ಮಳೆಗಾಲದ ಮುನ್ನೆಚ್ಚರಿಕೆ ; ಚಾರ್ಮಾಡಿಗೆ ಡಿಸಿ ಭೇಟಿ; ತಂಡ ರಚನೆಗೆ ಸೂಚನೆ


Team Udayavani, Jun 10, 2020, 9:52 AM IST

ಮಳೆಗಾಲದ ಮುನ್ನೆಚ್ಚರಿಕೆ ; ಚಾರ್ಮಾಡಿಗೆ ಡಿಸಿ ಭೇಟಿ; ತಂಡ ರಚನೆಗೆ ಸೂಚನೆ

ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಮಂಗಳವಾರ ಪ್ರಕೃತಿ ವಿಕೋಪಕ್ಕೊಳಗಾದ ಚಾರ್ಮಾಡಿ ಪ್ರದೇಶಕ್ಕೆ ಭೇಟಿ ನೀಡಿದರು.

ಬೆಳ್ತಂಗಡಿ/ ಮುಂಡಾಜೆ: ಕಳೆದ ವರ್ಷ ಪ್ರಕೃತಿ ವಿಕೋಪಕ್ಕೆ ಈಡಾದ ಪ್ರದೇಶಗಳ ಸ್ಥಿತಿಗತಿ ವೀಕ್ಷಣೆ ಹಾಗೂ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಮಂಗಳವಾರ ಚಾರ್ಮಾಡಿಗೆ ಭೇಟಿ ನೀಡಿ ಬಳಿಕ ಮಿನಿವಿಧಾನ ಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಮಳೆಗಾಲ ಸಮೀಪಿಸುತ್ತಿದ್ದು, ಕಳೆದ ವರ್ಷ ಪ್ರಕೃತಿ ವಿಕೋಪ ಉಂಟಾದ ಚಾರ್ಮಾಡಿ, ಮಿತ್ತಬಾಗಿಲು ಪ್ರದೇಶದ ಕೃಷಿ ಭೂಮಿಯಲ್ಲಿ ಮರಳು ತೆರವಿಗೆ ಅವಕಾಶ ನೀಡಲಾಗಿದೆ. ಈ ವರ್ಷ ಮುನ್ನೆಚ್ಚರಿಕೆಯಾಗಿ ಅಧಿಕಾರಿಗಳ ತಂಡ ರಚಿಸುವಂತೆ ತಹಶೀಲ್ದಾರ್‌ಗೆ ಜಿಲ್ಲಾಧಿಕಾರಿ ಸೂಚಿಸಿದರು.

ರಸ್ತೆ ದುರಸ್ತಿ
ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಫರ್ಲಾಣಿಯಲ್ಲಿ ಮೃತ್ಯುಂಜಯ ನದಿಯ ಮರಳುಗಾರಿಕೆಯಿಂದಾಗಿ ಚಾರ್ಮಾಡಿ – ಫರ್ಲಾಣಿ ರಸ್ತೆ ಹದಗೆಟ್ಟಿ ರುವ ಬಗ್ಗೆ ಊರವರು ಇದೇ ಸಂದರ್ಭ ಲಾರಿಗಳನ್ನು ತಡೆಹಿಡಿದು ಪ್ರತಿಭಟನೆಗಿಳಿದಿದ್ದರು. ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದು  ಪರಿಶೀಲಿಸಿ ಕೂಡಲೇ ರಸ್ತೆ ದುರಸ್ತಿಪಡಿಸಿ ಮರಳುಗಾರಿಕೆ ಮುಂದು ವರಿಸುವಂತೆ ಆದೇಶಿಸಿದರು. ಮರಳು ಸಾಗಾಟಗಾರರು ಕೂಡಲೇ ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ. ಬಳಿಕ ಜಿಲ್ಲಾಧಿಕಾರಿಗಳು ಚಾರ್ಮಾಡಿ ಸರಕಾರಿ ಕ್ವಾರಂಟೈನ್‌ ಪ್ರದೇಶವನ್ನು, ಚಾರ್ಮಾಡಿಯಿಂದ ಮಲಯ ಮಾರುತವರೆಗೆ ಘಾಟಿ ರಸ್ತೆಗೆ ನಿರ್ಮಾಣವಾದ ತಡೆಗೋಡೆಯನ್ನು, ಫರ್ಲಾಣಿ ಹಾಗೂ ಕಳೆದ ವರ್ಷ ಮಳೆಗೆ ಕೊಚ್ಚಿಹೋಗಿದ್ದ ಅನಾರು ಸೇತುವೆ ಪ್ರದೇಶವನ್ನು, ಅನಾರು ಬಳಿ ನೂತನ ರಸ್ತೆ ಕಾಮಗಾರಿಯನ್ನು ವೀಕ್ಷಿಸಿದರು. ಡಿಸಿ ಭೇಟಿ ಸಂದರ್ಭ ಮತ್ತು ಸಭೆಯಲ್ಲಿ ತಹಶೀಲ್ದಾರ್‌ ಗಣಪತಿ ಶಾಸ್ತ್ರಿ, ಪಿಡಬ್ಲ್ಯೂಡಿ ಸಹಾಯಕ ಅಭಿಯಂತ ಶಿವಪ್ರಸಾದ್‌ ಅಜಿಲ, ಚಾರ್ಮಾಡಿ ಗ್ರಾ.ಪಂ. ಪಿಡಿಒ ಪ್ರಕಾಶ್‌ ಶೆಟ್ಟಿ ನೊಚ್ಚ, ತಾ.ಪಂ. ಇಒ ಕೆ.ಇ. ಜಯರಾಮ್‌, ಟಿಎಚ್‌ಒ ಡಾ| ಕಲಾಮಧು, ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಮೊದಲಾದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ವಾರಂಟೈನ್‌ ನಿಗಾ
ಕೋವಿಡ್ ಸೋಂಕು ಹೊರ ರಾಜ್ಯಗಳಿಂದ ಬರುವವರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದು, ಕ್ವಾರಂಟೈನ್‌ನಲ್ಲಿರುವ ವ್ಯಕ್ತಿಗಳು ಹೊರಗೆಲ್ಲೂ ಸುತ್ತಾಡದಂತೆ ಸಂಪೂರ್ಣ ನಿಗಾ ವಹಿಸಬೇಕು ಎಂದು ಡಿಸಿ ಸೂಚಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.