ಪುತ್ತೂರು: ಮೇ 24, 25, 26: ಹಲಸು, ಹಣ್ಣು ಗಳ ಮೇಳ


Team Udayavani, May 22, 2024, 2:10 PM IST

ಪುತ್ತೂರು: ಮೇ 24, 25, 26: ಹಲಸು, ಹಣ್ಣು ಗಳ ಮೇಳ

ಪುತ್ತೂರು: ನವತೇಜ ಟ್ರಸ್ಟ್‌, ಜಿ.ಎಲ್‌.ಆಚಾರ್ಯ ಜುವೆಲರ್ಸ್‌ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ 7ನೇ ವರ್ಷದ ಹಲಸು ಮತ್ತು ಹಣ್ಣುಗಳ ಮೇಳ ಮೇ 24, 25 ಹಾಗೂ 26 ರಂದು ಜೈನ ಭವನದಲ್ಲಿ ನಡೆಯಲಿದೆ ಎಂದು ನವತೇಜ ಟ್ರಸ್ಟ್‌ನ ಅನಂತ ಕುಮಾರ್‌ ನೈತಡ್ಕ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲಸಿನ ಹಣ್ಣಿನ ಮೌಲ್ಯವರ್ಧಿತ ಉತ್ಪನ್ನಗಳಿಗೆ ಬೇಡಿಕೆ ಬರಬೇಕು, ಸಂಶೋ ಧನ ಕೇಂದ್ರಗಳು ಹಾಗೂ ಕೃಷಿಕರನ್ನು ಒಂದೇ ಸೂರಿನಡಿ ತಂದು ಕೃಷಿ ಉತ್ಪನ್ನಗಳಿಗೆ ಉದ್ಯಮದ ಸ್ವರೂಪ ನೀಡುವುದು ಮೇಳದ ಉದ್ದೇಶವಾಗಿದೆ ಎಂದರು.

ಮೇಳದಲ್ಲಿ ವಿವಿಧ ತಳಿಯ ಹಲಸಿನ ಹಣ್ಣುಗಳಲ್ಲದೆ, ಪ್ರಸಿದ್ಧ ನರ್ಸರಿಗಳಲ್ಲಿ ಅಭಿವೃದ್ಧಿಪಡಿಸಿದ ತಳಿಗಳು ಹಾಗೂ ಇತರ
ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಹಲಸಿನ ಹಣ್ಣಿನ ವಿವಿಧ ಖಾದ್ಯ ಗಳಾದ ಉಂಡ್ಲಕಾಳು, ಚಿಪ್ಸ್‌,
ಹಪ್ಪಳ, ದೋಸೆ, ಮಂಚೂರಿ, ಕಬಾಬ್‌, \ಮುಳುಕ್ಕ, ಜ್ಯೂಸ್‌, ರೊಟ್ಟಿ, ಕೇಕ್‌, ಹಲ್ವ, ಸೇಮಿಗೆ, ಬನ್ಸ್‌, ಪಲಾವ್‌, ಪಾಯಸ,
ಸೋಂಟೆ, ಕೊಟ್ಟಿಗೆ, ಗೆಣಸೆಲೆ, ಪೋಡಿ, ಮಾಂಬಳ, ಹಣ್ಣಿನ ಐಸ್‌ ಕ್ರೀಂ ಹೀಗೆ ಹಲವು ಬಗೆ ಖಾದ್ಯಗಳನ್ನು ಗ್ರಾಹಕ ವರ್ಗಕ್ಕೆ
ಉಣಬಡಿಸಲಾಗುವುದು ಎಂದರು.

ಮೇ 24 ರಂದು ವಿವಿಧ ಮಳಿಗೆಗಳನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್‌. ಭಟ್‌ ಉದ್ಘಾಟಿಸುವರು. ಸಂಜೆ 4 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್‌ ಕುಮಾರ್‌ ರೈ ಶುಭಾಶಂಸನೆ
ಮಾಡುವರು. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅಧ್ಯಕ್ಷತೆ ವಹಿಸುವರು.

ಪುತ್ತೂರು ಅಡಿಕೆ ಪತ್ರಿಕೆ ಪ್ರಕಾಶಕ ಪಡಾರು ರಾಮಕೃಷ್ಣ ಶಾಸ್ತ್ರಿ ಫಲಪ್ರದ ಪುಸ್ತಕ ಅನಾವರಣ ಮಾಡುವರು. ಮುಖ್ಯ
ಅತಿಥಿಗಳಾಗಿ ಪುತ್ತೂರು ಭಾರತೀಯ ಗೇರು ಸಂಶೋಧನಾಲಯ ನಿರ್ದೇಶಕ ಡಾ| ದಿನಕರ ಅಡಿಗ, ಬನ್ನೂರು ಕೃಷಿ ಪತ್ತಿನ
ಸಹಕಾರ ಸಂಘ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‌, ಹಲಸು ಸ್ನೇಹಿ ಕೂಟದ ಮುಳಿಯ ವೆಂಕಟಕೃಷ್ಣ ಶರ್ಮ ಪಾಲ್ಗೊಳ್ಳುವರು
ಎಂದರು.

ಮೇ 25ರಂದು ನಡೆಯುವ ಗೋಷ್ಠಿಯಲ್ಲಿ ಮಾತೃತ್ವಂ ಶ್ರೀ ರಾಮಚಂದ್ರ ಮಠದ ಅಧ್ಯಕ್ಷ ಈಶ್ವರೀ ಶ್ಯಾಮ ಭಟ್‌ ಬೇರ್ಕಡವು ಅಧ್ಯಕ್ಷತೆ ವಹಿಸುವರು. ನಾಡು ಮಾವು ಸಂರಕ್ಷಣೆಗಾರ ಡಾ| ಮನೋಹರ ಉಪಾಧ್ಯ, ಸುಳ್ಯ ಡು ಮಾವು ಸಂರಕ್ಷಣೆಗಾರ ಜಯರಾಮ ಮುಂಡೋಳಿಮುಲೆ, ಪುಣಚ ಕೊಕ್ಕೋ ಮೌಲ್ಯವರ್ಧನೆಗಾರ ನವೀನ ಕೃಷ್ಣ ಶಾಸ್ತ್ರಿ ರಂಬುಟಾನ್‌ ಕೃಷಿ ಮಾರುಕಟ್ಟೆಯ ವಿಶ್ವಪ್ರಸಾದ್‌ ಸೇಡಿಯಾಪು, ಮಾಪಲತೋಟ ಸುಬ್ರಾಯ ಭಟ್‌ ಮರ್ಕಂಜ ಸುಳ್ಯ, ಪುತ್ತೂರು ಶಿಬರ
ನವನೀತ ನರ್ಸರಿಯ ವೇಣುಗೋಪಾಲ್‌ ಎಸ್‌.ಜೆ. ಪಾಲ್ಗೊಳ್ಳಲಿದ್ದಾರೆ ಎಂದರು.

ಮೇ 26 ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಪತ್ರಕರ್ತ ಡಾ| ಯು. ಪಿ. ಶಿವಾನಂದ ವಹಿಸಲಿದ್ದು, ಪುತ್ತೂರು ಅಡಿಕೆ
ಪತ್ರಿಕೆ ಸಂಪಾದಕ ಶ್ರೀಪಡ್ರೆ ಸಮಾರೋಪ ಭಾಷಣ ಮಾಡುವರು. ಮುಖ್ಯ ಅತಿಥಿಗಳಾಗಿ ಜಿ.ಎಲ್‌.ಆಚಾರ್ಯ ಜುವೆಲರ್ಸ್‌ ಮಾಲಕ ಬಲರಾಮ ಆಚಾರ್ಯ, ಮಂಗಳೂರು ಸಾವಯವ ಕೃಷಿಕ ಗ್ರಾಹಕ ಬಳಗ ಸಂಘಟನ ಕಾರ್ಯದರ್ಶಿ ರತ್ನಾಕರ ಕುಳಾಯಿ,
ಪುತ್ತೂರು ಸಮೃದ್ಧಿ ಗಿಡಗೆಳೆತನ ಸಂಘದ ಅಧ್ಯಕ್ಷ ನಿರಂಜನ ಪೋಳ್ಯ, ಜೇಸಿ ವಲಯ 15 ವಲಯ ಉಪಾಧ್ಯಕ್ಷ ಜೇಸಿ ಶಂಕರ ರಾವ್‌ ಪಾಲ್ಗೊಳ್ಳುವರು ಎಂದರು. ನವತೇಜದ ಸುಹಾಸ್‌ ಮರಿಕೆ, ಜೆಸಿಐ ಉಪಾಧ್ಯಕ್ಷ ಅನೂಪ್‌ ಕೆ.ಜೆ. ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

Hubli: President of Ramakrishna Ashram Swami Raghuveerananda Maharaj is no more

Hubli: ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜರು ಇನ್ನಿಲ್ಲ

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

Oscars 2025: 97ನೇ ಆಸ್ಕರ್‌ಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದ ‘ಲಾಪತಾ ಲೇಡೀಸ್’

Oscars: 97ನೇ ಆಸ್ಕರ್‌ಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದ ‘ಲಾಪತಾ ಲೇಡೀಸ್’

Israel: ವೈಮಾನಿಕ ದಾಳಿಯಲ್ಲಿ ಹಮಾಸ್‌ ನಾಯಕ ಯಾಹ್ಯಾ ಸಾವು? ಇಸ್ರೇಲ್‌ ತನಿಖೆ

Israel: ವೈಮಾನಿಕ ದಾಳಿಯಲ್ಲಿ ಹಮಾಸ್‌ ನಾಯಕ ಯಾಹ್ಯಾ ಸಾವು? ಇಸ್ರೇಲ್‌ ತನಿಖೆ

chaitra j achar joins Marnami movie team

Chaithra J Achar: ಮಾರ್ನಮಿ ತಂಡ ಸೇರಿದ ಚೈತ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಶ್ಮಶಾನ ಭೂಮಿಯಲ್ಲಿ 200ಕ್ಕೂ ಅಧಿಕ ಇಂಗುಗುಂಡಿ ರಚನೆ

Bantwal: ಶ್ಮಶಾನ ಭೂಮಿಯಲ್ಲಿ 200ಕ್ಕೂ ಅಧಿಕ ಇಂಗುಗುಂಡಿ ರಚನೆ

Sullia ನಗರ: ಕೊಂಚ ಎಚ್ಚರ ತಪ್ಪಿದರೂ ಹರೋಹರ!

Sullia ನಗರ: ಕೊಂಚ ಎಚ್ಚರ ತಪ್ಪಿದರೂ ಹರೋಹರ!

Uppinagdy-Miss

Uppinangady: ನೆಲ್ಯಾಡಿಯ ಕಾಲೇಜು ವಿದ್ಯಾರ್ಥಿ ನಾಪತ್ತೆ

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

4

Puttur: ಸ್ಕೂಟಿ-ಕಾರು ಅಪಘಾತ: ಗಾಯಾಳು ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್‌ಗೆ ಕಡಿವಾಣ

Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್‌ಗೆ ಕಡಿವಾಣ

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

Udupi: ಪರ್ಮಿಟ್‌ ಇದ್ದರೂ ಓಡದ ಸರಕಾರಿ ಬಸ್‌ಗಳು!

Udupi: ಪರ್ಮಿಟ್‌ ಇದ್ದರೂ ಓಡದ ಸರಕಾರಿ ಬಸ್‌ಗಳು!

Mangaluru: ಸಿಸಿ ಕೆಮರಾದ ಇಂಟರ್‌ನೆಟ್‌ಗೆ ರೀಚಾರ್ಜ್‌ ಮಾಡದ ಪಾಲಿಕೆ!

Mangaluru: ಸಿಸಿ ಕೆಮರಾದ ಇಂಟರ್‌ನೆಟ್‌ಗೆ ರೀಚಾರ್ಜ್‌ ಮಾಡದ ಪಾಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.