‘ಸರಕಾರದ ಯೋಜನೆಗಳು  ಹೆಣ್ಣು ಮಕ್ಕಳಿಗೆ ಪ್ರಯೋಜನ ಸಿಗಲಿ’


Team Udayavani, Jan 31, 2019, 5:47 AM IST

31-january-8.jpg

ಪುತ್ತೂರು: ಹೆಣ್ಣು ಮಕ್ಕಳನ್ನು ಹೆತ್ತ ಗೌರವ ನಮ್ಮಲ್ಲಿರಬೇಕು. ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ, ಬೆಂಬಲ ನೀಡುವ ನಿಟ್ಟಿನಲ್ಲಿ ಸರಕಾರಗಳು ಹಮ್ಮಿಕೊಂಡಿರುವ ಹಲವು ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಿ ಹೆಗ್ಡೆ ಹೇಳಿದರು.

ತಾ.ಪಂ. ಸಭಾಂಗಣದಲ್ಲಿ ಬುಧವಾರ ನಡೆದ, ವರದಕ್ಷಿಣೆ ನಿಷೇಧ, ಕೌಟುಂಬಿಕ ದೌರ್ಜನ್ಯ ತಡೆ, ಮಹಿಳಾ ದೌರ್ಜನ್ಯ ತಡೆ, ಮಕ್ಕಳ ಮಾರಾಟ ಮತ್ತು ಸಾಗಾಣಿಕೆ ವಿರುದ್ಧ ಪ್ರಚಾರಾಂದೋಲನ ಸಮಿತಿ, ಮಾದಕ ದ್ರವ್ಯ ಸೇವನೆ ನಿಷೇಧ, ಭಾಗ್ಯಲಕ್ಷ್ಮೀ ಯೋಜನೆ ಹಾಗೂ ಅಂಗವಿಕಲರ ತಾಲೂಕು ಮಟ್ಟದ ಸಭೆಯಲ್ಲಿ ಅವರು ಮಾಹಿತಿ ನೀಡಿದರು.

ಮಗುವಿಗೆ ಪ್ರಶಂಸಾ ಪತ್ರ
ಬೇಟಿ ಪಡಾವೋ, ಬೇಟಿ ಬಚಾವೋ ಯೋಜನೆಯಲ್ಲಿ ಸರಕಾರದಿಂದ ಪ್ರತಿ ತಿಂಗಳ ಮೊದಲ ಗುರುವಾರ ವಿವಿಧ ಜಾಗೃತಿ ಕಾರ್ಯಕ್ರಮ ನಡೆಯುತ್ತಾ ಇದೆ. ತಾಯಂದಿರನ್ನು ಗುರುತಿಸುವ, ಹೆಚ್ಚು ಅಂಕ ಪಡೆದ ಮಗುವಿಗೆ ಪ್ರಶಂಸಾ ಪತ್ರ ಸಹಿತ ವಿವಿಧ ಯೋಜನೆಗಳ ಮೂಲಕ ಲಿಂಗಾನುಪಾತವನ್ನು ತಡೆಗಟ್ಟಲು ಸರಕಾರ ವಿವಿಧ ಯೋಜನೆ ಹಾಕಿಕೊಂಡಿದೆ. ಹೆಣ್ಣು ಮಕ್ಕಳು ಹೆದರುವ ಆವಶ್ಯಕತೆ ಇಲ್ಲ ಎಂದರು.

ಅನುಪಾತ ದಾಖಲೀಕರಣ
ಉಪ ತಹಶೀಲ್ದಾರ್‌ ಶಶಿಕಲಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಲಿಂಗಾನುಪಾತ ವ್ಯತ್ಯಾಸದ ಕುರಿತು ವರದಿಯಿದೆ. ಅದನ್ನು ಸರಿಮಾಡುವ ನಿಟ್ಟಿನಲ್ಲಿ ತಾಲೂಕು ಮತ್ತು ಹೋಬಳಿಮಟ್ಟದಲ್ಲಿ ಅಂಗನವಾಡಿ, ಆಶಾ, ಸ್ತ್ರೀಶಕ್ತಿ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗಿದೆ. ಜಿ.ಪಂ. ಸಿಇಒ ಸೂಚನೆ ಮೇರೆಗೆ ಪ್ರತಿ ಅಂಗನವಾಡಿಯಲ್ಲಿ ಗುಡ್ಡ ಗುಡ್ಡಿ ಬೋರ್ಡ್‌ ಅಳವಡಿಸಿ ಅದರಲ್ಲಿ ಹೆಣ್ಣು ಮತ್ತು ಗಂಡಿನ ಅನುಪಾತವನ್ನು ದಾಖಲಿಸುವ ಕಾರ್ಯಕ್ರಮ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಸಮಸ್ಯೆಗಳಿಗೆ ಪರಿಹಾರಕ್ಕೆ ಗ್ರಾ.ಪಂ. ಮಟ್ಟದಲ್ಲಿ ಪಿಡಿಒಗಳಿಗೆ ಮತ್ತು ಅಧ್ಯಕ್ಷರಿಗೆ ಸಮಿತಿ ಸಭೆಯಲ್ಲಿ ಸೂಚಿಸಲಾಗಿದೆ ಎಂದು ತಾ.ಪಂ. ಮ್ಯಾನೇಜರ್‌ ಶಿವಪ್ರಕಾಶ್‌ ಅಡ್ಪಂಗಾಯ ತಿಳಿಸಿದರು. ನಯನಾ ರೈ ಮಾತನಾಡಿದರು. ತಾ.ಪಂ. ಸದಸ್ಯೆ ಉಷಾ ಅಂಚನ್‌, ನ್ಯಾಯವಾದಿ ದಿವ್ಯರಾಜ್‌ ಹೆಗ್ಡೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.