Vitla: ಗುಡ್ಡ ಕುಸಿದು ರಸ್ತೆ ಸಂಚಾರ ಅಸ್ತವ್ಯಸ್ತ; ಸಾರ್ವಜನಿಕರ ಪರದಾಟ
Team Udayavani, Sep 11, 2023, 11:13 AM IST
ವಿಟ್ಲ: ಪುಣಚದ ದೇವರಗುಂಡಿ ಮಣಿಲ ಕೂರೇಲು ಸ್ಮಶಾನ ರಸ್ತೆ ಮತ್ತೆ ಗುಡ್ಡ ಕುಸಿದು ಬಿದ್ದು ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗದೆ ಸಾರ್ವಜನಿಕರು ಪರದಾಡುತ್ತಿದ್ದಾರೆ.
ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಬದಿ ಕುಸಿಯುತ್ತಿದ್ದು, ಸಾರ್ವಜನಿಕರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಸಾಕಷ್ಟು ಬಾರಿ ದೂರು ನೀಡಿದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಾಲೆಗೆ ತೆರಳುವ ಮಕ್ಕಳು, ಮಹಿಳೆಯರು ಸಂಕಷ್ಟಕ್ಕೊಳಗಾಗಿದ್ದಾರೆ.
ಕೆಲ ವರ್ಷಗಳ ಹಿಂದೆ ಸ್ಥಳಕ್ಕೆ ಭೇಟಿ ನೀಡಿದ್ದ ಸಹಾಯಕ ಕಮೀಶನರ್ ಮಣ್ಣು ತೆಗೆದ ಜಾಗಕ್ಕೆ ಕಲ್ಲುಕಟ್ಟಿ ಕೊಡುವಂತೆ ಸೂಚಿಸಿದ್ದರು. ಅದರಂತೆ ಮುಚ್ಚಳಿಕೆ ಪತ್ರವನ್ನು ಬರೆಸಿಕೊಂಡಿದ್ದರು.
ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳದೆ ಇರುವುದರಿಂದ ರಸ್ತೆಯ ಬದಿ ಮತ್ತೆ ಮತ್ತೆ ಜರಿದು ಬಿದ್ದು ಅನಾಹುತಗಳಿಗೆ ಅವಕಾಶವಾಗುತ್ತಿದೆ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha; ರಾಹುಲ್ ರೀತಿ ವರ್ತಿಸಬೇಡಿ, ಸತ್ಯ ಸಂಗತಿ ಮೂಲಕ ಉತ್ತರಿಸಿ: ಮೋದಿ
T20 Cricket; 2026ರ ಟಿ20 ವಿಶ್ವಕಪ್ ತನಕ ಭಾರತ ಆಡಲಿದೆ 34 ಪಂದ್ಯ
Bajaj Bruzer; ವಿಶ್ವದ ಮೊದಲ ಸಿಎನ್ಜಿ ಬೈಕ್ ಬಜಾಜ್ ಬ್ರೂಝರ್
CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ
Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.