Sullia ತಾಲೂಕು ಆಸ್ಪತ್ರೆ: ಡಯಾಲಿಸಿಸ್‌ ಯಂತ್ರಗಳ ಹೆಚ್ಚಳ

ವಾರಕ್ಕೆ ಸರಾಸರಿ 80ರಷ್ಟು ಮಂದಿಗೆ ಬೇಕಾದ ವ್ಯವಸ್ಥೆ | ಪ್ರಸ್ತುತ ಮೂರು ಪಾಳಿಯಲ್ಲಿ ಸೇವೆ

Team Udayavani, Oct 9, 2024, 1:01 PM IST

2

ಸುಳ್ಯ ತಾಲೂಕು ಆಸ್ಪತ್ರೆಯ ಡಯಾಲಿಸಿಸ್‌ ಸೇವೆಯ ಕೇಂದ್ರ.

ಸುಳ್ಯ: ಖಾಸಗಿ ಆಸ್ಪತ್ರೆಯಲ್ಲಿ ದುಬಾರಿ ಎನಿಸಿರುವ ಡಯಾಲಿಸಿಸ್‌ ಸೇವೆ ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತವಾಗಿ ಲಭ್ಯವಾಗುತ್ತಿದ್ದು, ಪ್ರಸ್ತುತ ಸುಳ್ಯ ತಾ| ಆಸ್ಪತ್ರೆಗೆ ಹೆಚ್ಚುವರಿ ಡಯಾಲಿ ಸಿಸ್‌ ಯಂತ್ರ ಒದಗಿಸಲಾಗಿದೆ. ವಾರಕ್ಕೆ ಸರಾಸರಿ 80 ಮಂದಿ (ಪೇಶೆಂಟ್‌)ಗೆ ಸೇವೆ ನೀಡಬಹುದಾದ ಸಾಮರ್ಥ್ಯ ಹೊಂದಿದೆ.

ತಾಲೂಕು ಆಸ್ಪತ್ರೆಯಲ್ಲಿ 2018ರಲ್ಲಿ ಡಯಾಲಿಸಿಸ್‌ ಘಟಕ ಆರಂಭಗೊಂಡಿದೆ. ಆರಂಭದಲ್ಲಿ ಎರಡು ಡಯಾಲಿಸಿಸ್‌ ಮಿಷನ್‌ನಲ್ಲಿ ರೋಗಿಗಳಿಗೆ ಡಯಾಲಿಸಿಸ್‌ ಸೇವೆ ನೀಡಲಾಗುತ್ತಿತ್ತು. ಬಳಿಕದಲ್ಲಿ ಯಂತ್ರಕ್ಕೆ ಬೇಡಿಕೆ ಹೆಚ್ಚಾಗತೊಡಗಿತು. ಸರಕಾರದಿಂದ ವ್ಯವಸ್ಥೆ ಸಿಗದ ಸಂದರ್ಭ ದಲ್ಲಿ ಅಂದಿನ ಶಾಸಕ ಎಸ್‌.ಅಂಗಾರ ಅವರ ಮನವಿಯ ಮೇರೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ 4 ಡಯಾಲಿಸಿಸ್‌ ಯಂತ್ರಗಳನ್ನು ಹಾಗೂ ಪ್ರಣವ ಫೌಂಡೇಶನ್‌ ಬೆಂಗಳೂರು ಸಂಸ್ಥೆ 1 ಡಯಾಲಿಸಿಸ್‌ ಯಂತ್ರವನ್ನು ಕೊಡುಗೆಯಾಗಿ ನೀಡಿದ್ದರು. ಹೀಗೆ ಒಟ್ಟು 7 ಯಂತ್ರಗಳಲ್ಲಿ ಸೇವೆ ನೀಡಲಾಗುತ್ತಿತ್ತು. ಮಿಷನ್‌ ಕೈಕೊಟ್ಟ ಸಂದರ್ಭದಲ್ಲಿ ರೋಗಿಗಳು ಸಮಸ್ಯೆ ಅನುಭವಿಸುವ ಸ್ಥಿತಿ ಎದುರಾಗಿತ್ತು. ಖಾಸಗಿ ಆಸ್ಪತ್ರೆಗೆ ತೆರಳಿ ಡಯಾಲಿಸಿಸ್‌ ಮಾಡಬೇಕಾದ ಅನಿವಾರ್ಯತೆಯೂ ಬಂದಿತ್ತು.

ಏಜೆನ್ಸಿ ಬದಲು; ಹೊಸ ಯಂತ್ರ
ಸರಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಡಯಾಲಿಸಿಸ್‌ ಘಟಕಗಳು ಕಾರ್ಯಾಚರಿಸುತ್ತಿದೆ. ತಾಲೂಕು ಆಸ್ಪತ್ರೆ ಯಲ್ಲಿ ಇದುವರೆಗೆ ಇದ್ದ ಏಜೆನ್ಸಿಯ ಅವ  ಮುಗಿದಿದ್ದುದರಿಂದ ಸರಕಾರ ಟೆಂಡರ್‌ ಆಹ್ವಾನಿಸಿತ್ತು. ನೇಫ್ಲೋಪ್ಲಸ್‌ ಎಂಬ ಸಂಸ್ಥೆ ಗುತ್ತಿಗೆ ಪಡೆದುಕೊಂಡಿತ್ತು. ಈ ಹಿಂದೆ ಇದ್ದ ಸಂಸ್ಥೆಯವರು ತಮ್ಮ ಮಿಷನ್‌ಗಳನ್ನು ಕೊಂಡುಹೋಗಿದ್ದು, ಪ್ರಸ್ತುತ ಬಂದಿರುವ ಹೊಸ ಸಂಸ್ಥೆಯವರು ಇಲ್ಲಿನ ಬೇಡಿಕೆಯನ್ನು ಮನಗಂಡು ಹೆಚ್ಚುವರಿಯಾಗಿ ಯಂತ್ರಗಳನ್ನು ಕಲ್ಪಿಸಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಒಟ್ಟು 10 ಡಯಾಲಿಸಿಸ್‌ ಯಂತ್ರಗಳ ಮೂಲಕ ರೋಗಿಗಳಿಗೆ ಸೇವೆ ನೀಡಲಾಗುತ್ತಿದೆ. ಪ್ರಸ್ತುತ 3 ಪಾಳಿಯಲ್ಲಿ ಸುಮಾರು 61 ಮಂದಿ ಡಯಾಲಿಸಿಸ್‌ ಸೇವೆ ಪಡೆದುಕೊಳ್ಳುತ್ತಿದ್ದಾರೆ..

80ರಷ್ಟು ರೋಗಿಗಳಿಗೆ ಸೇವೆ ಸಾಮರ್ಥ್ಯ
ಇದುವರೆಗೆ 7 ಡಯಾಲಿಸಿಸ್‌ ಯಂತ್ರಗಳು ಇದ್ದವು. ಇದೀಗ 3 ಹೆಚ್ಚುವರಿ ಯಂತ್ರಗಳು ಬಂದಿದ್ದು, 80ರಷ್ಟು ರೋಗಿಗಳಿಗೆ ಸೇವೆ ನೀಡುವ ಸಾಮರ್ಥ್ಯ ಇಲ್ಲಿದೆ.
-ಡಾ| ಕರುಣಾಕರ ಕೆ.ವಿ.,ಸುಳ್ಯ ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ

ನಾಲ್ಕು ಪಾಳಿ ಸಾಮರ್ಥ್ಯ
ಈಗ ನಮ್ಮಲ್ಲಿ 61 ರೋಗಿಗಳಿಗೆ ಮೂರು ಪಾಳಿಯಲ್ಲಿ ಸೇವೆ ನೀಡಲಾಗುತ್ತಿದೆ. ರೋಗಿಗಳ ಸಂಖ್ಯೆ ಹೆಚ್ಚಾದಲ್ಲಿ ನಾಲ್ಕು ಪಾಳಿಯಲ್ಲಿ ಸೇವೆ ನೀಡುವ ಸಾಮರ್ಥ್ಯ ಇಲ್ಲಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳಬಹುದು.
-ಪ್ರಸಾದ್‌,ಟೆಕ್ನೀಷಿಯನ್‌.

ಟಾಪ್ ನ್ಯೂಸ್

PM Modi

Congress ಬೇಜವಾಬ್ದಾರಿ ಪಕ್ಷ, ದ್ವೇಷ ಹರಡುವ ಕಾರ್ಖಾನೆ : ಪ್ರಧಾನಿ ಮೋದಿ ಕಿಡಿ

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

arrest-lady

Hubli; ವ್ಯಾಪಾರಿಯ ಬೆತ್ತ*ಲೆ ವಿಡಿಯೋ: ಮಹಿಳೆ ಸೇರಿ ಐವರ ಬಂಧನ

Nayanthara: ನಯನತಾರ ಮಕ್ಕಳ ದಾದಿಯರಿಗೂ ನಾವೇ ಸಂಬಳ ಕೊಡಬೇಕಾ..? ಖ್ಯಾತ ನಿರ್ಮಾಪಕ ಗರಂ

Nayanthara: ನಯನತಾರ ಮಕ್ಕಳ ದಾದಿಯರಿಗೂ ನಾವೇ ಸಂಬಳ ಕೊಡಬೇಕಾ..? ಖ್ಯಾತ ನಿರ್ಮಾಪಕ ಗರಂ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

6-sathish

Chikkamagaluru: ವಿರೋಧ ಪಕ್ಷದವರು ಹೇಳಿದ ತಕ್ಷಣ ಸರ್ಕಾರ ಬೀಳುವುದಿಲ್ಲ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Kota: ಹೂವಿನ ಕೋಲಿಗೆ ಮಕ್ಕಳ ರಾಯಭಾರ!

1(1)

Bantwal: ಈ ಮನೆಯಲ್ಲಿವೆ ಸಾವಿರಾರು ಗೊಂಬೆಗಳು!

Dasara: ಅತಿಥಿ ಶಿಕ್ಷಕರಿಗಿಲ್ಲ ಸಂಭ್ರಮ; “ನಿಧಿ’ ಬಿಡುಗಡೆಯಾಗಿದ್ದರೂ ಸಿಗದ ಸಂಬಳ

Dasara: ಅತಿಥಿ ಶಿಕ್ಷಕರಿಗಿಲ್ಲ ಸಂಭ್ರಮ; “ನಿಧಿ’ ಬಿಡುಗಡೆಯಾಗಿದ್ದರೂ ಸಿಗದ ಸಂಬಳ

Kukke Shri Subrahmanya Temple: ಅನ್ನ ಪ್ರಸಾದಕ್ಕೆ ವೈವಿಧ್ಯಮಯ ಪಾಯಸ

Kukke Shri Subrahmanya Temple: ಅನ್ನ ಪ್ರಸಾದಕ್ಕೆ ವೈವಿಧ್ಯಮಯ ಪಾಯಸ

Subrahmanya: ಕುಮಾರ ಪರ್ವತ ಚಾರಣ ಆರಂಭಿಸಿದ ಚಾರಣಿಗರು

Subrahmanya: ಕುಮಾರ ಪರ್ವತ ಚಾರಣ ಆರಂಭಿಸಿದ ಚಾರಣಿಗರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

PM Modi

Congress ಬೇಜವಾಬ್ದಾರಿ ಪಕ್ಷ, ದ್ವೇಷ ಹರಡುವ ಕಾರ್ಖಾನೆ : ಪ್ರಧಾನಿ ಮೋದಿ ಕಿಡಿ

9-gadag

Gadag: 14 ರಂದು ಲಿಂ. ಡಾ. ತೋಂಟದ ಸಿದ್ಧಲಿಂಗ ಶ್ರೀಗಳ 6ನೇ ಪುಣ್ಯಸ್ಮರಣೆ

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

8-kalburgi

Kalaburagi: ಕೀಟನಾಶಕ ಸಿಂಪಡಣೆ ಮಾಡುವಾಗ ನಿರ್ಲಕ್ಷ್ಯ ವಹಿಸಿದರೆ ಕಣ್ಣಿಗೆ ಅಪಾಯ:ಡಾ.ರಾಜಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.