ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಸ್ವಂತ ಕಟ್ಟಡವೇ ಇಲ್ಲ


Team Udayavani, Apr 3, 2018, 4:21 PM IST

3003rjh4.jpg

ಪುತ್ತೂರು ಎ. 2: ಪುತ್ತೂರಿಗೆ ಮಹಿಳಾ ಠಾಣೆ ಮಂಜೂರುಗೊಂಡು ವರ್ಷ ಪೂರೈಸಿದೆ. ಆದರೆ ಮಹಿಳಾ ಠಾಣೆಗೆ ಸ್ವಂತ ಕಟ್ಟಡದಲ್ಲಿ ಕಾರ್ಯ ನಿರ್ವಹಣೆಯ ಭಾಗ್ಯ ಇನ್ನೂ ಲಭಿಸಿಲ್ಲ. ಸುಳ್ಯ, ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕುಗಳನ್ನು ಒಳಗೊಂಡು ಪುತ್ತೂರು ವಿಭಾಗ ಕಾರ್ಯವ್ಯಾಪ್ತಿಯನ್ನು ಹೊಂದಿರುವ  ದ.ಕ. ಜಿಲ್ಲೆಯ 2ನೇ ಮಹಿಳಾ ಪೊಲೀಸ್‌ ಠಾಣೆ ಪುತ್ತೂರಿಗೆ ಮಂಜೂರು ಗೊಂಡು 2017ರ ಮಾ. 11ರಂದು ಸಂಚಾರ ಠಾಣೆಯ ಹೊಸ ಕಟ್ಟಡದಲ್ಲಿ ತಾತ್ಕಾಲಿಕ ಉದ್ಘಾಟನೆಗೊಂಡಿತ್ತು.

ಶಾಸಕರ ಸಹಿತ ಭಾಗಶಃ ಸ್ಥಳೀಯ ಸಂಸ್ಥೆಗಳ ಪ್ರಮುಖ ಸ್ಥಾನಗಳಲ್ಲಿ ಮಹಿಳಾ ಪಾರಮ್ಯ ಮೆರೆದಿರುವ ಪುತ್ತೂರಿಗೆ ಮಹಿಳಾ ಠಾಣೆಯ ಮಂಜೂರಾತಿ ಮತ್ತೂಂದು ಗರಿ ಯನ್ನು ಮೂಡಿಸಿತ್ತು. ಮಹಿಳಾ ಠಾಣೆಯ ಮಂಜೂರಾತಿ ನೆಲೆಯಲ್ಲಿ  ಶಾಸಕಿ ಶಕುಂತಳಾ ಟಿ. ಶೆಟ್ಟಿಯವರು ಗೃಹ ಸಚಿವರ ಮನವೊಲಿ ಸುವಲ್ಲಿ  ಯಶಸ್ವಿಯಾಗಿದ್ದರು.

ಸ್ವಂತ ಕಟ್ಟಡಕ್ಕೆ 20 ಲಕ್ಷ ರೂ.
ಅನಂತರದಲ್ಲಿ ಮಹಿಳಾ ಠಾಣೆಗೆ ಸ್ವಂತ ಕಟ್ಟಡವಾಗಬೇಕೆಂಬ ನಿಟ್ಟಿನಲ್ಲಿ ಆರಂಭಿಸ ಲಾದ ಪ್ರಯತ್ನವೂ ಸಾಕಾರಗೊಂಡು ಸರಕಾರ ಗೃಹ ಇಲಾಖೆಯ ಮೂಲಕ 20 ಲಕ್ಷ ರೂ. ಮಂಜೂರುಗೊಳಿಸಿತ್ತು. ಈ ಅನುದಾನದಲ್ಲಿ ಈ ಹಿಂದೆ ಸಂಚಾರ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದ ಹಳೆಯ ಪೊಲೀಸ್‌ ಸ್ಟೇಷನ್‌ ಕಟ್ಟಡವನ್ನು ಅಭಿವೃದ್ಧಿಪಡಿಸಿ ಅಲ್ಲಿಗೆ ಮಹಿಳಾ ಠಾಣೆ ಯನ್ನು ಸ್ಥಳಾಂತರಿಸುವ ಯೋಜನೆ ಹಾಕಿ ಕೊಂಡಿದ್ದರೂ ಇನ್ನೂ ಕಾರ್ಯಗತಗೊಂಡಿಲ್ಲ.

ನಿರ್ವಹಣೆಯಿಲ್ಲದೆ ಅನಾಥ
ಶ್ರೀ ಮಹಾಲಿಂಗೇಶ್ವರ ದೇವಾಲಯದ ಮುತ್ತು ಬೆಳೆದ ಕೆರೆಯ ಬಳಿ ಮುಖ್ಯರಸ್ತೆಗೆ ಹೊಂದಿಕೊಂಡಂತೆ ಇರುವ ಹಲವು ದಶಕಗಳ ಇತಿಹಾಸ ಹೊಂದಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಚಾರ ಪೊಲೀಸ್‌ ಠಾಣೆ 2015ರ ಸೆ. 7ರಂದು ಪಕ್ಕದ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡಿತ್ತು. ಎರಡೂವರೆ ವರ್ಷಗಳಿಂದ ನಿರ್ವಹಣೆಯಿಲ್ಲದೆ ಕಟ್ಟಡ ಶಿಥಿಲಗೊಳ್ಳುತ್ತಿದೆ.

2010ರಲ್ಲಿ ಪುತ್ತೂರಿಗೆ ಸಂಚಾರ ಪೊಲೀಸ್‌ ಠಾಣೆ ಮಂಜೂರಾದಾಗ ಈ ಕಟ್ಟಡ ವನ್ನು ಸಂಚಾರ ಠಾಣೆಯನ್ನಾಗಿಸಲಾಗಿತ್ತು. ಅದಕ್ಕೂ ಮೊದಲು ಹಲವು ವರ್ಷಗಳಿಂದ ಪುತ್ತೂರು ಪೊಲೀಸ್‌ ಠಾಣೆ ಕಾರ್ಯ ನಿರ್ವ ಹಿಸುತ್ತಿತ್ತು. ಹೀಗೆ ಪುತ್ತೂರಿನ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಹೊಸದಾಗಿ ಆರಂಭಗೊಳ್ಳುವ ವ್ಯವಸ್ಥೆಗಳು ಇದೇ ಕಟ್ಟಡದಲ್ಲಿ ಆರಂಭಗೊಳ್ಳುವುದು ವಿಶೇಷ. ಪ್ರಸ್ತುತ ಮಹಿಳಾ ಠಾಣೆಗೆ ಸಂಬಂಧಪಟ್ಟ ಪಿಎಸ್‌ಐ, ಎಎಸ್‌ಐ ಹಾಗೂ ಸುಮಾರು 7 ಸಿಬಂದಿ ಸಂಚಾರ ಪೊಲೀಸ್‌ ಠಾಣೆಯ ಕಟ್ಟಡದಲ್ಲಿ ವಿಭಾಗ ಮಾಡಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮೂರು ತಾ| ಗಳ ಕಾರ್ಯವ್ಯಾಪ್ತಿಯನ್ನು ಹೊಂದಿರುವ ಮಹಿಳಾ ಠಾಣೆಯ ಸಮರ್ಪಕ ಕರ್ತವ್ಯ ನಿರ್ವಹಣೆ  ಭಾಗವಾಗಿ ಪ್ರತ್ಯೇಕ ವ್ಯವಸ್ಥೆಯ  ಅನಿವಾರ್ಯವೂ ಇವರಿಗಿದೆ.

ಪುನಶ್ಚೇತನ ಯಾವಾಗ?
ಮಹಿಳಾ ಠಾಣೆಯನ್ನು ಈ ಹಳೆಯ ಕಟ್ಟಡಕ್ಕೆ ಸ್ಥಳಾಂತರಿಸುವುದಕ್ಕೆ ಮೊದಲು ಅದನ್ನು 20 ಲಕ್ಷ ರೂ. ವೆಚ್ಚದಲ್ಲಿ ಪುನಶ್ಚೇತನಗೊಳಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರಿಂದ ಸೂಚನೆ ನೀಡಲಾಗಿದೆ. ಆದರೆ ಇನ್ನೂ ಅಭಿವೃದ್ಧಿ ಕಾರ್ಯ ಆರಂಭಗೊಂಡಿಲ್ಲ. ಹಾಲಿ ಭೂತ ಬಂಗಲೆಯಂತಿರುವ ಹಳೆಯ ಪೊಲೀಸ್‌ ಸ್ಟೇಷನ್‌ ಕಟ್ಟಡದ ನಿರ್ವಹಣೆ ಮಾಡುತ್ತಿಲ್ಲವಾದ್ದರಿಂದ ಇನ್ನಷ್ಟು ಶಿಥಿಲಗೊಳ್ಳುವ ಸಾಧ್ಯತೆಯೂ ಇದೆ.

 ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.