Puttur: ಎಪಿಎಂಸಿ ರೈಲ್ವೇ ಸಂಪರ್ಕ ರಸ್ತೆಗೆ ಭೂ ಸ್ವಾಧೀನವೇ ಸವಾಲು

10.5 ಸೆಂಟ್ಸ್‌ ಖಾಸಗಿಯವರಿಗೆ ಸೇರಿದ ಜಾಗ; ಖಾಸಗಿ-ಸರಕಾರಿ ಮೌಲ್ಯದಲ್ಲಿ ಭಾರೀ ವ್ಯತ್ಯಾಸ

Team Udayavani, Sep 18, 2024, 1:03 PM IST

Puttur: ಎಪಿಎಂಸಿ ರೈಲ್ವೇ ಸಂಪರ್ಕ ರಸ್ತೆಗೆ ಭೂ ಸ್ವಾಧೀನವೇ ಸವಾಲು

ಪುತ್ತೂರು: ಎಪಿಎಂಸಿ ರಸ್ತೆಯ ರೈಲ್ವೇ ಅಂಡರ್‌ಪಾಸ್‌ ಸಂಪರ್ಕದ ಒಂದು ಪಾರ್ಶ್ವದ ದ್ವಿಪಥ ರಸ್ತೆ ನಿರ್ಮಾಣ ಕಾಮಗಾರಿ ಪ್ರಾರಂಭಗೊಂಡು ವರ್ಷಗಳೇ ಕಳೆದಿದ್ದು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ರಸ್ತೆ ನಿರ್ಮಾಣ ಅಪೂರ್ಣ ಹಂತದಲ್ಲಿದೆ. ಭೂ ಸ್ವಾಧೀನ ಇತ್ಯರ್ಥಕ್ಕೆ ಹಣ ಹೊಂದಿಸುವವರು ಯಾರೆನ್ನುವ ಬಗೆಗಿನ ಚರ್ಚೆ ಮುಂದುವರಿದಿದೆ.
ಈ ಮಧ್ಯೆ ನಗರಸಭೆಯ ಎರಡನೆ ಅವಧಿಯ ಮೊದಲ ಸಾಮಾನ್ಯ ಸಭೆಯಲ್ಲಿ ಸರಕಾರದಿಂದ ಅನುಮತಿ ಪಡೆದು ನಗರಸಭೆಯೇ ಅನುದಾನ ಭರಿಸಿ ಭೂ ಸ್ವಾಧೀನ ಮಾಡಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸದಸ್ಯರಿಂದ ಆಗ್ರಹ ವ್ಯಕ್ತವಾಗಿದೆ.

ಚತುಷ್ಪಥ ರಸ್ತೆ
13 ಕೋ.ರೂ. ವೆಚ್ಚದ ರೈಲ್ವೇ ಅಂಡರ್‌ ಪಾಸ್‌ಗೆ ಪೂರಕವಾಗಿ ವಾಹನ ಸಂಚಾರಕ್ಕೆ ಹೊಸದಾಗಿ ಯು ಆಕಾರದಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಒಂದು ಪಾರ್ಶ್ವದಲ್ಲಿ ದ್ವಿಪಥ ರಸ್ತೆ ಪೂರ್ಣಗೊಂಡಿದೆ. ಇನ್ನೊಂದು ಭಾಗದ ದ್ವಿಪಥ ರಸ್ತೆಯು ಅಪೂರ್ಣ ಸ್ಥಿತಿಯಲ್ಲಿದೆ. ಎರಡು ಭಾಗದಿಂದ ಕೆಲಸ ಆರಂಭವಾಗಿದ್ದರೂ ರಸ್ತೆಯ ಮಧ್ಯೆ 10.5 ಸೆಂಟ್ಸ್‌ ಜಾಗ ಖಾಸಗಿಯವರಿಗೆ ಸೇರಿದ್ದು ಆ ಜಮೀನು ಸ್ವಾಧೀನ ಆದ ಬಳಿಕವಷ್ಟೇ ಕಾಮಗಾರಿ ನಡೆಸಬೇಕಾದ ಕಾರಣ ಕಾಮಗಾರಿ ಅರ್ಧದಲ್ಲೇ ನಿಂತಿತ್ತು.

ಮಾತುಕತೆ
ಪ್ರಸ್ತುತ ಅಲ್ಲಿ ಸೆಂಟ್ಸ್‌ಗೆ 5 ಲಕ್ಷ ರೂ. ಮಾರುಕಟ್ಟೆ ಮೌಲ್ಯವಿದೆ ಎಂಬ ಬೇಡಿಕೆ ಇದ್ದು ಸರಕಾರದ ಮಾರುಕಟ್ಟೆ ದರ ಅಷ್ಟು ಇಲ್ಲ. ಸರಕಾರಿ ಮಾರುಕಟ್ಟೆಗಿಂತ ಹೆಚ್ಚಿನ ಮೊತ್ತ ಪಾವತಿಸುವ ಅಧಿಕಾರ ಯಾವುದೇ ಇಲಾಖೆಗಳಿಗೂ ಇಲ್ಲ.

ಸರಕಾರಿ ಮೊತ್ತಕ್ಕೆ ಮಾಲಕರು ಒಪ್ಪಿಗೆ ನೀಡುವ ಬಗ್ಗೆ ಜೀವಂಧರ್‌ ಜೈನ್‌ ಅಧ್ಯಕ್ಷತೆಯ ಹಿಂದಿನ ಆಡಳಿತ ಭೂ ಮಾಲಕರ ಜತೆ ಚರ್ಚೆ ನಡೆಸಿತ್ತು. ಆಗ ಅವರು ಸಹಮತ ಭಾವ ವ್ಯಕ್ತಪಡಿಸಿದ್ದರೂ ಆ ಮಾತುಕತೆಯ ಮುಂದು ವರಿಸಲು ಸಾಧ್ಯವಾಗಲಿಲ್ಲ. ಜನಪ್ರತಿನಿಧಿಗಳ ಅಧಿಕಾರ ಅವಧಿ ಮುಗಿದಿರುವುದು ಇದಕ್ಕೆ ಕಾರಣ. 14 ತಿಂಗಳಿನಿಂದ ಅಧಿಕಾರಿಗಳ ಆಡಳಿತ ಇದ್ದು ಭೂ
ಸ್ವಾಧೀನ ಪ್ರಕ್ರಿಯೆ ಅರ್ಧದಲ್ಲೇ ನಿಂತು ಹೋಗಿತ್ತು.

ಇನ್ನೊಮ್ಮೆ ಮಾತುಕತೆ ನಡೆಸಬೇಕು
ಸರಕಾರಿ ದರದಲ್ಲಿ ಭೂ ಸ್ವಾಧೀನ ಮಾಡುವ ಬಗ್ಗೆ ಭೂ ಮಾಲಕರ ಜತೆ ಹಿಂದೆ ಚರ್ಚೆ ನಡೆಸಲಾಗಿತ್ತು. ಅವರೊಂದಿಗೆ ಇನ್ನೊಮ್ಮೆ ಮಾತುಕತೆ ನಡೆಸಬೇಕು. ಬೇರೆ ಇಲಾಖೆಗಳು ಅನುದಾನ ನೀಡಲು ಸಾಧ್ಯವಿಲ್ಲದ ಕಾರಣ ನಗರಸಭೆಯು ಜಿಲ್ಲಾಧಿಕಾರಿಗಳ ಮೂಲಕ ಸರಕಾರದ ಒಪ್ಪಿಗೆ ಪಡೆದು ಭೂ ಸ್ವಾಧೀನಕ್ಕೆ ನಗರಸಭೆಯಿಂದಲೇ ಅನುದಾನ ಭರಿಸಬೇಕು. ಈಗಾಗಲೇ ರಸ್ತೆ ಅಪೂರ್ಣದ ಕಾರಣದಿಂದ ಅಲ್ಲಿ ಅಪಘಾತಗಳು ಸಂಭವಿಸುತ್ತಿದ್ದು ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರ ಆಗಬೇಕು.
-ಜೀವಂಧರ್‌ ಜೈನ್‌, ಮಾಜಿ ಅಧ್ಯಕ್ಷರು, ನಗರಸಭೆ ಪುತ್ತೂರು

ರಸ್ತೆ ನಿರ್ಮಾಣಕ್ಕೆ ಭೂ ಸ್ವಾಧೀನದ ಜವಾಬ್ದಾರಿ ವಹಿಸುವವರು ಯಾರೆನ್ನುವ ಬಗ್ಗೆ ಇನ್ನೂ ಇತ್ಯರ್ಥ ಆಗಿಲ್ಲ. ಎಪಿಎಂಸಿ ಅಥವಾ ನಗರಸಭೆ ಭೂ ಸ್ವಾಧೀನದ ಮೊತ್ತ ಭರಿಸುವಂತೆ ಹಿಂದಿನ ಸಂಸದರೂ ನಿರ್ದೇಶಿಸಿದ್ದರೂ ಅದಕ್ಕೆ ಆ ಎರಡು ಇಲಾಖೆಗಳು ಒಪ್ಪಿಗೆ ಸೂಚಿಸಿಲ್ಲ

ಟಾಪ್ ನ್ಯೂಸ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

4-belthangady

Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.