![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 21, 2023, 9:42 PM IST
ಸುಳ್ಯ: ಮನೆಯ ಬಾಗಿಲು ಮುರಿದು ಒಳ ನುಗಿದ್ದ ಕಳ್ಳರು ಅಂದಾಜು 20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ಸುಳ್ಯ ನಗರದ ಜಟ್ಟಿಪಳ್ಳದಲ್ಲಿ ಶುಕ್ರವಾರ ರಾತ್ರಿ ಬೆಳಕಿಗೆ ಬಂದಿದೆ.
ಜಟ್ಟಿಪಳ್ಳ ಬೋರುಗುಡ್ಡೆ ನಿವಾಸಿ ಮೋಹನದಾಸ ಮುದ್ಯ ಎಂಬವರ ಮನೆಯಲ್ಲಿ ಕಳ್ಳತನ ಕೃತ್ಯ ನಡೆದಿದೆ. ಮೋಹನದಾಸ್ ದಂಪತಿ ಚೆನ್ನೈಗೆ ಹೋಗಿ ಹಾಸನದಲ್ಲಿದ್ದ ಮಗಳ ಮನೆಯಲ್ಲಿದ್ದ ವೇಳೆ ಕಳ್ಳತನ ನಡೆದಿದೆ. ಮನೆಯ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಬಟ್ಟೆಗಳನ್ನು ಜಾಲಾಡಿ ಚಿನ್ನಾಭರಣವನ್ನು ಕಳವು ಮಾಡಿದ್ದಾರೆ.
ಶುಕ್ರವಾರ ಸಂಜೆ ಅವರ ಮನೆಯ ಮಹಡಿಯಲ್ಲಿ ಬಾಡಿಗೆಗಿದ್ದ ವ್ಯಕ್ತಿಗೆ ಮನೆಯ ಬಾಗಿಲು ಒಡೆದಿರುವುದು ಗಮನಕ್ಕೆ ಬಂದಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ರಾತ್ರಿ ಮಂಗಳೂರಿನಿಂದ ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಆಗಮಿಸಿ ತಪಾಸಣೆ ನಡೆಸಲಾಗಿತ್ತು. ಆ ಬಳಿಕ ಮನೆಯವರು ಆಗಮಿಸಿದ್ದರು. ತಪಾಸಣೆ ವೇಳೆ ಉಂಗುರ, ಸರ, ನೆಕ್ಲೇಸ್ ಸಹಿತ ಸುಮಾರು 350 ಗ್ರಾಂ. ನಷ್ಟು ಚಿನ್ನಾಭರಣ ಕಳವಾಗಿರುವುದು ಬೆಳಕಿಗೆ ಬಂದಿದ್ದು, 20 ಲಕ್ಷ ರೂ. ಮೌಲ್ಯವೆಂದು ಅಂದಾಜಿಸಲಾಗಿದೆ.ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.