Karnataka ರಾಜ್ಯ ಸರಕಾರದ ಸಿಎಸ್‌ ಶಾಲಿನಿ ರಜನೀಶ್‌ ಮನೆಗೆ ಸುಳ್ಯದ ಗೋವುಗಳು

ಮಲೆನಾಡು ಗಿಡ್ಡ ತಳಿ ಸಂರಕ್ಷಣ ಅಭಿಯಾನಕ್ಕೆ ಈ ಪ್ರಕ್ರಿಯೆ ಇನ್ನಷ್ಟು ಹುರುಪು ತುಂಬುವ ನಿರೀಕ್ಷೆ

Team Udayavani, Aug 31, 2024, 6:30 AM IST

Karnataka ರಾಜ್ಯ ಸರಕಾರದ ಸಿಎಸ್‌ ಶಾಲಿನಿ ರಜನೀಶ್‌ ಮನೆಗೆ ಸುಳ್ಯದ ಗೋವು

ಸುಳ್ಯ: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಗೋವಿನ ಮೇಲಿನ ವಿಶೇಷ ಕಾಳಜಿಯಿಂದ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ಸುಳ್ಯದಿಂದ ಬೆಂಗಳೂರಿಗೆ ಕೊಂಡೊಯ್ದಿದ್ದಾರೆ.

ಅವರು ಮಲೆನಾಡು ಗಿಡ್ಡ ತಳಿಯ ನಾಲ್ಕು (ಎರಡು ತಾಯಿ, ಎರಡು ಕರು) ಗೋವುಗಳನ್ನು ಬೆಂಗಳೂರಿನ ಮನೆಗೆ ಪೂಜೆ ಸಲ್ಲಿಸಿ ಬರ ಮಾಡಿಕೊಂಡರು.

ಮನೆ ಮನೆಯಲ್ಲೂ ಮಲೆನಾಡು ಗಿಡ್ಡ ಗೋವು ಸಾಕಬೇಕೆಂದು ಮಲೆನಾಡು ಗಿಡ್ಡ ಸಂರಕ್ಷಣೆ ಮತ್ತು ಸಂವರ್ಧನಾ ಅಭಿಯಾನ ನಡೆಸಲಾಗುತ್ತಿದೆ. ಅದಕ್ಕಾಗಿ ತಂಡ ರಚಿಸಿಕೊಂಡು ಆಸಕ್ತರಿಗೆ ಗಿಡ್ಡ ತಳಿಗಳನ್ನು ಒದಗಿಸಲಾಗುತ್ತದೆ.

ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಅಲೆಕ್ಕಾಡಿ ಸಮೀಪದ ಕೃಷಿಕ ಅಕ್ಷಯ್‌ ಆಳ್ವ ಅವರು ಕೂಡ ಮಲೆನಾಡು ಗಿಡ್ಡ ತಳಿ ಸಂರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಆಸಕ್ತರಿಗೆ ಮಲೆನಾಡು ಗಿಡ್ಡ ತಳಿಯನ್ನು ನೀಡುತ್ತಿದ್ದಾರೆ.

ಐಎಎಸ್‌ ಅಧಿಕಾರಿಗೆ ಗೋದಾನ
ಶಾಲಿನಿ ರಜನೀಶ್‌ ಅವರು ಮಲೆನಾಡು ಗಿಡ್ಡ ತಳಿಯ ಗೋವು ಸಾಕಲು ಆಸಕ್ತಿ ವಹಿಸಿ, ಕಡಬದ ಕೊಯಿಲ ಪಶುಸಂಗೋಪನಾ ಇಲಾಖೆ ನಿರ್ದೇಶಕ ಪ್ರಸನ್ನ ಹೆಬ್ಬಾರ್‌ ಮೂಲಕ ಮಾಹಿತಿ ಪಡೆದು ಅಕ್ಷಯ್‌ ಆಳ್ವರನ್ನು ಸಂಪರ್ಕಿಸಿದ್ದಾರೆ. ಅಕ್ಷಯ್‌ ತಮ್ಮ ಬೇಡಿಕೆಗಳನ್ನು ತಿಳಿಸಿದ್ದು, ಅದಕ್ಕೆ ಒಪ್ಪಿಗೆ ಸೂಚಿಸಿದ ಶಾಲಿನಿ ರಜನೀಶ್‌ ಅವರಿಗೆ ಮಲೆನಾಡು ಗಿಡ್ಡ ತಳಿಯ ನಾಲ್ಕು ಗೋವುಗಳನ್ನು ಹಸ್ತಾಂತರಿಸಲಾಗಿದೆ.

ತಾವು ಪಡೆದ ಗೋವುಗಳನ್ನು ಸ್ವತಃ ಶಾಲಿನಿ ರಜನೀಶ್‌ ಅವರೇ ಮನೆಯವರೊಂದಿಗೆ ಸಾಕಿ-ಸಲಹಲಿದ್ದಾರೆ. ಅದಕ್ಕಾಗಿ ಹಟ್ಟಿಯನ್ನೂ ನಿರ್ಮಿಸಿದ್ದಾರೆ.

ಅಕ್ಷಯ್‌ ಅವರಲ್ಲಿದ್ದ ಐದು ವರ್ಷ ಪ್ರಾಯದ ಹಂಸಿ ಹೆಸರಿನ ಮಲೆನಾಡು ಗಿಡ್ಡ ತಳಿಯ ತಾಯಿ ಹಾಗೂ ಒಂದೂವರೆ ತಿಂಗಳಿನ ಕರು ಹಾಗೂ ಈ ಹಿಂದೆ ಅಕ್ಷಯ್‌ ಅವರು ಬಾಳುಗೋಡಿಗೆ ನೀಡಲಾಗಿದ್ದ ಸ್ವರ್ಣ ಕಪಿಲ ಹೆಸರಿನ ಎರಡೂವರೆ ವರ್ಷದ ತಾಯಿ ಹಾಗೂ ಎರಡೂವರೆ ತಿಂಗಳಿನ ಕರುವನ್ನು ಗುರುವಾರ ಮುರುಳ್ಯದಿಂದ ವಾಹನದ ಮೂಲಕ ಬೆಂಗಳೂರಿಗೆ ಕಳುಹಿಸಲಾಗಿದೆ. ಈ ಸಂದರ್ಭ ಹಂಸಿ ದನ ಕಣ್ಣೀರಿಟ್ಟ ಘಟನೆಯೂ ನಡೆದಿದೆ. ಇಲಾಖೆಯ ನಿಯಮಾವಳಿಯಂತೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಗೋವನ್ನು ಬೆಂಗಳೂರಿಗೆ ಸಾಗಿಸಲಾಗಿದೆ.

ನಾನು ಮಲೆನಾಡು ಗಿಡ್ಡ ತಳಿಯ ಗೋವನ್ನು ಸಾಕುತ್ತಿದ್ದೇನೆ. ಮಲೆನಾಡು ಗಿಡ್ಡ ದನವನ್ನು ಪ್ರೀತಿಯಿಂದ ಸ್ವತಃ ಶಾಲಿನಿ ರಜನೀಶ್‌ ಅವರೇ ಸಾಕುತ್ತಾರೆ ಎಂದು ತಿಳಿಸಿದ ಬಳಿಕವೇ ಅವರಿಗೆ ನೀಡಿದ್ದೇವೆ. ಭಾವನಾತ್ಮಕ ಸಂಬಂಧ ಹೊಂದಿದ್ದ ಹಂಸಿ ಇಲ್ಲಿಂದ ಬೀಳ್ಕೊಡುವಾಗ ಕಣ್ಣೀರಿಟ್ಟಿದೆ. ಮಲೆನಾಡು ಗಿಡ್ಡ ತಳಿ ಸಂರಕ್ಷಣ ಅಭಿಯಾನಕ್ಕೆ ಈ ಪ್ರಕ್ರಿಯೆ ಇನ್ನಷ್ಟು ಹುರುಪು ತುಂಬುವ ನಿರೀಕ್ಷೆ ನಮ್ಮಲ್ಲಿದೆ.
-ಅಕ್ಷಯ್‌ ಆಳ್ವ ಮುರುಳ್ಯ

ಟಾಪ್ ನ್ಯೂಸ್

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Subramanya: ನಿಯಂತ್ರಣ ತಪ್ಪಿದ ಕಾರು ಪಲ್ಟಿ

15

Belthangady: ನೇಣುಬಿಗಿದು ವ್ಯಕ್ತಿ ಸಾವು

7-sulya

ಗುತ್ತಿಗೆ ಆಧಾರಿತ KSRTC ಬಸ್ ಚಾಲಕರ ಸಂಬಳ ಕಡಿತ,ಅಸಮಾಧಾನ; ಕರ್ತವ್ಯಕ್ಕೆ ಗೈರಾದ ಚಾಲಕರು

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

kalla

B C Road: ಬ್ಯಾಂಕ್‌ ಶಾಖೆಯಿಂದ 1.30 ಲಕ್ಷ ರೂ. ನಗದಿದ್ದ ಬ್ಯಾಗ್‌ ಕಳವು

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

21

Subramanya: ನಿಯಂತ್ರಣ ತಪ್ಪಿದ ಕಾರು ಪಲ್ಟಿ

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.