ಪುತ್ತೂರು: ರಸ್ತೆಗಿಳಿದ ಶೇ. 85 ಸರಕಾರಿ ಬಸ್‌ 


Team Udayavani, Sep 20, 2021, 3:00 AM IST

ಪುತ್ತೂರು: ರಸ್ತೆಗಿಳಿದ ಶೇ. 85 ಸರಕಾರಿ ಬಸ್‌ 

ಪುತ್ತೂರು: ದೀರ್ಘ‌ ಸಮಯದಿಂದ ಕಾಡಿದ ಕೋವಿಡ್‌ ಸಂಕಷ್ಟದ ಬಳಿಕ ಪುತ್ತೂರು ಕೆಎಸ್‌ಆರ್‌ಟಿಸಿ ವಿಭಾಗ ವ್ಯಾಪ್ತಿಯಲ್ಲಿ ಬಸ್‌ ಓಡಾಟ ಸಂಖ್ಯೆ ಈಗ ಹೆಚ್ಚಳಗೊಂಡಿದ್ದು ಶೇ.85 ರಷ್ಟು ಬಸ್‌ ಓಡಾಟ ನಡೆಸುತ್ತಿವೆ.

ಇದೀಗ ಶಾಲಾ ಕಾಲೇಜು ಪುನಾರಾರಂಭಗೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚಿನ ರೂಟ್‌ಗಳಲ್ಲಿ ಬಸ್‌ ಓಡಾಟಕ್ಕೆ ಬೇಡಿಕೆ ಹೆಚ್ಚಾಗಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಆರ್ಥಿಕ ಪರಿಸ್ಥಿತಿ ಚೇತರಿಕೆ ಕಂಡು ಬರುವ ನಿರೀಕ್ಷೆ ಹೊಂದಲಾಗಿದೆ.

40 ಲಕ್ಷ ರೂ.ಆದಾಯ:

ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗಕ್ಕೆ ಐದು ಘಟಕಗಳಲ್ಲಿ ಪ್ರತೀ ದಿನ 55 ಲಕ್ಷ ರೂ.ಆದಾಯ ಸಂಗ್ರಹವಾಗುತ್ತಿತ್ತು. ಕೋವಿಡ್‌ ಅನಂತರ ಸಂಚಾರ ವ್ಯವಸ್ಥೆ ಮೊಟಕುಗೊಂಡು ಕಳೆದ ಎರಡು ವರ್ಷಗಳಲ್ಲಿ ನಷ್ಟ ಪ್ರಮಾಣ ಮತ್ತಷ್ಟು ಹೆಚ್ಚಾಗಿತ್ತು. ತಿಂಗಳ ಅಂಕಿ-ಅಂಶದಲ್ಲಿ ಕೆಲವು ಘಟಕ ಲಾಭದಲ್ಲಿದ್ದರೆ, ಇನ್ನೂ ಕೆಲವು ನಷ್ಟ ಅನುಭವಿಸುತ್ತವೆ. ಕೊರೊನಾ ಅನಂತರವಂತೂ ನಷ್ಟದ ಅಂತರ ಮತ್ತಷ್ಟು ಹೆಚ್ಚಾಗಿತ್ತು. ವಿಭಾಗ ವ್ಯಾಪ್ತಿಯಲ್ಲಿ 560 ಬಸ್‌ಗಳಿವೆ. ಲಾಕ್‌ಡೌನ್‌ ಪ್ರಾರಂಭದ ಕೆಲವು ತಿಂಗಳು ಪೂರ್ಣ ನಷ್ಟ ಉಂಟಾಗಿತ್ತು. ಬಸ್‌ನ ಪ್ರತೀ ಕಿ.ಮೀ. ಓಡಾಟಕ್ಕೆ ತಲಾ 37 ರೂ. ಖರ್ಚು ತಗಲುತ್ತದೆ. ಪ್ರಸ್ತುತ ಪ್ರತೀ ದಿನ 40 ಲಕ್ಷ ರೂ. ಮಾತ್ರ ಸಂಗ್ರಹವಾಗುತ್ತಿದೆ. ಅಂದರೆ ಕೋವಿಡ್‌ ವಕ್ಕರಿಸಿದಾಗಿನ ಆದಾಯಕ್ಕೆ ಹೋಲಿಸಿದರೆ ನಷ್ಟ ಕಡಿಮೆ ಇದೆ.

ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗೀಯ ವ್ಯಾಪ್ತಿ 6 ತಾಲೂಕುಗಳನ್ನು ಒಳಗೊಂಡಿದೆ. ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಿ.ಸಿ.ರೋಡ್‌ ಹಾಗೂ ಮಡಿಕೇರಿ ಘಟಕಗಳಿವೆ. ಒಟ್ಟು 2,400 ಮಂದಿ ಸಿಬಂದಿ ಇದ್ದಾರೆ. ಈಗಾಗಲೇ ಶೇ.85 ರಷ್ಟು ಬಸ್‌ ಓಡಾಟ ನಡೆಸುತ್ತಿವೆ. ಈ ತಿಂಗಳಲ್ಲಿ ಅದು ಶೇ.90 ಕ್ಕೆ ಏರಿಕೆ ಆಗಲಿದೆ ಎನ್ನುತ್ತಾರೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು.

ಪ್ರಯಾಣಿಕರ ಸಂಖ್ಯೆ ಹೆಚ್ಚಳ:

ಕೋವಿಡ್‌ ಹಿನ್ನೆಲೆಯಲ್ಲಿ ಮುಚ್ಚಿದ ಪ್ರಮುಖ ದೇವಾಲಯಗಳು, ಶಾಲೆ ಕಾಲೇಜುಗಳು ತೆರೆದಿವೆ. ಇದು ಕೆಎಸ್‌ಆರ್‌ಟಿಸಿಗೆ ಲಾಭವಾಗಲಿದೆ ಎಂದು ಪರಿಗಣಿಸಲಾಗಿದೆ.

ಬಿ.ಸಿ.ರೋಡ್‌ ಘಟಕ: 45-48  ಶೆಡ್ಯೂಲ್‌ಗ‌ಬಸ್‌ ಓಡಾಟ  :

ಬಂಟ್ವಾಳ: ಹಂತ ಹಂತವಾಗಿ ಚಟುವಟಿಕೆಗಳು ಚುರುಕಾಗುತ್ತಿದ್ದಂತೆ ಬಿ.ಸಿ.ರೋಡ್‌ ಘಟಕದಿಂದ 45-48 ಶೆಡ್ನೂಲ್‌ಗ‌ಳ ಬಸ್ಸು ಓಡಾಟ ನಡೆಸುತ್ತಿದೆ. ಬಿ.ಸಿ.ರೋಡ್‌ ಘಟಕದಲ್ಲಿ 107 ಬಸ್‌ಗಳಿದ್ದು, ಪೂರ್ಣ ಪ್ರಮಾಣದಲ್ಲಿ ಓಡಾಟ ನಡೆಸುದಾದರೆ 95 ಶೆಡ್ಯೂಲ್‌ಗ‌ಳಲ್ಲಿ ಬಸ್‌ಗಳು ಓಡಬೇಕು. ಬಿ.ಸಿ.ರೋಡ್‌ನಿಂದ ಗ್ರಾಮೀಣ ರೂಟ್‌ಗಳಿಗೆ ತೆರಳುವ ಬಸ್‌ಗಳು ಇನ್ನೂ ಕೂಡ ಎಲ್ಲ ಟ್ರಿಪ್‌ಗ್ಳನ್ನು ಆರಂಭಿಸಿಲ್ಲ. ಸದ್ಯಕ್ಕೆ ಪುತ್ತೂರು-ಸ್ಟೇಟ್‌ಬ್ಯಾಂಕ್‌, ಸ್ಟೇಟ್‌ಬ್ಯಾಂಕ್‌-ವಿಟ್ಲ, ಸ್ಟೇಟ್‌ಬ್ಯಾಂಕ್‌-ಬಿ.ಸಿ.ರೋಡ್‌ ರೂಟ್‌ಗಳಲ್ಲಿ ಹೆಚ್ಚಿನ ಬಸ್‌ ಓಡಾಡುತ್ತಿದೆ.

ಗ್ರಾಮೀಣ ರೂಟ್‌ಗಳಲ್ಲಿ ಬಸ್‌ಗಳು ಓಡಾಟ ನಡೆಸುತ್ತಿದ್ದರೂ, ಇನ್ನು ಕೂಡ ಎಲ್ಲ ಟ್ರಿಪ್‌ಗಳು ಪುನರಾರಂಭಗೊಂಡಿಲ್ಲ. ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದಾಗ ಹೆಚ್ಚಿನ ಬಸ್‌ಗಳು ಓಡಾಡಲಿವೆ ಎಂದು ಕೆಎಸ್‌ಆರ್‌ಟಿಸಿ ಬಿ.ಸಿ.ರೋಡ್‌ ಘಟಕ ವ್ಯವಸ್ಥಾಪಕ ಶ್ರೀಶ ಭಟ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.