Shiradi : ಕಾಂಕ್ರೀಟ್ ರಸ್ತೆಯಲ್ಲಿ ಅಪಾಯಕಾರಿ ಹೊಂಡಗಳು!
Team Udayavani, Dec 26, 2023, 11:07 PM IST
ಬಂಟ್ವಾಳ: ಕರಾವಳಿ ಜಿಲ್ಲೆಗಳಿಗೆ ರಾಜಧಾನಿ ಬೆಂಗಳೂರು ಸಂಪರ್ಕದ ಹೆಬ್ಟಾಗಿಲು ಎಂದೇ ಕರೆಯಲ್ಪಡುವ ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿ ಘಾಟಿ ರಸ್ತೆ ಸದಾ ಒಂದಿಲ್ಲೊಂದು ಸಮಸ್ಯೆಗಳಿಂದ ಸುದ್ದಿಯಾಗುತ್ತಿದೆ. ಇದೀಗ ಘಾಟಿಯ ಕಾಂಕ್ರೀಟ್ ರಸ್ತೆಯ ಹೊಂಡಗಳು ಅಪಾಯವನ್ನು ಆಹ್ವಾನಿಸುತ್ತಿವೆ ಎಂಬ ಆರೋಪ ಕೇಳಿ ಬರುತ್ತಿದೆ.
ಶಿರಾಡಿ ಘಾಟಿ ರಸ್ತೆಯ ಹೆಗ್ಗದ್ದೆ ಬಳಿ ಶ್ರೀ ಚೌಡೇಶ್ವರಿ ದೇವಸ್ಥಾನದಿಂದ ಮಂಗಳೂರಿನ ಕಡೆಗೆ ಸುಮಾರು 300 ಮೀಟರ್ ದೂರದಲ್ಲಿ ಸೇತುವೆಯ ಮೇಲೆ ಕಾಂಕ್ರೀಟ್ ಕಿತ್ತುಹೋಗಿದ್ದು, ಒಳಭಾಗದಲ್ಲಿ ಅಳವಡಿಸಿರುವ ಸರಳುಗಳು ಕಾಣಿಸುತ್ತಿವೆ. 2 ಕಿ.ಮೀ. ಅಂತರದಲ್ಲಿ ಬೆಂಗಳೂರು ಭಾಗದ ರಸ್ತೆಯಲ್ಲೂ ಅದೇ ರೀತಿಯ ಹೊಂಡಗಳು ಸೃಷ್ಟಿಯಾಗಿವೆ.
ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಗಳು ತುರ್ತು ಗಮನಹರಿಸಬೇಕಾದ ಅಗತ್ಯವಾಗಿದ್ದು, ಇಲ್ಲದೇ ಇದ್ದರೆ ಸೇತುವೆಗೂ ಅಪಾಯ ಉಂಟಾಗುವ ಸಾಧ್ಯತೆಯ ಕುರಿತು ಪ್ರಯಾಣಿಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಸಮಸ್ಯೆಗಳ ಕುರಿತು ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರು ಕಾಳಜಿ ತೋರುತ್ತಿದ್ದಾರೆ. ಆದರೆ ಅದೇ ಹೆದ್ದಾರಿಯ ಮೂಲಕ ಸಂಚರಿಸುವ ಜನಪ್ರತಿನಿಧಿಗಳು ಮಾತ್ರ ಗಮನಹರಿಸುತ್ತಿಲ್ಲ ಎಂದು ಆರೋಪಗಳು ಕೇಳಿ ಬರುತ್ತಿವೆ.
ಸೇವ್ ಎನ್ಎಚ್75 ಅಭಿಯಾನ
ಈ ಸಮಸ್ಯೆಯ ಪರಿಹಾರಕ್ಕಾಗಿ ಇದೀಗ ಹೆದ್ದಾರಿ ಬಳಕೆದಾರರು “ಸೇವ್ ಎನ್ಎಚ್75′ ಹ್ಯಾಷ್ಟ್ಯಾಗ್ ಆರಂಭಿಸುವ ಕುರಿತು ಚಿಂತನೆ ನಡೆಸುತ್ತಿದ್ದಾರೆ. ಈ ರೀತಿಯ ಟ್ವೀಟ್ ಅಭಿಯಾನಗಳು ಜೋರಾಗಿ ನಡೆದು ಸಂಬಂಧಪಟ್ಟವರನ್ನು ತಲುಪಿದಾಗಲೇ ಸಮಸ್ಯೆ ಪರಿಹಾರವನ್ನು ಕಾಣಲು ಸಾಧ್ಯ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.