![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
Team Udayavani, Jan 29, 2025, 12:54 PM IST
ಸುಳ್ಯ: ಸುಳ್ಯದಲ್ಲಿ ಕಾರ್ಯಾಚರಿಸುತ್ತಿದ್ದ ಮೂರೂ ಆಧಾರ್ ಕೇಂದ್ರಗಳು ಏಕಕಾಲದಲ್ಲಿ ಕೆಲಸ ನಿಲ್ಲಿಸಿರುವುದರಿಂದ ಸಾರ್ವಜನಿಕರು ಅತಂತ್ರಗೊಂಡಿದ್ದಾರೆ. ಹೊಸ ಆಧಾರ್ ಕಾರ್ಡ್, ತಿದ್ದುಪಡಿ ನವೀಕರಣ ಮತ್ತಿತರ ಕೆಲಸಗಳಿಗಾಗಿ ದೂರದ ಊರಿಗೆ ತೆರಳಬೇಕಾದ ಸ್ಥಿತಿ ಎದುರಾಗಿದೆ.
ಸುಳ್ಯದ ಅಂಚೆ ಕಚೇರಿ, ಸುಳ್ಯದ ಬ್ಯಾಂಕ್ ಆಫ್ ಬರೋಡಾ ಶಾಖೆ, ಎಸ್ಬಿಐ ಶಾಖಾ ಕಚೇರಿಯಲ್ಲಿ ಆಧಾರ್ ಸೇವಾ ಕೇಂದ್ರಗಳು ಕಾರ್ಯಾಚರಿಸುತ್ತಿದ್ದವು. ಆದರೆ ಇದೀಗ ಈ ಮೂರು ಕಡೆಗಳಲ್ಲೂ ಆಧಾರ್ ಕೇಂದ್ರಗಳು ಬಂದ್ ಆಗಿದೆ. ಇಲ್ಲಿನ ಕೇಂದ್ರಗಳಲ್ಲಿ ದಿನಕ್ಕೆ 30-40 ಮಂದಿಗೆ ಸೇವೆಗಳನ್ನು ನೀಡಲಾಗುತ್ತಿದ್ದರೂ, ಅದಕ್ಕಿಂತ ಹೆಚ್ಚಿನ ಜನರು ಇಲ್ಲಿ ಸೇವೆಗಾಗಿ ಆಗಮಿಸುತ್ತಿದ್ದರು. ಸುಳ್ಯ ನಗರ ಮಾತ್ರವಲ್ಲದೆ ಹೊರಭಾಗದ ಜನರೂ ಇಲ್ಲಿ ಸೇವೆಯನ್ನು ಪಡೆಯುತ್ತಿದ್ದರು.
ಬಂದ್ ಆಗಿದ್ದು ಯಾಕೆ?
ಸುಳ್ಯದ ಅಂಚೆ ಕಚೇರಿಯಲ್ಲಿ ಆಧಾರ್ ಸೇವಾ ಕೇಂದ್ರ ನಿರ್ವಹಿಸುತ್ತಿದ್ದ ಸಿಬಂದಿ ವರ್ಗಾವಣೆಗೊಂಡಿದ್ದಾರೆ. ಒಂದು ತಿಂಗಳಿನಿಂದ ಇಲ್ಲಿ ಸೇವೆ ಸ್ಥಗಿತವಾಗಿದೆ. ಇಲ್ಲಿನ ಸಿಬಂದಿಗೆ ನಿರ್ವಹಣೆಯ ತರಬೇತಿ ನೀಡಲಾಗುತ್ತಿದೆ. ತಿಂಗಳಲ್ಲಿ ಸಿಬಂದಿ ನೇಮಕವಾಗಲಿದೆ ಎಂದು ಹೇಳಲಾಗುತ್ತಿದೆ.
ಎಸ್ಬಿಐ ಮತ್ತು ಬ್ಯಾಂಕ್ ಆಫ್ ಬರೋಡಾ ಶಾಖೆಗಳಲ್ಲಿ ಆಧಾರ್ ಕೇಂದ್ರಗಳು ಕಾರ್ಯಾಚರಿಸುತ್ತಿದ್ದರೂ ಅವುಗಳನ್ನು ಬೇರೆ ಏಜೆನ್ಸಿಗಳು ನಿರ್ವಹಿಸುತ್ತಿದ್ದವು. ಎಸ್ಬಿಐ ಶಾಖಾ ಕಚೇರಿಯಲ್ಲಿ ಕಾರ್ಯಾಚರಿಸುತ್ತಿದ್ದ ಆಧಾರ್ ಕೇಂದ್ರ ಒಂದು ವರ್ಷದ ಹಿಂದೆಯೇ ಬಂದ್ ಆಗಿದ್ದರೆ, ಬ್ಯಾಂಕ್ ಆಫ್ ಬರೋಡದ ಕೇಂದ್ರ ನವೆಂಬರ್ನಿಂದ ಕಾರ್ಯಾಚರಿಸುತ್ತಿಲ್ಲ.
ತಾ.ಪಂ. ಕೇಂದ್ರದಲ್ಲಿ ಸೀಮಿತ ಸೇವೆ
ಸುಳ್ಯದ ತಾಲೂಕು ಪಂಚಾಯತ್ ಕಚೇರಿ ವಠಾರದಲ್ಲಿ ಒಂದು ಆಧಾರ್ ಸೇವಾ ಕೇಂದ್ರ ಕಾರ್ಯಾಚರಿಸುತ್ತಿದ್ದರೂ ಇಲ್ಲಿ ಎಲ್ಲ ಸೇವೆಗಳು ಲಭ್ಯವಾಗದ ಕಾರಣ ಅಷ್ಟಾಗಿ ಪ್ರಯೋಜನವಾಗುತ್ತಿಲ್ಲ. ಇಲ್ಲಿ ವಿಳಾಸ ತಿದ್ದುಪಡಿ, ದೂರವಾಣಿ ಸಂಖ್ಯೆ ಸೇರ್ಪಡೆ ಮಾತ್ರವೇ ಮಾಡಲಾಗುತ್ತದೆ ಎಂದು ಸಿಬಂದಿ ತಿಳಿಸಿದ್ದಾರೆ. ಇಲ್ಲಿಯೇ ಆಧಾರ್ನ ಎಲ್ಲ ಸೇವೆಗಳನ್ನು ಕಲ್ಪಿಸಿದಲ್ಲಿ ಅದೆಷ್ಟೋ ಮಂದಿಗೆ ಪ್ರಯೋಜನವಾಗಲಿದೆ ಎಂದು ಜನ ಹೇಳುತ್ತಾರೆ.
ದೂರದೂರಿಗೆ ಜನರ ಅಲೆದಾಟ
ಆಧಾರ್ ಸೇವಾ ಕೇಂದ್ರಗಳು ಬಂದ್ ಆಗಿರುವುದರಿಂದ ಅಗತ್ಯವಾಗಿ ಆಧಾರ್ ಮಾಡಿಸಲು, ತಿದ್ದುಪಡಿ ಕೆಲಸ ಮಾಡಿಸಲು ಸುಳ್ಯದ ಜನರು ಪುತ್ತೂರು ಸೇರಿದಂತೆ ದೂರದ ಆಧಾರ್ ಸೇವಾ ಕೇಂದ್ರಗಳಿಗೆ ಅಲೆದಾಡುತ್ತಿದ್ದಾರೆ. ಒಂದು ದಿನ ಆಗದಿದ್ದರೆ ಮತ್ತೂಂದು ದಿನ ಹೋಗಬೇಕಾಗಿದೆ. ಹೀಗಾಗಿ ಈ ಕೇಂದ್ರಗಳನ್ನು ಮರು ಆರಂಭಿಸಬೇಕು, ಹೆಚ್ಚುವರಿಯಾಗಿ ಸುಳ್ಯ ನಗರ ಪಂಚಾಯತ್ನಲ್ಲೂ ಕೇಂದ್ರ ಆರಂಭಿಸಬೇಕು ಎಂದು ಸಾರ್ವಜನಿಕರು ಅಧಿಕಾರಿಗಳು, ಜನಪ್ರತಿನಿಧಿಗಳಿಗೂ ಮನವಿಗಳನ್ನು ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ
ಸುಳ್ಯದಲ್ಲಿ ಆಧಾರ್ ಸೇವಾ ಕೇಂದ್ರಗಳು ಸ್ಥಗಿತಗೊಂಡು ಆಗಿರುವ ಸಮಸ್ಯೆಗಳ ಬಗ್ಗೆ ಗಮನಕ್ಕೆ ಬಂದಿದ್ದು, ಆ ಕೂಡಲೇ ಈ ಬಗ್ಗೆ ಆಧಾರ್ ಸೇವಾ ಕೇಂದ್ರಗಳನ್ನು ಮತ್ತೆ ಆರಂಭಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರು ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಇನ್ನೊಮ್ಮೆ ಅವರ ಗಮನಕ್ಕೆ ತಂದು ಆಧಾರ್ ಸೇವಾ ಕೇಂದ್ರ ಆರಂಭಕ್ಕೆ ಕ್ರಮ ವಹಿಸುತ್ತೇನೆ.
-ಭಾಗೀರಥಿ ಮುರುಳ್ಯ, ಶಾಸಕರು ಸುಳ್ಯ ಕ್ಷೇತ್ರ
-ದಯಾನಂದ ಕಲ್ನಾರ್
Katapadi: ಮುಕ್ಕಾಲು ಎಕರೆಯಲ್ಲಿ 8 ಟನ್ ಸೌತೆ, ಅಂಗಳದಿಂದಲೇ ಮಾರಾಟ!
Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು
Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್ ಪತ್ರಿಕೆ
Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
You seem to have an Ad Blocker on.
To continue reading, please turn it off or whitelist Udayavani.