Puttur: 64 ಲಕ್ಷ ರೂ.ಅನುದಾನ; ದರ್ಬೆ-ಮರೀಲು ರಸ್ತೆ- ಬೀದಿ ದೀಪ


Team Udayavani, Oct 6, 2023, 6:16 PM IST

Puttur: 64 ಲಕ್ಷ ರೂ.ಅನುದಾನ; ದರ್ಬೆ-ಮರೀಲು ರಸ್ತೆ- ಬೀದಿ ದೀಪ

ಪುತ್ತೂರು: ಕಾಣಿಯೂರು- ಮಂಜೇಶ್ವರ ಅಂತಾರಾಜ್ಯ ಸಂಪರ್ಕ ರಸ್ತೆ ಹಾದು ಹೋಗಿರುವ ಪುತ್ತೂರು ನಗರದ ದರ್ಬೆಯಿಂದ ಮರೀಲು ತನಕದ ಚತುಷ್ಪಥ ರಸ್ತೆಯಲ್ಲಿ ಮುಂಬರುವ ದಿನಗಳಲ್ಲಿ ರಾತ್ರಿ ಹೊತ್ತು ಬೀದಿ ದೀಪದ ಬೆಳಕು ಹರಿಯಲಿದೆ.

ರಸ್ತೆಯ ಡಿವೈಡರ್‌ ಮಧ್ಯೆ ಭಾಗದಲ್ಲಿ ಕಂಬ ಅಳವಡಿಸಿ ವಿದ್ಯುತ್‌ ದೀಪ ಜೋಡಿಸುವ ನಿಟ್ಟಿನಲ್ಲಿ ನೆಲ ಹಂತದ ಕಾಮಗಾರಿ ನಡೆಯುತ್ತಿದ್ದು ಕೆಲವು ದಿನಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಏನಿದು ಯೋಜನೆ?
ದರ್ಬೆಯಿಂದ ಲಿಟ್ಲ ಫ್ಲ ವರ್‌ ಶಾಲೆಯ ತನಕ ಬೀದಿ ದೀಪದ ಬೆಳಕಿನ ವ್ಯವಸ್ಥೆ ಹಿಂದೆಯೇ ಆಗಿತ್ತು. ಅಲ್ಲಿಂದ ಮುಂದಕ್ಕೆ ಮರೀಲು ತನಕ ಅಳವಡಿಕೆ ಬಾಕಿ ಇತ್ತು. ಕ್ಯಾಂಪ್ಕೋ, ಕೂರ್ನಡ್ಕ ಮಸೀದಿ, ಕೆಮ್ಮಿಂಜೆ, ಮರೀಲು ದೇವಾಲಯ ಸಂಪರ್ಕದ ಜತೆಗೆ ಈ ರಸ್ತೆಯು ದಿನಂಪ್ರತಿ ಸಾವಿರಾರು ವಾಹನ, ಪ್ರಯಾಣಕರು ಸಂಚರಿಸುವ ರಸ್ತೆಯಾಗಿದೆ. ಹೀಗಾಗಿ ಅಮೃತ ನಗರೋತ್ಥಾನ-4ರ ಯೋಜನೆಯಡಿ 64 ಲಕ್ಷ ರೂ.ವೆಚ್ಚದಲ್ಲಿ ಬೀದಿ ದೀಪ ಅಳವಡಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

65 ಕಂಬದಲ್ಲಿ 130 ದೀಪ
ದರ್ಬೆಯಿಂದ (ಅರ್ಧ ಭಾಗದ ಅನಂತರ) ಮರೀಲು ತನಕ ರಸ್ತೆ ವಿಭಾಜಕದ ನಡುವೆ 65 ಕಂಬ ಅಳವಡಿಸಲಾಗುತ್ತದೆ. ಪ್ರತೀ ಕಂಬದಲ್ಲಿ ಎರಡು ಬೀದಿ ದೀಪ ಅಳವಡಿಸಲಾಗುತ್ತದೆ. ಕಾಮಗಾರಿ ವಹಿಸಿಕೊಂಡಿರುವ ಗುತ್ತಿಗೆ ಸಂಸ್ಥೆಯು ಕೆಲಸ ಆರಂಭಿಸಿದ್ದು ತಳಮಟ್ಟದಲ್ಲಿ ಕಾಂಕ್ರೀಟ್‌ ಪಿಲ್ಲರ್‌ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ ನೆಲ ಮಟ್ಟದ ಕೆಲಸ ಶೇ.70 ಕ್ಕಿಂತ ಅಧಿಕ ಪೂರ್ಣಗೊಂಡಿದೆ. ಇದು ಪೂರ್ಣಗೊಂಡ ಅನಂತರ ಕಂಬ ಅಳವಡಿಸಿ ಬೀದಿ ದೀಪ ಜೋಡಿಸಲಾಗುತ್ತದೆ.

ಕಾಮಗಾರಿ ಪೂರ್ಣಗೊಂಡ ಅನಂತರದ ಎರಡು ವರ್ಷದ ನಿರ್ವಹಣೆಯನ್ನು ಗುತ್ತಿಗೆ ಸಂಸ್ಥೆಯೇ ನಿರ್ವಹಿಸಲಿದೆ. ಅನಂತರ ನಗರಸಭೆಯು ನಿರ್ವಹಣೆಯ ಜವಾಬ್ದಾರಿ ನಿಭಾಯಿಸಲಿದೆ ಎಂದು ನಗರಸಭೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ದುರ್ಗಾಪ್ರಸಾದ್‌ ತಿಳಿಸಿದ್ದಾರೆ.

ಚತುಷ್ಪಥ ರಸ್ತೆ
ಕೆಲವು ವರ್ಷಗಳ ಹಿಂದೆ ನಗರೋತ್ಥಾನದ ಯೋಜನೆಯಡಿ ಸುಮಾರು 3 ಕೋ.ರೂ. ವೆಚ್ಚದಲ್ಲಿ ಪುತ್ತೂರು ನಗರದ
ದರ್ಬೆ ವೃತ್ತದಿಂದ ಮರೀಲ್‌ವರೆಗಿನ ಚತುಷ್ಪಥ ಕಾಮಗಾರಿ ನಡೆಸಲಾಗಿತ್ತು. ದರ್ಬೆ ವೃತ್ತದಿಂದ ಮರೀಲ್‌ ರಸ್ತೆ ನಗರದಿಂದ ಕವಲೊಡೆಯುವ ಪ್ರಮುಖ ಮಾರ್ಗ ಇದಾಗಿದ್ದು, ಸುಬ್ರಹ್ಮಣ್ಯ- ಮಂಜೇಶ್ವರ ಅಂತಾರಾಜ್ಯ ಹೆದ್ದಾರಿಗೆ ಸಂಪರ್ಕ ಕಲ್ಪಿಸಿದೆ. ದರ್ಬೆ ವೃತ್ತದಿಂದ ಕಾವೇರಿಕಟ್ಟೆ, ಮರೀಲ್‌, ಬೆದ್ರಾಳ, ಪುರುಷರಕಟ್ಟೆ ಮೂಲಕ ಸರ್ವೆ, ಸವಣೂರು, ಕಾಣಿಯೂರು ಮೂಲಕ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿ ಗುರುತಿಸಿಕೊಂಡಿದೆ.

9 ಸಾವಿರಕ್ಕೂ ಅಧಿಕ ಬೀದಿ ದೀಪ
31 ವಾರ್ಡ್‌ಗಳನ್ನು ಒಳಗೊಂಡಿರುವ ನಗರದಲ್ಲಿ ಒಟ್ಟು 9 ಸಾವಿರಕ್ಕೂ ಅಧಿಕ ಬೀದಿ ದೀಪಗಳಿವೆ ಎಂಬ ಅಂಕಿ ಅಂಶವನ್ನು ನಗರಸಭೆ ಅಧಿಕಾರಿಗಳು ನೀಡುತ್ತಾರೆ. ಇದರ ದುರಸ್ತಿಗೆ ನಗರಸಭೆ ವತಿಯಿಂದ ಸಂಪತ್‌ ಎಂಬವರಿಗೆ ಗುತ್ತಿಗೆ ನೀಡಲಾಗಿದೆ. ಗುತ್ತಿಗೆದಾರರು 15 ಮತ್ತು 16 ನಗರಸಭಾ ಸದಸ್ಯರ ಎರಡು ವಾಟ್ಸ್‌ ಆ್ಯಪ್‌ ಗ್ರೂಪ್‌ ಮಾಡಿದ್ದಾರೆ. ಬೀದಿ ದೀಪದ ಸಮಸ್ಯೆಗಳು ಕಂಡು ಬಂದಲ್ಲಿ ನಗರಸಭೆ ಸದಸ್ಯರು ಆ ಗ್ರೂಪ್‌ಗೆ ಸಂದೇಶ ಹಾಕಿದರೆ ಆಗ ಗುತ್ತಿಗೆದಾರರು ಅದರ ದುರಸ್ತಿಗೆ ಕ್ರಮ ಕೈಗೊಳ್ಳುತ್ತಾರೆ. ಸಂಪರ್ಕ ದೃಷ್ಟಿಯಿಂದ ಇದು ಅನುಕೂಲಕಾರಿ ಅನ್ನುತ್ತಾರೆ ನಗರಸಭೆಯ ಕೆಲ ಸದಸ್ಯರು. ಬೀದಿ ದೀಪದ ವಿದ್ಯುತ್‌ ವೆಚ್ಚವನ್ನು ನಗರಸಭೆಯೇ ಪಾವತಿಸುತ್ತದೆ.

ನಗರಸಭೆಯ ಅಮೃತ ನಗರೋತ್ಥಾನ 4 ರಡಿ 64 ಲ.ರೂ. ವೆಚ್ಚದಲ್ಲಿ ದರ್ಬೆ- ಮರೀಲು ತನಕ ಬೀದಿ ದೀಪ(ಎಲ್‌ಇಡಿ ಬಲ್ಬ್) ಅಳವಡಿಸಲಾಗುತ್ತಿದೆ. ಕೆಲಸ ಪ್ರಗತಿಯಲ್ಲಿದೆ.

ಮಧು ಎಸ್‌. ಮನೋಹರ್‌, ಪೌರಾಯುಕ್ತರು, ನಗರಸಭೆ, ಪುತ್ತೂರು

*ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.