![3-Haveri](https://www.udayavani.com/wp-content/uploads/2024/06/3-Haveri-415x249.jpg)
Sullia: ಅವಹೇಳನಕಾರಿ ಸ್ಟೇಟಸ್: ಠಾಣೆ ಮೆಟ್ಟಿಲೇರಿದ ಪ್ರಕರಣ…
Team Udayavani, Jun 7, 2024, 6:00 AM IST
![Sullia: ಅವಹೇಳನಕಾರಿ ಸ್ಟೇಟಸ್: ಠಾಣೆ ಮೆಟ್ಟಿಲೇರಿದ ಪ್ರಕರಣ…](https://www.udayavani.com/wp-content/uploads/2024/06/lokayukta-2-620x349.jpg)
ಸುಳ್ಯ: ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಮತದಾರರ ಬಗ್ಗೆ ವ್ಯಕ್ತಿಯೋರ್ವ ಅವಹೇಳನಕಾರಿ ಸ್ಟೇಟಸ್ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ಪೊಲೀಸ್ ಠಾಣೆ ಮೆಟ್ಟಲೇರಿದ ಘಟನೆ ಜೂ. 5ರಂದು ಪಂಜದಲ್ಲಿ ನಡೆದಿದೆ.
ಪಂಜದಲ್ಲಿ ಅಂಗಡಿ ವ್ಯವಹಾರ ನಡೆಸುತ್ತಿರುವ ವ್ಯಕ್ತಿಯೋರ್ವರು ಕಾಂಗ್ರೆಸ್ ಪಕ್ಷದ ಬಗ್ಗೆ ಹಾಗೂ ಕಾಂಗ್ರೆಸ್ ಮತದಾರರ ಬಗ್ಗೆ ಅವಹೇಳನಕಾರಿ ಸ್ಟೇಟಸ್ ಹಾಕಿದ್ದಾರೆಂಬ ಆರೋಪ ವ್ಯಕ್ತವಾಗಿದ್ದು, ಇದನ್ನು ಗಮನಿಸಿದ ಅಲ್ಲಿನ ಕೆಲವು ಕಾಂಗ್ರೆಸ್ ಮುಖಂಡರು ಅವಹೇಳನಕಾರಿ ಸ್ಟೇಟಸ್ ಹಾಕಿದ ವ್ಯಕ್ತಿಯ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿತ ವ್ಯಕ್ತಿಯನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದು, ಈ ವೇಳೆ ವ್ಯಕ್ತಿ ತಪ್ಪೊಪ್ಪಿಕೊಂಡು ಕ್ಷಮೆ ಯಾಚಿಸಿದ್ದು, ಬಳಿಕ ಠಾಣೆಯ ಹೊರಗೆ ಇತ್ತಂಡದವರು ಮಾತುಕತೆ ನಡೆಸಿದ್ದರು. ಈ ವೇಳೆ ಆರೋಪಿತ ವ್ಯಕ್ತಿ ಕೇಸ್ ಹಿಂಪಡೆಯುವಂತೆ ವಿನಂತಿಸಿದ್ದು, ಈ ವೇಳೆ ಆರೋಪಿತ ವ್ಯಕ್ತಿ 3 ದಿನಗಳ ಕಾಲ ಅಂಗಡಿ ಮುಚ್ಚಬೇಕೆಂದು ದೂರು ನೀಡಿದ ತಂಡ ಷರತ್ತು ವಿ ಧಿಸಿತ್ತು. ಇದಕ್ಕೆ ವ್ಯಕ್ತಿ ಒಪ್ಪಿದ್ದ ಕಾರಣ ಪ್ರಕರಣ ಹಿಂತೆಗೆದು ಇತ್ಯರ್ಥಪಡಿಸಲಾಗಿತ್ತು.
ಅಂಗಡಿ ತೆರೆಸಿದ ಬಿಜೆಪಿಗರು
ಪ್ರಕರಣ ಠಾಣೆ ಮೆಟ್ಟಲೇರಿ ಬಳಿಕದಲ್ಲಿ ನಡೆದ ಮಾತುಕತೆಯಂತೆ ಆರೋಪಿತ ವ್ಯಕ್ತಿ ಜೂ. 6ರಂದು ತನ್ನ ಅಂಗಡಿ ತೆರೆದಿರಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಬಿಜೆಪಿ ಮುಖಂಡರು, ಅಂಗಡಿ ಮಾಲಕರನ್ನು ಸಂಪರ್ಕಿಸಿ ಅಂಗಡಿ ತೆರೆಯುವಂತೆ ಸೂಚಿಸಿದ್ದರು. ಅದರಂತೆ ಆ ವ್ಯಕ್ತಿ ಅಂಗಡಿಯನ್ನು ತೆರೆದಿದ್ದಾರೆ. ಅವಹೇಳನಕಾರಿ ಸ್ಟೇಟಸ್ ಹಾಕಿರುವುದಕ್ಕೆ ತಪ್ಪೊಪ್ಪಿಕೊಂಡಿದ್ದು, ಅಂಗಡಿ ಬಂದ್ ಮಾಡುತ್ತೇನೆ ಎಂದು ಮುಚ್ಚಳಿಕೆ ಬರೆದುಕೊಟ್ಟಿರಲಿಲ್ಲ. ಕಾಂಗ್ರೆಸ್ನವರು ಹೇಳುತ್ತಾರೆ ಎಂದು ಅಂಗಡಿ ಮುಚ್ಚಲು ಸಾಧ್ಯವಿಲ್ಲ, ನಾವು ತಿಳಿಸಿದಂತೆ ಇದೀಗ ಅಂಗಡಿ ತೆರೆದಿದ್ದಾರೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.
ಟಾಪ್ ನ್ಯೂಸ್
![3-Haveri](https://www.udayavani.com/wp-content/uploads/2024/06/3-Haveri-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![3-Haveri](https://www.udayavani.com/wp-content/uploads/2024/06/3-Haveri-150x90.jpg)
Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು
![2-manipal](https://www.udayavani.com/wp-content/uploads/2024/06/2-manipal-150x90.jpg)
Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ
![1-24-friday](https://www.udayavani.com/wp-content/uploads/2024/06/1-24-friday-3-150x90.jpg)
Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ
![Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್ ಹೈಕಮಾಂಡ್ ತರಾಟೆ](https://www.udayavani.com/wp-content/uploads/2024/06/28-3-150x90.jpg)
Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್ ಹೈಕಮಾಂಡ್ ತರಾಟೆ
![18](https://www.udayavani.com/wp-content/uploads/2024/06/18-6-150x90.jpg)
B. S. Yediyurappa: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್ವೈ ವಿರುದ್ಧ ಚಾರ್ಜ್ಶೀಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.