Subramanya: ಪೈಪ್ ಅಳವಡಿಕೆಗೆ ರಸ್ತೆ ಅಗೆತ
ಮಳೆಯಲ್ಲೇ ಕಾಮಗಾರಿ; ರಸ್ತೆ ಕೆಸರುಮಯ
Team Udayavani, Aug 6, 2024, 2:59 PM IST
ಸುಬ್ರಹ್ಮಣ್ಯ: ಬಹುಗ್ರಾಮ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಕೆಗೆ ಮಣ್ಣಿನ ರಸ್ತೆ ಬದಿ ಅಗೆತಮಾಡಿದ್ದು, ಇದರಿಂದ ರಸ್ತೆ ಕೆಸರಾಗಿ ಸಂಚಾರಕ್ಕೆ ತೊಂದರೆಯಾಗಿದೆ. ಮಳೆ ಸಂದರ್ಭದಲ್ಲೇ ಕಾಮಗಾರಿ ನಡೆಸುತ್ತಿ ರುವುದಕ್ಕೆ ವಾಹನ ಸವಾರರು ಆಕ್ರೋಶ, ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಲ್ಲುಗುಡ್ಡೆ-ಕಡ್ಯ ಕೊಣಾಜೆ ಜಿಲ್ಲಾ ಪಂಚಾಯತ್ ರಸ್ತೆಯ ಕೊಣಾಜೆ ಸಮೀಪದ ತಲೆಕ್ಕಿ ಸಮೀಪ ಮಣ್ಣಿನ ರಸ್ತೆಯ ಬದಿಯಲ್ಲೇ ಕಾಮಗಾರಿ ನಡೆಯುತ್ತಿದೆ. ಪೈಪ್ಲೈನ್ನ ಹೊಂಡ ಮುಚ್ಚಿದರೂ ರಸ್ತೆ ಜಾರುತ್ತಿರುವುದರಿಂದ ಸಮಸ್ಯೆಗೆ ಕಾರಣವಾದವರಿಂದ ದುರಸ್ತಿ ಕಾರ್ಯ ನಡೆಸಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.
ನಮ್ಮ ವ್ಯಾಪ್ತಿಯಲ್ಲಿ ಬರುತ್ತಿಲ್ಲ
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ನಮ್ಮ ವ್ಯಾಪ್ತಿಯಲ್ಲಿ ಬರುತ್ತಿಲ್ಲ. ಇಲ್ಲಿ ಈಗ ಕಾಮಗಾರಿ ನಡೆಸಿ ಸಮಸ್ಯೆ ಆಗುತ್ತಿರುವ ಬಗ್ಗೆ ದೂರುಗಳು ಬರುತ್ತಿದೆ. ಸಂಬಂಧಿಸಿದವರಲ್ಲಿ ಮಾತನಾಡಿ, ಸಮಸ್ಯೆ ಪರಿಹಾರಕ್ಕೆ ಸೂಚಿಸಲಾಗುವುದು ಎಂದು ಕಡ್ಯ ಕೊಣಾಜೆ ಗ್ರಾ.ಪಂ. ಪಿಡಿಒ ಪದ್ಮನಾಭ ಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು
BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
Bolanthuru: ಗಣೇಶೋತ್ಸವ ಮೆರವಣಿಗೆಯಲ್ಲಿ ತಿಂಡಿ- ಪಾನೀಯ ನೀಡದಂತೆ ಮಸೀದಿಗೆ ಪತ್ರ
Puttur ಅತ್ಯಾಚಾರ ಆರೋಪ; ಮಾನವ ಹಕ್ಕುಗಳ ಆಯೋಗಕ್ಕೂ ದೂರು
Heavy Rain: ಸುಬ್ರಹ್ಮಣ್ಯದಲ್ಲಿ ಹೆದ್ದಾರಿ ಜಲಾವೃತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.