‘ಮಾಚಿದೇವ ಕ್ರಾಂತಿಕಾರಿ ಹೋರಾಟಗಾರ’


Team Udayavani, Feb 2, 2019, 6:41 AM IST

february-12.jpg

ಪುತ್ತೂರು: ಹನ್ನೆರಡನೆಯ ಶತ ಮಾನದಲ್ಲಿ ಸಾಮಾಜಿಕ ಸಮಸ್ಯೆಗಳ ವಿರುದ್ಧ ಕ್ರಾಂತಿಕಾರಿ ಧೋರಣೆಯ ವ್ಯಕ್ತಿ ತ್ವದ ಮೂಲಕ ಹೋರಾಟ ಮಾಡಿದ ದಿಟ್ಟ ವಚನಕಾರ ಮಡಿವಾಳ ಮಾಚಿದೇವ ಎಂದು ಸವಣೂರು ಸ.ಪ.ಪೂ. ಕಾಲೇಜಿನ ಉಪನ್ಯಾಸಕ ಬಿ.ವಿ. ಸೂರ್ಯನಾರಾಯಣ ಅವರು ಹೇಳಿದರು.

ಪುತ್ತೂರು ತಾಲೂಕು ನಾಡಹಬ್ಬಗಳ ಆಚರಣ ಸಮಿತಿಯ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಚರಿಸಲಾದ ಮಡಿವಾಳ ಮಾಚಿದೇವ ಜಯಂತಿಯಲ್ಲಿ ಅವರು ಸಂಸ್ಮರಣ ಉಪನ್ಯಾಸ ನೀಡಿದರು.

12ನೇ ಶತಮಾನದ ಪ್ರಮುಖ ಕಾಲಘಟ್ಟ ದಲ್ಲಿ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ತಾರತಮ್ಯ ಸಹಿತ ಸಾಮಾಜಿಕ, ಧಾರ್ಮಿಕ ಸಮಸ್ಯೆಗಳು ವ್ಯಾಪಕವಾಗಿ ದ್ದವು. ಪ್ರಗತಿ ಪರ ಧೋರಣೆಯ ಮೂಲಕ ಸಮಾಜದಲ್ಲಿ ಪರಿವರ್ತನೆಯ ಉದ್ದೇಶದೊಂದಿಗೆ ಬಸವಣ್ಣ ಅವರು ಮುನ್ನೆಲೆಗೆ ತಂದ ಅನುಭವ ಮಂಟಪ ಮನುಕುಲದ ಪ್ರಥಮ ಸಂಸತ್ತು ಎನ್ನುವ ಹೆಗ್ಗಳಿಕೆಯನ್ನು ಪಡೆದಿದೆ. ಅನುಭವ ಮಂಟಪದ ಪ್ರಮುಖ ಸದಸ್ಯನಾಗಿ ಮಡಿವಾಳ ಮಾಚಿದೇವ ನಡೆಸಿದ ಹೋರಾಟ ಸ್ಮರಣೀಯ ಎಂದರು.

ಪರಿವರ್ತನೆಯೇ ಮಹತ್ವ
ಮಡಿವಾಳ ಮಾಚಿದೇವ ಅವರು ವೃತ್ತಿಯನ್ನು ಪಾಲಿಸಿಕೊಂಡು ಶರಣರ ಬಟ್ಟೆಗಳನ್ನು ಶುಚಿ ಮಾಡುವುದಕ್ಕಿಂತ ವಚನ ಸಾಹಿತ್ಯದ ಮೂಲಕ ಸಮಾಜ ಪರಿವರ್ತನೆಯಲ್ಲಿ ತೊಡಗಿಸಿಕೊಂಡಿದ್ದು ಅತ್ಯಂತ ಮಹತ್ವದ ವಿಚಾರ. ಸಾಮಾಜಿಕ ಸಮಸ್ಯೆಗಳನ್ನು ತಮ್ಮ 400ಕ್ಕೂ ಹೆಚ್ಚು ತೀಕ್ಷ್ಣ ವಚನ ಸಾಹಿತ್ಯದ ಮೂಲಕ ಹೋಗಲಾಡಿ ಸುವ ಪ್ರಯತ್ನ ನಡೆಸಿರುವುದು ಆ ಕಾಲಕ್ಕೆ ಮಾದರಿ. ಆದರೆ ಉಳಿದ ವಚನಕಾರರಂತೆ ಮಾಚಿದೇವರ ವಚನಗಳು ವಿಮರ್ಶೆಗೆ ಒಳಗಾಗದೇ ಇರುವುದು ಬೇಸರದ ವಿಚಾರ ಎಂದರು.

ವೈಚಾರಿಕ ಹೋರಾಟ
ವಚನ ಸಾಹಿತ್ಯವನ್ನು ಉಳಿಸುವಲ್ಲಿಯೂ ಅಗತ್ಯ ಸೇವೆ ಸಲ್ಲಿಸಿದವರು ಮಾಚಿದೇವ. ವಚನ ಸಾಹಿತ್ಯ ನಾಶಕ್ಕೆ ಹೊರಟವರ ವಿರುದ್ಧ ಯೋಧನಾಗಿ ಹೋರಾಟ ಮಾಡಿದವರು ಅವರು ಎಂದು ಹೇಳಿದ ಬಿ.ವಿ. ಸೂರ್ಯನಾರಾಯಣ, ತಾವು ಶಿವಶರಣರಾಗಿದ್ದು, ತಪ್ಪಿ ನಡೆವ ಶಿವಶರಣರ ವಿರುದ್ಧ ವೈಚಾರಿಕ ಟೀಕೆಗಳನ್ನು ಮಾಡಿದವರು. ಸ್ವತಃ ಗುರು ಬಸವಣ್ಣರು ತಪ್ಪು ಮಾಡಿದಾಗಲೂ ವಿರೋಧಿಸಿದವರು. ಇದು ಪ್ರಜಾಪ್ರಭುತ್ವ ಮಾದರಿಯಲ್ಲಿ ಧರ್ಮ ಕಟ್ಟುವ ಕಾರ್ಯ ಆಗಲೂ ನಡೆಯುತ್ತಿತ್ತು ಎನ್ನುವುದಕ್ಕೆ ಉದಾಹರಣೆ ಎಂದು ಅಭಿಪ್ರಾಯಪಟ್ಟರು.

ತಾ.ಪಂ. ಇಒ ಜಗದೀಶ್‌ ಎಸ್‌. ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್‌ ಸದಸ್ಯೆ ಮೀನಾಕ್ಷಿ ಮಂಜುನಾಥ, ಮಡಿವಾಳ ಸಮುದಾ ಯದ ಪ್ರಮುಖರು, ತಾಲೂಕು ಕಚೇರಿ ಸಿಬಂದಿ ವರ್ಗದವರು ಪಾಲ್ಗೊಂಡರು.

ಉಪ ತಹಶೀಲ್ದಾರ್‌ ಶ್ರೀಧರ್‌ ಕೋಡಿಜಾಲ್‌ ಸ್ವಾಗತಿಸಿ, ತಾಲೂಕು ಕಚೇರಿ ಸಿಬಂದಿ ದಯಾನಂದ ಕಾರ್ಯ ಕ್ರಮ ನಿರ್ವಹಿಸಿದರು.

ಸರಕಾರಕ್ಕೆ ಅಭಿನಂದನೆ
ಮಡಿವಾಳ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಮಾತನಾಡಿ, ಕಳೆದ ವರ್ಷ ದಿಂದ ಸರಕಾರ ಮಡಿವಾಳ ಮಾಚಿದೇವ ಅವರ ಜಯಂತಿಯನ್ನು ಆಚರಿಸುವ ಮೂಲಕ ಅವರ ಬದುಕಿಗೆ ನ್ಯಾಯ ನೀಡಿದೆ. ಈ ನಿಟ್ಟಿನಲ್ಲಿ ಸರಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಟಾಪ್ ನ್ಯೂಸ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

POlice

Kundapura: ಅಕ್ರಮ ಮದ್ಯ ಸಾಗಾಟ; ವಶ

courts-s

POCSO ಪ್ರಕರಣದ ಆರೋಪಿ ನಟಿ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.