ಕೆಮ್ಮಾರ ಸೇತುವೆಯ ತಡೆಗೋಡೆ ಕುಸಿತ 


Team Udayavani, Jun 21, 2018, 2:47 PM IST

21-june-13.jpg

ಉಪ್ಪಿನಂಗಡಿ: ಇಲ್ಲಿನ ಕೆಮ್ಮಾರ ಸೇತುವೆಯ ತಡೆಗೋಡೆ ಕುಸಿಯಲು ಆರಂಭವಾಗಿದ್ದು, ಇದು ಇನ್ನಷ್ಟು ಮುಂದುವರಿದರೆ ಹೆದ್ದಾರಿ ಹಾಗೂ ಸೇತುವೆ ಕುಸಿತಕ್ಕೊಳಗಾಗುವ ಭೀತಿ ಉಂಟಾಗಿದೆ.

ಉಪ್ಪಿನಂಗಡಿ-ಮರ್ಧಾಳ ರಾಜ್ಯ ಹೆದ್ದಾರಿಯಲ್ಲಿ ಕೆಮ್ಮಾರ ಬರುತ್ತಿದ್ದು, ಇಲ್ಲಿ ಹರಿಯುವ ಹೊಳೆಗೆ ಸೇತುವೆಯನ್ನು ಕಟ್ಟಿ ಮರ್ದಾಳಕ್ಕೆ ಸಂಪರ್ಕ ಕಲ್ಪಿಸಲಾಗಿದೆ. ಸೇತುವೆಯ ಪಾರ್ಶ್ವಗಳಲ್ಲಿ ಕಲ್ಲಿನ ತಡೆಗೋಡೆಯನ್ನು ಕಟ್ಟಲಾಗಿದೆ. ಆದರೆ ಈ ಬಾರಿಯ ಮಳೆಗಾಲದಲ್ಲಿ ರಭಸದಿಂದ ಹರಿಯುವ ನೀರಿನ ಹೊಡೆತಕ್ಕೆ ಸಿಲುಕಿ ಸೇತುವೆಯ ಒಂದು ಪಾರ್ಶ್ವದ ತಡೆಗೋಡೆಯ ಕಲ್ಲುಗಳು ಕುಸಿಯಲು ಆರಂಭಿಸಿವೆ. ಸೇತುವೆಯ ಇನ್ನೊಂದು ಪಾರ್ಶ್ವದಲ್ಲಿಯೂ ಹಾಕಿದ ಮಣ್ಣು ಕುಸಿಯಲು ಅರಂಭವಾಗಿದ್ದು, ಇದರ ಬಳಿಯಲ್ಲಿಯೇ ಇರುವ ಮಸೀದಿ ಹಾಗೂ ರಾಜ್ಯ ಹೆದ್ದಾರಿಯ ಸಂಪರ್ಕ ರಸ್ತೆಗೆ ಅಪಾಯವೊದಗುವ ಸಂಭವವಿದೆ.

ಕೆಎಸ್ಸಾರ್ಟಿಸಿ ಬಸ್‌ಗಳು, ಘನ ವಾಹನಗಳು ಸಹಿತ ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಈ ಮಾರ್ಗದಲ್ಲಿ ಓಡಾಡುತ್ತವೆ. ಈಗಾಗಲೇ ಇಲ್ಲಿ ಮಣ್ಣು ಕುಸಿದು ರಸ್ತೆಯ ಅಡಿಭಾಗವು ರಂಧ್ರ ಕೊರೆದಂತಾಗಿದ್ದು, ರಭಸದಿಂದ ಹರಿದು ಬರುವ ನೀರಿನ ಹೊಡೆತಕ್ಕೆ ಸಿಲುಕಿ ಇನ್ನಷ್ಟು ಕೊರೆತವುಂಟಾಗುವ ಸಾಧ್ಯತೆಯಿದೆ. ಇದರಿಂದ ರಸ್ತೆಯೂ ಕುಸಿದು ಬೀಳುವ ಅಪಾಯ ಎದುರಾಗಿದೆ.

ಇನ್ನೊಂದೆಡೆ ಸೇತುವೆಯ ಪಿಲ್ಲರ್‌ ಬುಡದಲ್ಲಿಯೇ ತಡೆಗೋಡೆ ಕುಸಿದು ಮಣ್ಣಿನ ಕೊರೆತವುಂಟಾಗಿದ್ದು, ಇಲ್ಲಿ ಮಣ್ಣಿನ ಕೊರೆತ ಜಾಸ್ತಿ ಉಂಟಾದರೆ ಸೇತುವೆಗೂ ಕಂಟಕ ಉಂಟಾಗುವ ಸಾಧ್ಯತೆ ಹೆಚ್ಚು. 

ಅಪಾಯ 
ಈಗಾಗಲೇ ಎರಡು ಕಡೆ ಕುಸಿತವುಂಟಾಗಿದ್ದು, ಇದು ಇನ್ನಷ್ಟು ಹೆಚ್ಚಾಗುವುದರಿಂದ ಸಂಪೂರ್ಣ ತಡೆಗೋಡೆಯೇ
ಕುಸಿತಕ್ಕೊಳಗಾಗುವ ಸಾಧ್ಯತೆ ಇದೆ. ಅಲ್ಲದೆ, ಸೇತುವೆಯ ಇನ್ನೊಂದು ಬದಿ ರಸ್ತೆಯಂಚಿನಿಂದ ಹಾಕಿದ ಮಣ್ಣು ಕೂಡಾ
ಕುಸಿತಕ್ಕೊಳಗಾಗಿದ್ದು, ಇದು ಕುಸಿದರೆ ವಾಹನ ಸವಾರರಿಗೆ ಅಪಾಯವುಂಟಾಗುವ ಸಾಧ್ಯತೆ ಹೆಚ್ಚಿದೆ. 

ಗಂಭೀರ ಸಮಸ್ಯೆ
ಕೆಮ್ಮಾರದಲ್ಲಿ ಸೇತುವೆ ತಡೆಗೋಡೆ ಕುಸಿತ ಕ್ಕೊಳಗಾಗಿರುವುದು ನಮ್ಮ ಗಮನಕ್ಕೆ ಬಂದಿಲ್ಲ. ಇದೊಂದು ಗಂಭೀರವಾದ ಸಮಸ್ಯೆ. ಆದ್ದರಿಂದ ನಾಳೆಯೇ ಅದನ್ನು ಪರಿಶೀಲಿಸಿ, ಮುಂದಿನ ಕ್ರಮದ ಬಗ್ಗೆ ಚಿಂತಿಸಲಾಗುವುದು.
– ಗೋಕುಲದಾಸ್‌
ಲೋಕೋಪಯೋಗಿ ಇಲಾಖೆ
ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರು

ಟಾಪ್ ನ್ಯೂಸ್

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.