಗುಂಪೊಂದು ಕುಳಿತುಕೊಂಡು ಮಾತನಾಡುತ್ತಿದ್ದ ಸಮಯ ಇನ್ನೊಂದು ಕೋಮಿನ ಯುವಕರ ಗುಂಪು ಅಲ್ಲಿಗೆ ಆಗಮಿಸಿದ್ದು ಈ ಸಂದರ್ಭ ಕ್ಷುಲ್ಲಕ ವಿಚಾರದಲ್ಲಿ ಅವರೊಳಗೆ ಮಾತಿನ ಚಕಮಕಿ, ಗಲಾಟೆ ನಡೆದಿದೆ.
ನಂತರದ ಬೆಳವಣಿಗೆಯಲ್ಲಿ ಸ್ಥಳೀಯ ಅಂಗಡಿಯೊಂದರಲ್ಲಿದ್ದ ಕೆಲ ಯುವಕರ ಮೇಲೆ ಇನ್ನೊಂದು ಕೋಮಿನ ಯುವಕರಿಬ್ಬರು ತಲವಾರಿನಿಂದ ಹಲ್ಲೆ ನಡೆಸಲು ಯತ್ನಿಸಿ ಪರಾರಿಯಾಗಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ತುಸು ಹೊತ್ತು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತಾದರೂ ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಸಂಭಾವ್ಯ ಘರ್ಷಣೆಯನ್ನು ತಪ್ಪಿಸಿದ್ದಾರೆ ಎಂದು ಹೇಳಲಾಗಿದೆ.
ಘಟನೆ ಕುರಿತು ಫಯಾಝ್ ಎಂಬವರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಅಭಿಜಿತ್ ಮತ್ತು ಶರತ್ ಎಂಬೀರ್ವರು ತಲವಾರ್ ಪ್ರದರ್ಶಿಸುತ್ತಾ ಬೆದರಿಕೆಯೊಡ್ಡಿದ್ದಾಗಿ ಆರೋಪಿಸಲಾಗಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.