ಸುಳ್ಯ: ಅರಣ್ಯ ಅಭಿವೃದ್ಧಿ ನಿಗಮ ಮುಂಭಾಗ ಪ್ರತಿಭಟನೆ


Team Udayavani, Feb 2, 2019, 6:03 AM IST

february-10.jpg

ಸುಳ್ಯ: ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಕಾರ್ಮಿಕ ಸಂಘಗಳ ಸಮಿತಿ ಆಶ್ರಯದಲ್ಲಿ ಶುಕ್ರವಾರ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಸುಳ್ಯ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಕಾರ್ಮಿಕರಿಗೆ ದಿನಗೂಲಿ ಸಂಬಳವನ್ನು 702 ರೂ.ಗೆ ಹೆಚ್ಚಿಸಬೇಕು. ಸಾð್ಯಪ್‌ ರಬ್ಬರ್ಗೆ ಕೆ.ಜಿ.ಗೆ 10 ರೂ. ನಿಗದಿಪಡಿಸುವುದು, ಪ್ರತಿ ಬ್ಲಾಕ್‌ಗೆ ಗೊಬ್ಬರ ಹಾಕುವ ಕೆಲಸಕ್ಕೆ ಪ್ರತ್ಯೇಕ 5 ಮಾನವ ದಿನಗಳನ್ನು ವರ್ಷಕ್ಕೆ 1 ಬಾರಿ ಹಾಗೂ ಕಳೆ ಕೀಳುವ ಕೆಲಸಕ್ಕೆ ಪ್ರತ್ಯೇಕ 5 ಮಾನವ ದಿನಗಳನ್ನು ವರ್ಷಕ್ಕೆ 3 ಬಾರಿ ಪಾವತಿಸಬೇಕು. 16 ಕಾರ್ಖಾನೆ ಕಾರ್ಮಿಕರ ಅಕ್ರಮ ವರ್ಗಾವಣೆ ರದ್ದುಪಡಿಸಬೇಕು, ಮೇಸ್ತ್ರಿಗಳ ಬೇಡಿಕೆ ಕುರಿತು ಕರ್ನಾಟಕ ದಿನಗೂಲಿ ನೌಕರರ ಮಹಾ ಮಂಡಲದ ಜತೆ ಚರ್ಚಿಸಿ ವೇತನ ಶ್ರೇಣಿ ಸಹಿತ ಎಲ್ಲ ಬೇಡಿಕೆ ಇತ್ಯರ್ಥಪಡಿಸುವುದು, ಹತ್ತಾರು ವರ್ಷಗಳಿಂದ ದುಡಿಯುತ್ತಿರುವ ಹಂಗಾಮಿ ಕಾರ್ಮಿಕರನ್ನು ತತ್‌ಕ್ಷಣ ಖಾಯಂಗೊಳಿಸಿ ವೇತನ ಒಪ್ಪಂದದ ಸೌಲಭ್ಯ ನೀಡುವುದು, ಕಾರ್ಮಿಕರ ಗೈರುಹಾಜರಿಗೆ ಕಾನೂನು ಬಾಹಿರವಾಗಿ ದಿನದ ಇಳುವರಿಗೆ ಸಮನಾದ ಮೊತ್ತವನ್ನು ವೇತನದಿಂದ ಕಡಿತಗೊಳಿಸುವ ಪದ್ಧತಿ ಕೈಬಿಡುವುದು, ನಿಗಮದ ಸ್ಥಾಯೀ ಆದೇಶಕ್ಕೆ ವಿರುದ್ಧವಾಗಿ ಹಿಂದಿನ ಒಪ್ಪಂದದಲ್ಲಿ ಆಗಿರುವ ಶಿಸ್ತಿನ ಕ್ರಮ/ದಂಡ ವಿಧಿಸುವ ಷರತ್ತು ರದ್ದುಗೊಳಿಸುವುದು, ವೇತನ ಒಪ್ಪಂದದ ಅರಿಯರ್ಸ್‌ ಹಣವನ್ನು 2018 ಆ. 1ರಿಂದ ಶೇ. 100ರಂತೆ ನೀಡಬೇಕು, ಕಾರ್ಯ ನಿರ್ವಾಹಕ ನಿರ್ದೇಶಕಿ ಅವರ ವರ್ತನೆ ಬದಲಾವಣೆ ಆಗಬೇಕು ಎಂದು ಮುಖಂಡರು ಆಗ್ರಹಿಸಿದರು.

ಯುನೈಟೆಡ್‌ ಪ್ಲಾಂಟೇಷನ್‌ ವರ್ಕರ್ ಯೂನಿಯನ್‌, ಕರ್ನಾಟಕ ಪ್ಲಾಂಟೇಷನ್‌ ಅಂಡ್‌ ಇಂಡಸ್ಟ್ರಿಯಲ್‌ ವರ್ಕರ್ ಟ್ರೇಡ್‌ ಯೂನಿಯನ್‌, ಕರ್ನಾಟಕ ರಾಜ್ಯ ದಿನಗೂಲಿ ನೌಕರರ ಮಹಾ ಮಂಡಲ, ಜನಕಲ್‌ ಎಂಪ್ಲಾಯಿಸ್‌ ಯೂನಿಯನ್‌ ಸಂಘಟನೆಗಳು ಬೆಂಬಲ ಸೂಚಿಸಿದ್ದವು.

ಅಹವಾಲು ಸ್ವೀಕಾರ
ಪ್ರತಿಭಟನೆ ನಿರತರ ಬಳಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಸುಳ್ಯ ವಿಭಾಗೀಯ ವ್ಯವಸ್ಥಾಪಕ ಬೆಳಿಯಪ್ಪ, ನಾಗಪಟ್ಟಣ ಕೆಎಫ್‌ಡಿಸಿ ವ್ಯವಸ್ಥಾಪಕ ರಂಗನಾಥ ಅವರು ಭೇಟಿ ನೀಡಿ, ಅಹವಾಲು ಆಲಿಸಿದರು. ಬೇಡಿಕೆಯನ್ನು ಮೇಲಧಿಕಾರಿಗಳ ಗಮನಕ್ಕೆ ತರುವುದಾಗಿ ಅವರು ಭರವಸೆ ನೀಡಿದರು. ಅನಂತರವೂ ಪ್ರತಿಭಟನೆ ಮುಂದುವರಿಯಿತು.

ಕೆಪಿಸಿಸಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ ಪ್ರತಿಭಟನೆ ಬೆಂಬಲ ಸೂಚಿಸಿ ಮಾತನಾಡಿದರು. ಕಾರ್ಮಿಕ ಸಂಘಟನೆ ಮುಂದಾಳುಗಳಾದ ಕೃಷ್ಣನಾಥನ್‌, ಶಿವಕುಮಾರ್‌, ಕೆ. ಗುಣಶೇಖರನ್‌, ಅಳಗೈ, ಲೋಕನಾಥ, ಮುರಳಿ, ಪ್ರವೀಣ್‌ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.