![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 7, 2023, 12:45 AM IST
ಸುಳ್ಯ: ಆಟೋರಿಕ್ಷಾವೊಂದಕ್ಕೆ ಕಾರು ಢಿಕ್ಕಿಯಾದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ರವಿವಾರ ರಾತ್ರಿ ಸುಳ್ಯ ನಗರದಲ್ಲಿ ಸಂಭವಿಸಿದೆ.
ಆಟೋ ಚಾಲಕ ಜಾಲ್ಸೂರು ಗ್ರಾಮದ ಅರಿಯಡ್ಕ ನಿವಾಸಿ ಬಾಬು ಪಾಟಾಳಿ (70) ಮೃತರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮಾಣಿ- ಮೈಸೂರು ಹೆದ್ದಾರಿಯ ಸುಳ್ಯ ನಗರದ ಹಳೆಗೇಟು ಎಂಬಲ್ಲಿ ದೇವರಾಜ್ ಅವರು ತನ್ನ ಆಮ್ನಿ ಕಾರನ್ನು ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆಸಿದ್ದಾರೆ.
ಘಟನೆಯಿಂದ ಆಟೋ ರಿಕ್ಷಾದಲ್ಲಿದ್ದ ಬಾಬು ಪಾಟಾಳಿ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತರಾಗಿದ್ದಾರೆ. ಆಟೋದಲ್ಲಿದ್ದ ಪ್ರಯಾಣಿಕ ಗಣಪತಿ ಭಟ್ ಗಾಯಗೊಂಡಿದ್ದು, ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾರ್ಥಿವ ಶರೀರದ ಮೆರವಣಿಗೆ
ಅಪಘಾತದಲ್ಲಿ ಮೃತರಾದ ಆಟೋ ಚಾಲಕ ಬಾಬು ಪಾಟಾಳಿ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದ ಬಳಿಕ ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಸುಳ್ಯದಿಂದ ಆಟೋರಿಕ್ಷಾ ಚಾಲಕರು ಮೆರವಣಿಗೆಯ ಮೂಲಕ ಜಾಲ್ಸೂರಿನ ಪೆಟ್ರೋಲ್ ಬಂಕ್ ತನಕ ಸಾಗಿ ಬಳಿಕ ಮೃತರ ಸ್ವಗೃಹವಾದ ಅರಿಯಡ್ಕಕ್ಕೆ ಕೊಂಡೊಯ್ಯಲಾಯಿತು. ಬಾಬು ಪಾಟಾಳಿ ಅವರು ಆಟೋರಿಕ್ಷಾ ಚಾಲಕರಾಗಿ ಸುಮಾರು 40 ವರ್ಷಗಳ ಕಾಲ ದುಡಿದಿದ್ದು, ಜಾಲೂÕರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನ ಮಂದಿರದ ಅಧ್ಯಕ್ಷರಾಗಿ ಸುಮಾರು ಇಪ್ಪತ್ತು ವರ್ಷ ಸೇವೆ ಸಲ್ಲಿಸಿದ್ದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.