Subhramanya: ಹೆದ್ದಾರಿಗಳು ಜಲಾವೃತ, ಸ್ನಾನಘಟ್ಟ ಮುಳುಗಡೆ

ಕೈಕಂಬದ ಕೋಟೆಸಾರ್‌ ಹೊಳೆಗೆ ಅಡ್ಡಲಾಗಿರುವ ಸೇತುವೆ ಮುಳುಗಿ ಸಂಚಾರ ಕಡಿತ

Team Udayavani, Jul 31, 2024, 1:10 AM IST

SUBramay

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಪರಿಸರ ಸೇರಿದಂತೆ ಪಶ್ಚಿಮ ಘಟ್ಟ ಮತ್ತು ಘಟ್ಟ ಪ್ರದೇಶದಲ್ಲಿ ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ಸ್ನಾನಘಟ್ಟ ಮುಳುಗಡೆಯಾಗಿದ್ದು, ಕುಕ್ಕೆ ಸಂಪರ್ಕದ ಮೂರು ಕಡೆಗಳಲ್ಲಿ ಹೆದ್ದಾರಿಗೆ ನೀರು ನುಗ್ಗಿ ಸಂಚಾರ ಕಡಿತಗೊಂಡ ಘಟನೆ ಸಂಭವಿಸಿದೆ.

ಕುಮಾರಧಾರದ ಸುಬ್ರಹ್ಮಣ್ಯ -ಪುತ್ತೂರು ಸಂಪರ್ಕ ರಸ್ತೆ ಮತ್ತು ಸೇತುವೆ ಸುಬ್ರಹ್ಮಣ್ಯದಲ್ಲಿ ನದಿ ನೀರು ನುಗ್ಗಿ ಹೆದ್ದಾರಿ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಸುಬ್ರಹ್ಮಣ್ಯ- ನೆಟ್ಟಣ-ಉಪ್ಪಿನಂಗಡಿ- ಮಂಗಳೂರು ಹೆದ್ದಾರಿಯ ಬಿಳಿನೆಲೆ ಗ್ರಾಮದ ಕೈಕಂಬದ ಕೋಟೆಸಾರ್‌ ಹೊಳೆಗೆ ಅಡ್ಡಲಾಗಿರುವ ಸೇತುವೆ ಮುಳುಗಡೆಗೊಂಡು ಸಂಚಾರ ಕಡಿತಗೊಂಡಿತು. ಪರಿಣಾಮ ಎರಡೂ ಬದಿಗಳಲ್ಲೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸುಬ್ರಹ್ಮಣ್ಯ- ಕೈಕಂಬ-ಗುಂಡ್ಯ ಹೆದ್ದಾರಿಯ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿ ಹೆದ್ದಾರಿಗೆ ಸಮೀಪದ ಹೊಳೆಯ ನೀರು ನುಗ್ಗಿ ಸಂಪರ್ಕ ಕಡಿತಗೊಂಡು ವಾಹನ ಸಂಚಾರ ಸ್ಥಗಿತಗೊಂಡಿತು.

ಸ್ನಾನಘಟ್ಟ ಮುಳುಗಡೆ
ನೆರೆ ನೀರಿಗೆ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಗೊಂಡಿದ್ದು, ನದಿ ತೀರದಲ್ಲಿರುವ ಶ್ರೀ ದೇವರ ಜಳಕದ ಕಟ್ಟೆ ಮುಳುಗಡೆಗೊಂಡಿದೆ. ಇಲ್ಲಿನ ಶೌಚಾಲಯ ಕಟ್ಟಡ ಮುಕ್ಕಾಲು ಭಾಗ ಮುಳುಗಡೆಗೊಂಡಿದೆ. ಡ್ರೆಸ್ಸಿಂಗ್‌ ಕೊಠಡಿಗಳು, ಲಗೇಜ್‌ ಕೊಠಡಿ, ಅಂಗಡಿಗಳು ಜಲಾವೃತಗೊಂಡಿವೆ.

ಮಳೆಗೆ ಶಾಲೆಗೆ ರಜೆ
ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾಸಂಸ್ಥೆಗೆ ಗ್ರಾಮೀಣ ಭಾಗದ ದೂರ ದೂರುಗಳಿಂದ ವಿದ್ಯಾರ್ಥಿಗಳು ಆಗಮಿಸುವುದರಿಂದ ಮುಂಜಾಗ್ರತ ಕ್ರಮವಾಗಿ ಸುಬ್ರಹ್ಮಣ್ಯ ಪರಿಸರದ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಯಿತು. ಭಾರೀ ಮಳೆಯಿಂದಾಗಿ ಕುಕ್ಕೆ ದೇಗುಲದಲ್ಲಿ ಭಕ್ತರ ಸಂಖ್ಯೆ ವಿರಳಗೊಂಡಿತ್ತು.

ಟಾಪ್ ನ್ಯೂಸ್

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

BC-Road

Audio Contraversy: ಶರಣ್‌ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

Electrcity

Sulya: ಲೈನ್‌ ದುರಸ್ತಿ ವೇಳೆ ಕಾರ್ಮಿಕನಿಗೆ ವಿದ್ಯುತ್‌ ಆಘಾತ

guttigaru

Guttigaru: ಅಸೌಖ್ಯದಿಂದ ನಾಲ್ಕೂರು ಗ್ರಾಮದ ಯುವಕ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

9-uv-fusion

Lineman: ಸೂಪರ್‌ಮ್ಯಾನ್‌ಗಳಿಗೆ ಸಲಾಂ

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

8-uv-fusion

Wayanad landslides: ದೇವರ ನಾಡಿನಲ್ಲಿ ಸೂತಕದ ಛಾಯೆ

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.