Kadaba; ಮುದ್ರಾಂಕ ಇಲಾಖೆಯ ತಾಂತ್ರಿಕ ದೋಷ: ಕಗ್ಗಂಟಾದ ಪಹಣಿ ದಾಖಲಾತಿ


Team Udayavani, Feb 6, 2024, 11:00 PM IST

ಮುದ್ರಾಂಕ ಇಲಾಖೆಯ ತಾಂತ್ರಿಕ ದೋಷ: ಕಗ್ಗಂಟಾದ ಪಹಣಿ ದಾಖಲಾತಿ

ಕಡಬ: ಮುದ್ರಾಂಕ ಇಲಾಖೆಯ ತಾಂತ್ರಿಕ ದೋಷದಿಂದಾಗಿ ಪಹಣಿ(ಆರ್‌ಟಿಸಿ)ಯಲ್ಲಿ ದಾಖಲಾತಿಗೆ ತೊಡಕುಂಟಾಗಿದ್ದು, ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ.

ಆನ್‌ಲೈನ್‌ ಮೂಲಕ ದಸ್ತಾವೇಜು ನೋಂದಣಿ ಪ್ರಾರಂಭವಾದ ದಿನದಿಂದ ಈ ತನಕ ಉಪನೋಂದಣಿ ಕಚೇರಿಯಲ್ಲಿ ನೋಂದಣಿಯಾದ ಹೆಚ್ಚಿನ ಹಕ್ಕು ಖುಲಾಸು ಪತ್ರಗಳ ಪಹಣಿ/ಖಾತೆ ಬದಲಾವಣೆಗೆ ತೀವ್ರ ಹಿನ್ನೆಡೆಯಾಗಿದೆ. 5 ತಿಂಗಳಿಂದ ನೋಂದಣಿಯಾದ ಹಲವಾರು ಆಸ್ತಿಯ ಪಹಣಿ ಪತ್ರ ಬಾಕಿಯಿದ್ದು ಸಾರ್ವಜನಿಕರು ಕಚೇರಿಗಳಿಗೆ ಅಲೆದು ಹೈರಾಣಾಗಿದ್ದಾರೆ. ಜನಸಾಮಾನ್ಯರು ಹಲವು ಬಾರಿ ಮಾಹಿತಿ ಕೇಳಿದರೂ ಸಮರ್ಪಕ ಉತ್ತರ ಸಿಗುತ್ತಿಲ್ಲ.

ಈ ಹಿಂದೆ ಕಾವೇರಿ ತಂತ್ರಾಂಶ-1ರಲ್ಲಿ ದಸ್ತಾವೇಜು ಮಾಡಿ ಸಬ್‌ ರಿಜಿಸ್ಟ್ರಾರ್‌ ಕಚೇರಿ ಸೂಕ್ತ ದಾಖಲೆಗಳನ್ನು ನೀಡಿದರೆ ಸುಲಲಿತವಾಗಿ ದಸ್ತಾವೇಜು ನಡೆದು ಪಹಣಿಯಾಗುತ್ತಿತ್ತು. ಈಗ ಕಾವೇರಿ ತಂತ್ರಾಂಶ 2ರಲ್ಲಿ ದಸ್ತಾವೇಜು ಬರಹಗಾರರು ದಸ್ತಾವೇಜು ಮಾಡಿ ಕೀ ಫೀಡ್‌ ಮಾಡಿ ಅದನ್ನು ರಿಜಿಸ್ಟ್ರಾರ್‌ ಲಾಗ್‌ ಇನ್‌ಗೆ ಕಳುಹಿಸಬೇಕು. ಬಳಿಕ ರಿಜಿಸ್ಟ್ರಾರ್‌ ಅವರು ಅಪ್‌ ಲೋಡ್‌ ಆದ ದಾಖಲೆಗಳನ್ನು ಪರಿಶೀಲಿಸಿ ನೋಂದಣಿ ಶುಲ್ಕದ ಪಾವತಿ ಮಾದರಿಯನ್ನು ಕಳುಹಿಸಿ ಕೊಟ್ಟು, ಬಳಿಕ ಪಾವತಿ ಮಾಡಿ ಶೆಡ್ನೂಲ್‌ ಟೈಮ್‌ ನಿಗದಿ ಮಾಡಿಕೊಂಡು ನೋಂದಣಿ ಮಾಡಬೇಕಾಗಿದೆ.

ಈ ಮಧ್ಯೆ ನೋಂದಣಿ ಶುಲ್ಕ ಪಾವತಿಸುವಾಗ ತಾಂತ್ರಿಕ ತೊಂದರೆಯಾದರೆ ಶುಲ್ಕವನ್ನು ವಾಪಸು ಪಡೆಯಲು ತಿಂಗಳುಗಳೇ ಬೇಕಾಗುತ್ತದೆ. ಆ ತೊಂದರೆಯನ್ನು ಮುಂದಿಟ್ಟುಕೊಂಡು ದಸ್ತಾವೇಜು ಬರಹಗಾರರು ವಿಳಂಬಿಸಿದಲ್ಲಿ ತಮ್ಮ ಗ್ರಾಹಕರ ಅಸಮಾಧಾನಕ್ಕೆ ತುತ್ತಾಗುತ್ತಿದ್ದಾರೆ. ಇಷ್ಟೆಲ್ಲಾ ಆಗಿ ದಸ್ತಾವೇಜು ಪ್ರಕ್ರಿಯೆ ಪರಿಪೂರ್ಣ ಗೊಳಿಸಿದರೂ ಪಹಣಿಯಾಗುತ್ತಿಲ್ಲ ಎನ್ನುವುದೇ ಸಮಸ್ಯೆ.

ಖಲಾಸ್‌ ಪತ್ರ!
5 ತಿಂಗಳಿಂದ ನೋಂದಣಿಯಾದ ಹಲವಾರು ಹಕ್ಕು ಖುಲಾಸು ಪತ್ರ “ಹಕ್ಕು ಖಲಾಸ್‌ ಪತ್ರ’ವಾಗಿಯೇ ಉಳಿದಿದೆ ಎಂದು ಸಾರ್ವಜನಿಕ ವಲಯದಲ್ಲಿ ಅಕ್ರೋಶ ವ್ಯಕ್ತವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎನ್ನುವ ಅಗ್ರಹ ವ್ಯಕ್ತವಾಗಿದೆ.

ಇದು ರಾಜ್ಯಾದ್ಯಂತ ಇರುವ ಸಮಸ್ಯೆ. ಕಾವೇರಿ 1 ತಂತ್ರಾಂಶದಿಂದ ಕಾವೇರಿ 2 ತಂತ್ರಾಂಶಕ್ಕೆ ಬದಲಾಗುವಾಗ ಆಗಿರುವ ತಾಂತ್ರಿಕ ಸಮಸ್ಯೆ. ಸಮಸ್ಯೆಯನ್ನು ಕಂದಾಯ ಸಚಿವರ ಗಮನಕ್ಕೆ ತರಲಾಗಿದ್ದು, ಹಂತಹಂತವಾಗಿ ಸರಿಪಡಿಸಲಾಗುತ್ತಿದೆ. ಶೀಘ್ರ ಪೂರ್ಣ ಪರಿಹಾರ ಸಿಗಲಿದೆ.
– ಸಯ್ಯದ್‌ ನೂರ್‌ ಪಾಷ, ನೋಂದಣಾಧಿಕಾರಿ, ದ.ಕ. ಜಿಲ್ಲೆ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.