ಪುತ್ತೂರು: ಅಡಿಕೆ ಪಾಲದ ಮೇಲೆ ಜೀವ ಪಣಕ್ಕಿಟ್ಟು ನಡಿಗೆ!


Team Udayavani, Jul 1, 2024, 4:34 PM IST

ಪುತ್ತೂರು: ಅಡಿಕೆ ಪಾಲದ ಮೇಲೆ ಜೀವ ಪಣಕ್ಕಿಟ್ಟು ನಡಿಗೆ!

ಪುತ್ತೂರು: ಶರವೇಗದಲ್ಲಿ ಹರಿಯುತ್ತಿರುವ ಹೊಳೆ ನೀರಿನ ನಡುವೆ ಅಡಿಗಡಿಗೆ ಅಲ್ಲಾಡುತ್ತಿರುವ ಶಿಥಿಲ ಕಿಂಡಿ ಅಣೆಕಟ್ಟಿನ ಕನಿಷ್ಠ ಸುರಕ್ಷತೆಯೂ ಇಲ್ಲದ ಕಾಲು ದಾರಿಯಲ್ಲಿ ಒಂದು ಗ್ರಾಮದಿಂದ ಇನ್ನೊಂದು ಗ್ರಾಮಕ್ಕೆ ಪುಟ್ಟ ಪುಟ್ಟ ಮಕ್ಕಳು, ವೃದ್ಧರು ದಾಟುತ್ತಿರುವ ದೃಶ್ಯವನ್ನು ಕಂಡಾಗ ಎದೆ ಝಲ್ಲೆನ್ನಿಸುತ್ತದೆ.

ಇದು ಸುಳ್ಯ ವಿಧಾನಸಭಾ ಕ್ಷೇತ್ರದ ಪೆರುವಾಜೆ ಮತ್ತು ಕೊಡಿಯಾಲ ಗ್ರಾಮದ ಏನಡ್ಕ ಸಾರಕರೆ ಬಳಿ ಇರುವ ಕಿಂಡಿ ಅಣೆಕಟ್ಟಿನ
ಮೇಲ್ಭಾಗದ ಕಾಲುದಾರಿಯ ಸ್ಥಿತಿ. ನಾಲ್ಕೈದು ವರ್ಷಗಳಿಂದ ಗೌರಿ ಹೊಳೆಯ ಕಿಂಡಿ ಅಣೆಕಟ್ಟಿನ ಶಿಥಿಲ ಸ್ಲ್ಯಾಬ್‌ನಲ್ಲಿ ಜನರು ಜೀವ ಕೈಯಲ್ಲಿ ಹಿಡಿದುಕೊಂಡು ಸಾಗುತ್ತಿದ್ದರೂ ಆಡಳಿತ ವರ್ಗ ಮಾತ್ರ ಇದನ್ನು ಗಂಭೀರವಾಗಿ ಪರಿಗಣಿಸಿಯೆ ಇಲ್ಲ.

ಈ ಕಿಂಡಿ ಅಣೆಕಟ್ಟಿನ ಮೇಲ್ಭಾಗದ ಕಾಲು ದಾರಿಯೇ ಕೊಡಿಯಾಲ ಹಾಗೂ ಪೆರುವಾಜೆ ಗ್ರಾಮಕ್ಕೆ ಸಂಪರ್ಕದ ಹಾದಿ. ಉಭಯ ದಿಕ್ಕಿನಲ್ಲಿ ನೂರಾರು ಮನೆಗಳಿಗೆ ಇರುವುದೊಂದೇ ಈ ದಾರಿ. ಉಡುಕಿರಿ ಕಾಲನಿ, ಕೂಡನಕಟ್ಟೆ, ಪೆರುವಾಜೆ ಪ್ರಥಮ ದರ್ಜೆ ಕಾಲೇಜು, ಬೆಳ್ಳಾರೆ ಭಾಗಕ್ಕೆ ಇದು ಸಂಪರ್ಕ ರಸ್ತೆ.

40 ವರ್ಷ ಕಳೆದಿದೆ!
ಸಾರಕರೆಯಲ್ಲಿ ಗೌರಿ ಹೊಳೆಗೆ 40 ವರ್ಷಗಳ ಹಿಂದೆ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದೆ. 15 ವರ್ಷಗಳ ಹಿಂದೆಯೇ ಇದು ಶಿಥಿಲಗೊಳ್ಳಲು ಆರಂಭಿಸಿದ್ದು ಆ ಹೊತ್ತಲ್ಲೇ ಜನರು ಮನವಿ ಸಲ್ಲಿಸಿದ್ದರೂ ಯಾರೂ ಸ್ಪಂದಿಸಿಲ್ಲ. ಬೇಸಗೆಯಲ್ಲಿ ಹೊಳೆಯಲ್ಲೇ ವಾಹನ ದಾಟಿಸುತ್ತಾ ಸಂಚರಿಸುವ ಇಲ್ಲಿನ ನಿವಾಸಿಗಳು ಮಳೆಗಾಲದಲ್ಲಿ ವಾಹನ ಮೂಲಕ ಬೆಳ್ಳಾರೆ ಪೇಟೆಗೆ ತೆರಳಲು 7-8 ಕಿ.ಮೀ. ಸುತ್ತಾಟ ನಡೆಸಬೇಕು. ಹೆಚ್ಚಿನವರು ಸುತ್ತಾಟ ತಪ್ಪಿಸಲು ಶಿಥಿಲ ಕಟ್ಟದ ಕಾಲು ದಾರಿಯಲ್ಲೇ ನಡೆದುಕೊಂಡು ಹೋಗಿ ಬೆಳ್ಳಾರೆ, ಸುಳ್ಯ ಭಾಗಕ್ಕೆ ಸಂಚರಿಸುತ್ತಾರೆ.

ಅನಗುರಿ, ಕೆಡೆಂಜಿಮೊಗ್ರು, ಉಡುಕಿರಿ ಮೊದಲಾದ ಪ್ರದೇಶದ ನಿವಾಸಿಗಳು ಬೆಳ್ಳಾರೆ, ಪೆರುವಾಜೆ, ಕೊಡಿಯಾಲ ಭಾಗಕ್ಕೆ ತೆರಳಲು ಇದು ಸಮೀಪದ ದಾರಿಯಾಗಿದೆ.

ರಕ್ಷಣ ಬೇಲಿ ಇಲ್ಲ!
ಇಲ್ಲಿ ರಕ್ಷಣ ಬೇಲಿಯೂ ಇಲ್ಲ. ತೆರೆದ ಪಾಲದಂತಿದೆ. ಹೆಜ್ಜೆ ಇಡುವಾಗ ಕೊಂಚ ತಪ್ಪಿದರೂ ಹೊಳೆ ಪಾಲಾಗುವುದು ನಿಶ್ಚಿತ ಎನ್ನುವ ಸ್ಥಿತಿ ಇಲ್ಲಿನದು. ಈ ಪರಿಸರದಲ್ಲಿ 3-4 ಮಂದಿ ಅಂಗವಿಕಲರು ಇದ್ದು ಕೆಲವರು ಶಾಲೆಗೆ ತೆರಳುತ್ತಾರೆ. ಅವರನ್ನು
ಹೊತ್ತುಕೊಂಡೇ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಹೋಗಬೇಕು ಎನ್ನುತ್ತಾರೆ ಸ್ಥಳೀಯ ನಿವಾಸಿ ಜಯ ಉಡುಕಿರಿ.

ಮಧ್ಯ ಭಾಗಕ್ಕೆ ಅಡಿಕೆ ಪಾಲ
ಕಿಂಡಿ ಅಣೆಕಟ್ಟಿನ ಮಧ್ಯಭಾಗದ ಪಿಲ್ಲರ್‌ ನಡುವಿನ ಸ್ಲ್ಯಾಬ್‌ ಸಂಪೂರ್ಣ ಶಿಥಿಲಗೊಂಡು ಮುರಿದು ಬಿದ್ದು ವರ್ಷಗಳೇ ಕಳೆದಿವೆ. ಇಲ್ಲಿ ಅಡಿಕೆ ಮರವನ್ನು ಬಳಸಿ ಒಂದು ಕಡೆಯಿಂದ ಇನ್ನೊಂದೆಡೆಗೆ ದಾಟಲಾಗುತ್ತಿದೆ. ಕೆಲವೆಡೆ ಸ್ಲ್ಯಾಬ್‌ ಗಳು ಬಿರುಕು ಬಿಟ್ಟಿದ್ದು ಸಂಚರಿಸುವಾಗ ಅಲುಗಾಡುತ್ತಿವೆ.

ಆ ಕಡೆ ನಮ್ಮದು, ಈ ಕಡೆ ನಿಮ್ಮದು..!
ಈ ಕಿಂಡಿ ಅಣೆಕಟ್ಟಿನ ಸ್ಥಳ ಜವಾಬ್ದಾರಿ ಬಗ್ಗೆಯೇ ಕೊಡಿಯಾಲ, ಪೆರುವಾಜೆ ಗ್ರಾಮ ನಡುವೆ ಪಾಲು ಆದಂತಿದೆ. ಸಾರೆಭಾಗದಿಂದ ಕಿಂಡಿ ಅಣೆಕಟ್ಟಿನ ಅರ್ಧಭಾಗ ಕೊಡಿಯಾಲ ಗ್ರಾ.ಪಂ., ಏನಡ್ಕ ಭಾಗದಿಂದ ಕಿಂಡಿ ಅಣೆಕಟ್ಟಿನ ಅರ್ಧಭಾಗ ಪೆರುವಾಜೆ ಗ್ರಾ.ಪಂ.ಗೆ ಸೇರಿದೆ. ಎರಡು ಗ್ರಾ.ಪಂ.ಗಳು ಕಿಂಡಿ ಅಣೆಕಟ್ಟಿನ ದುರಸ್ತಿ ಕೆಲಸ ಈ ಪಾಲು ಪಟ್ಟಿಯಂತೆ ಆಗುತ್ತಿದೆ ಅನ್ನುತ್ತಾರೆ ಸ್ಥಳೀಯರು.

ಸೇತುವೆ ಬೇಡಿಕೆ
ಏನಡ್ಕ-ಸಾರಕರೆ ನಡುವೆ ಹೊಸ ಸೇತುವೆ ನಿರ್ಮಾಣ ಆಗಬೇಕು ಅನ್ನುವ ಬೇಡಿಕೆ ಇಲ್ಲಿನವರದ್ದು. ಇದಕ್ಕೆ ಸಂಬಂಧಿಸಿ ಗ್ರಾ.ಪಂ., ಶಾಸಕರಿಗೆ, ಸಂಸದರಿಗೆ, ಸಚಿವರಿಗೆ ಹತ್ತಾರು ಮನವಿಗಳು ಸಲ್ಲಿಕೆಯಾಗಿವೆ. ಜಿ.ಪಂ. ಎಂಜಿನಿಯರ್‌ ವಿಭಾಗಕ್ಕೆ ಸಂದ ಮನವಿಗೆ ಲೆಕ್ಕವೇ ಇಲ್ಲ. ಪ್ರತೀ ವರ್ಷವೂ ಮಳೆಗಾಲದ ಸಂದರ್ಭ ಪೆರುವಾಜೆ, ಕೊಡಿಯಾಲ ಗ್ರಾ.ಪಂ. ಮಳೆಗಾಲದಲ್ಲಿ ಇಲ್ಲಿ ದಾಟದಂತೆ ಎಚ್ಚರಿಕೆಯ ಬ್ಯಾನರ್‌ ಅಳವಡಿಸುವುದು ಬಿಟ್ಟರೆ ಬೇರೇನೂ ಆಗಿಲ್ಲ. ತಹಶೀಲ್ದಾರ್‌, ಎಂಜಿನಿಯರ್‌ ಸ್ಥಳ ಭೇಟಿ ನೀಡಿ ದುರಸ್ತಿ ಭರವಸೆ ನೀಡಿ ಹೋಗುವುದಷ್ಟೇ ಇಲ್ಲಿನ ಕೆಲಸವಾಗಿದೆ.

ಅಂಗವಿಕಲತೆ ಉಳ್ಳವರು, ವೃದ್ಧರು ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಈ ಶಿಥಿಲ ಅಣೆಕಟ್ಟಿನ ಮೇಲ್ಭಾಗದಲ್ಲಿ ದಾಟಲು
ಕಷ್ಟವಾಗುತ್ತಿದೆ. ಶಾಲಾ ಮಕ್ಕಳು ಇಲ್ಲೇ ಹೋಗಬೇಕಾದ ಸ್ಥಿತಿ ಇದೆ. ಅಸೌಖ್ಯಕ್ಕೆ ಒಳಾಗದವರನ್ನು ಕರೆದುಕೊಂಡು ಬರಲು
ಪರದಾಡುವ ಪರಿಸ್ಥಿತಿ ಇದೆ.
*ರೂಪಾ, ಕೆಡಂಜಿಮೊಗರು

ನಾವು ಹತ್ತಾರು ಮನವಿ ಸಲ್ಲಿಸಿದ್ದೇವೆ. ಇದಕ್ಕೆ ಸ್ಪಂದನೆ ಸಿಕ್ಕಿಲ್ಲ. ಕಿಂಡಿ ಅಣೆಕಟ್ಟು ದುರಸ್ತಿಯ ಬದಲು ಈ ಸ್ಥಳದಲ್ಲಿ ಸುಸಜ್ಜಿತ
ಸೇತುವೆ ನಿರ್ಮಿಸಿ ನಮ್ಮ ದಶಕಗಳ ಬೇಡಿಕೆಯನ್ನು ಈಡೇರಿಸಬೇಕು.
*ವನಿತಾ, ಸಾರಕರೆ

*ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Uppinangady ಚರಂಡಿಗೆ ಎಸೆಯುತ್ತಿದ್ದಾರೆ ಅಕ್ಷರ ದಾಸೋಹದ ಅನ್ನ !

Uppinangady ಚರಂಡಿಗೆ ಎಸೆಯುತ್ತಿದ್ದಾರೆ ಅಕ್ಷರ ದಾಸೋಹದ ಅನ್ನ !

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bantwal

ಬಂಟ್ವಾಳ ಸರಕಾರಿ ಆಸ್ಪತ್ರೆ: ಲ್ಯಾಬ್‌ ಟೆಕ್ನಿಶಿಯನ್‌ ಕೊರತೆ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ

ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ

ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.