ಉಪ್ಪಿನಂಗಡಿ: ಧರೆ ಕುಸಿತ ಭೀತಿ, ಮನೆಗೆ ಅಪಾಯ

ಗ್ರಾ.ಪಂ.ಗೆ ದೂರು; ರಸ್ತೆ ಅತಿಕ್ರಮಣದಿಂದಾಗಿ ಸಮಸ್ಯೆ: ಅಧ್ಯಕ್ಷ

Team Udayavani, Aug 3, 2019, 5:36 AM IST

z-32

ಉಪ್ಪಿನಂಗಡಿ: ಮಠ- ಕೊಪ್ಪಳ ಎಂಬಲ್ಲಿ ಮನೆಗೆ ತಾಗಿಕೊಂಡಿರುವ ಧರೆ ಕುಸಿಯುವ ಹಾಗೂ ಮನೆ ಬೀಳುವ ಹಂತದಲ್ಲಿದ್ದು, ಮನೆ ಮಂದಿ ಅಪಾಯದಲ್ಲೇ ದಿನ ಕಳೆಯಬೇಕಾದ ಪರಿಸ್ಥಿತಿ ಎದುರಾಗಿದೆ.

ಸಮಸ್ಯೆ ಬಗೆಹರಿಸಿ ನ್ಯಾಯ ಒದಗಿಸಿಕೊಡಬೇಕೆಂದು ಕೊಪ್ಪಳ ನಿವಾಸಿ ಮಹಮ್ಮದ್‌ ಎಂಬವರು ಉಪ್ಪಿನಂಗಡಿ ಗ್ರಾ.ಪಂ.ಗೆ ದೂರು ನೀಡಿದ್ದಾರೆ.

ಮಠ- ಕೊಪ್ಪಳದಲ್ಲಿ ನನ್ನ ಮನೆ ಎತ್ತರದ ಗುಡ್ಡದ ಮೇಲಿದೆ. ನನ್ನ ಮನೆಯ ಕೆಳಗೆ ಇಬ್ರಾಹಿಂ ಎಂಬವರ ಮನೆ ಇದ್ದು, ಅವರು ಮನೆಯ ಹಿಂಭಾಗದಲ್ಲಿರುವ ಧರೆಯನ್ನು ನನ್ನ ಮನೆಯ ಹತ್ತಿರದ ತನಕವೂ ಅಗೆದಿದ್ದಾರೆ. ಧರೆಯ ಪಕ್ಕದಲ್ಲಿ ನೀರು ಹರಿಯುವ ಚರಂಡಿ ಇದ್ದುದನ್ನೂ ತೆಗೆದಿದ್ದಾರೆ. ಇದರಿಂದಾಗಿ ಮಳೆಯ ನೀರು ಹೋಗಲು ಜಾಗವಿಲ್ಲದೆ ನನ್ನ ಮನೆಯ ಧರೆಯ ಬದಿಯಲ್ಲಿ ಇರುವ ಶೌಚಾಲಯದ ಗುಂಡಿಯ ನೀರು ಸೋರಿಕೆ ಆಗತೊಡಗಿದೆ. ಹೀಗಾಗಿ ಮನೆಯ ಗೋಡೆ ಬದಿಯಲ್ಲಿ ಒರತೆ ಬರತೊಡಗಿದ್ದು, ಮನೆ ಬೀಳುವ ಹಂತಕ್ಕೆ ತಲುಪಿದೆ ಎಂದು ದೂರಿನಲ್ಲಿ ಆಪಾದಿಸಿದ್ದಾರೆ.

ಶೌಚಾಲಯಕ್ಕೆ ಬೇರೆಯೇ ಇಂಗು ಗುಂಡಿ ತೆಗೆಯಬೇಕಾದರೆ ಮನೆಯ ಮತ್ತೂಂದು ಬದಿಯಲ್ಲಿ ತೆಗೆಯಬೇಕಾಗಿದೆ. ಆ ಬದಿಗೆ ಹೋಗಲು ರಸ್ತೆಯ ಅಗತ್ಯವಿದ್ದು, ಪ್ರಸಕ್ತ ಇದ್ದ ರಸ್ತೆಯನ್ನು ಅತಿಕ್ರಮಿಸಲಾಗಿದೆ. ಗ್ರಾ.ಪಂ. ವತಿಯಿಂದ ರಸ್ತೆ ನಿರ್ಮಿಸಿಕೊಡುವಂತೆ ಮನವಿ ಮಾಡಿದ್ದಾರೆ.

ರಸ್ತೆ ಅತಿಕ್ರಮಣದಿಂದ ಸಮಸ್ಯೆ
ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷ ಕೆ. ಅಬ್ದುಲ್ ರಹಿಮಾನ್‌ ಪ್ರತಿಕ್ರಿಯಿಸಿ, ಮಹಮ್ಮದ್‌ ಅವರು ನೀಡಿರುವ ದೂರಿನ ಮೇರೆಗೆ ಘಟನೆಯ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಅಪಾಯದಲ್ಲಿ ಇರುವ ಮನೆಯ ಬದಿಯಲ್ಲಿ ಧರೆ ತೆಗೆದಿರುವ ಇಬ್ರಾಹಿಂ ಧರೆಯನ್ನು ಜಾಸ್ತಿಯೇ ತೆಗೆದಿದ್ದಾರೆ. ರಸ್ತೆಯನ್ನು ಅತಿಕ್ರಮಿಸಿ ಶೌಚಾಲಯದ ಇಂಗು ಗುಂಡಿ ನಿರ್ಮಿಸಿದ್ದಾರೆ. ಮಹಮ್ಮದ್‌ ಅವರು ಇಂಗುಗುಂಡಿ ಬೇರೆ ಕಡೆಗೆ ಸ್ಥಳಾಂತರಿಸಲು ಸಿದ್ಧರಿದ್ದು, ಅವರಿಗೆ ಜೆಸಿಬಿ ಯಂತ್ರ ಹೋಗಲು ರಸ್ತೆಯೇ ಇಲ್ಲದಂತಾಗಿದೆ. ಅಬ್ದುಲ್ ರಜಾಕ್‌ ಮನೆಯವರಿಗೆ ಅತಿ ಕ್ರಮಿಸಿರುವ ರಸ್ತೆ ತೆರವು ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.