ಅರಮನೆಗಾಯ ಸೇತುವೆ ಬೇಡಿಕೆಗೆ ಇನ್ನೂ ಸಿಕ್ಕಿಲ್ಲ ಸ್ಪಂದನೆ

ಅಡಿಕೆ ಪಾಲಕ್ಕೆ ಮುಕ್ತಿ ಇಲ್ಲ ; ಮಳೆಗಾಲದಲ್ಲಿ ತಪ್ಪಲಿಲ್ಲ ಆಪತ್ತು

Team Udayavani, Aug 15, 2020, 4:18 AM IST

ಅರಮನೆಗಾಯ ಸೇತುವೆ ಬೇಡಿಕೆಗೆ ಇನ್ನೂ ಸಿಕ್ಕಿಲ್ಲ ಸ್ಪಂದನೆ

ಅರಮನೆಗಾಯ ತೂಗುಸೇತುವೆ.

ಸುಳ್ಯ: ಕಳೆದ 25 ವರ್ಷ ಗಳಿಗೂ ಹೆಚ್ಚು ಕಾಲದಿಂದ ಜೀವ ಕೈಯಲ್ಲಿ ಹಿಡಿದುಕೊಂಡು ಅಡಿಕೆ ಪಾಲ ದಾಟುತ್ತಿದ್ದರೂ ಸೇತುವೆ ನಿರ್ಮಿಸಬೇಕೆಂಬ ಬೇಡಿಕೆಗೆ ಸ್ಪಂದಿಸುವ ಪ್ರಯತ್ನವೇ ಆಗಿಲ್ಲ. ಪರಿಣಾಮ ಈ ಮಳೆಗಾಲದಲ್ಲಿಯೂ ಪಾಲ ದಾಟಿಯೇ ಊರಿಂದ ಊರಿಗೆ ಸಾಗಬೇಕಾದ ದಯನೀಯ ಸ್ಥಿತಿ ಇಲ್ಲಿನದು.

ಅರಂತೋಡು – ಪಿಂಡಿಮನೆ – ಮಿತ್ತಡ್ಕ ರಸ್ತೆಯ ಅರಮನೆಗಾಯ (ಆಡು ಮಾತಿನಲ್ಲಿ ಅರಮನೆಗಯ) ಬಳಿ ಬಲಾ°ಡ್‌ ಹೊಳೆಗೆ ಸೇತುವೆ ಇಲ್ಲದೆ 100ಕ್ಕೂ ಹೆಚ್ಚು ಕುಟುಂಬಗಳು 6 ಕಿ. ಮೀ. ದೂರದ ರಸ್ತೆ ಸನಿಹದಲ್ಲಿದ್ದರೂ ಮಳೆಗಾಲದಲ್ಲಿ 15 ಕಿ.ಮೀ. ಸುತ್ತಾಡಿ ಮನೆ, ಪೇಟೆ ಸೇರುತ್ತಿದ್ದಾರೆ.

ತೂಗು ಸೇತುವೆಗೆ 20 ವರ್ಷ
ಈ ತೂಗು ಸೇತುವೆ ನಿರ್ಮಾಣಗೊಂಡು 20 ವರ್ಷಗಳು ಕಳೆದಿವೆ. ಅರಂತೋಡು ಗ್ರಾ.ಪಂ. ವತಿಯಿಂದ ಅಡಿಕೆ ಮರ ಹಾಸಿದ, ಕಬ್ಬಿಣದ ರಾಡ್‌ ಅಳವಡಿಸಿ ಹೊಳೆ ದಾಟಲು ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿತ್ತು. ಬೇಸಗೆಯಲ್ಲಿ ಹೊಳೆಯೇ ರಸ್ತೆಯಾದರೆ, ಮಳೆಗಾಲದಲ್ಲಿ ತೂಗು ಸೇತುವೆಯೇ ಆಧಾರ. ಪ್ರತಿ ಬಾರಿ ಅಡಿಕೆ ಪಾಲ ಗೆದ್ದಲು ಹಿಡಿಯುತ್ತಿದೆ. ಸ್ಥಳೀಯರೇ ಸೇರಿ ಮತ್ತೆ ಜೋಡಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಅರಂತೋಡು ಗ್ರಾ.ಪಂ. ಸಹಕಾರ ಪಡೆದು ದುರಸ್ತಿ ಕಾರ್ಯ ನಡೆಸಲಾಗಿದೆ.

ಸುತ್ತಾಟದ ಗೋಳು
ಪಿಂಡಿಮನೆ, ಮಾಟೆಕಾಯ, ಅಡ್ತಲೆ, ಬಳ್ಳಕಾನ, ಕುಧುRಳಿ, ಮಿತ್ತಡ್ಕ, ಚಿಮಾಡು ಮೊದಲಾದೆಡೆಯ 100ಕ್ಕೂ ಹೆಚ್ಚು ಮನೆಗಳಿಗೆ ತೂಗು ಸೇತುವೆ ಸನಿಹದ ದಾರಿ. ಮಿತ್ತಡ್ಕ ಎಸ್‌ಸಿ ಕಾಲನಿ, ತೇರ್ಥಮಜಲಿನಲ್ಲಿ ಪ್ರೌಢಶಾಲೆ, ಮಿತ್ತಡ್ಕ, ಅಡ್ತಲೆಯಲ್ಲಿ ಪ್ರಾಥಮಿಕ ಶಾಲೆ ಇವೆ. ಮಳೆಗಾಲದಲ್ಲಿ ವಾಹನ ಮೂಲಕ ಸಂಚರಿಸಬೇಕಾದರೆ ಗೋಳಿಯಡ್ಕ- ಮಿತ್ತಡ್ಕ 14 ಕಿ. ಮೀ. ಸುತ್ತು ಬಳಸಿ ಹೋಗಬೇಕಿದೆ ಎನ್ನುತ್ತಾರೆ ಸ್ಥಳೀಯ ನಿವಾಸಿಗಳು.

ಸಂಚಾರದ ಸಂಕಟ
ಅರಂತೋಡು ಗ್ರಾ.ಪಂ. ವ್ಯಾಪ್ತಿಗೆ ಸೇರಿದ ಕುಟುಂಬಗಳು ಮಿತ್ತಡ್ಕ ಪ್ರದೇಶದಲ್ಲಿವೆ. ಈ ಜನರು ಗ್ರಾ.ಪಂ., ಪಡಿತರ ಸೌಲಭ್ಯಕ್ಕೆ ಅರಂತೋಡಿಗೆ ಬರಬೇಕು. ಮರ್ಕಂಜ ವ್ಯಾಪ್ತಿಗೆ ಸೇರಿದ ಮಿತ್ತಡ್ಕದಲ್ಲಿ ಸೊಸೈಟಿ ಇದೆ. ಅಲ್ಲಿಗೆ ಚಿಮಾಡು ಪ್ರದೇಶದ ನಿವಾಸಿಗಳು ಹೊಳೆ ದಾಟಿ ಹೋಗಬೇಕು. ಇಲ್ಲದಿದ್ದರೆ, ಸುತ್ತಾಟದ ರಸ್ತೆ ಕ್ರಮಿಸಬೇಕು. ಇಲ್ಲಿ ಸಾಮಗ್ರಿ ಪಡೆದುಕೊಳ್ಳಲು ವ್ಯಯಿಸುವ ವೆಚ್ಚಕ್ಕಿಂತ ಸಂಚಾರಕ್ಕೆ ಖರ್ಚು ಮಾಡಬೇಕು.

ಸುಸಜ್ಜಿತ ಸೇತುವೆ ನಿರ್ಮಿಸಲು ಮನವಿ
ಅರಮನೆಗಾಯದಲ್ಲಿ ಸುಸಜ್ಜಿತ ಸೇತುವೆ ನಿರ್ಮಿಸಿ ಎಂದು 25 ವರ್ಷಗಳಷ್ಟು ಹಿಂದಿನಿಂದ ಬೇಡಿಕೆ ಸಲ್ಲಿಸಲಾಗಿದೆ. ಇದರಿಂದ ಮರ್ಕಂಜ, ಮಿತ್ತಡ್ಕ, ದೊಡ್ಡತೋಟ ಸಂಪರ್ಕ ಸಾಧ್ಯವಾಗುತ್ತದೆ. ಐದು ವರ್ಷಗಳ ಹಿಂದೆ ಜಿ.ಪಂ. ಎಂಜಿನಿಯರ್‌ ಸ್ಥಳ ಪರಿಶೀಲಿಸಿ ಹೊಸ ಸೇತುವೆ ನಿರ್ಮಾಣದ ಭರವಸೆ ನೀಡಿದ್ದರು. ಬಳಿಕ ಅವರ ಪತ್ತೆಯಿಲ್ಲ ಎನ್ನುತ್ತಾರೆ ಸ್ಥಳೀಯರು. 2011ರಲ್ಲಿ ಶಾಶ್ವತ ಸೇತುವೆ ನಿರ್ಮಿಸಿ ಎಂದು ಅರಂತೋಡು ಗ್ರಾ.ಪಂ. ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಶಾಸಕರಿಗೆ ಮನವಿ ಸಲ್ಲಿಸಲಾಗಿದೆ. ಅದಕ್ಕೂ ಸ್ಪಂದನೆ ಸಿಕ್ಕಿಲ್ಲ.

ನೀರಿನಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ
ಸೇತುವೆ ಇಲ್ಲದ ಕಾರಣ ತೂಗು ಸೇತುವೆಯಲ್ಲಿ ಸಾಗಬೇಕು. 6 ಕಿ.ಮೀ. ರಸ್ತೆ ಇದ್ದರೂ ಸೇತುವೆ ಇಲ್ಲದೆ 15 ಕಿ.ಮೀ ಸುತ್ತಾಟ ನಡೆಸಬೇಕು. ತೂಗು ಸೇತುವೆ ಸರಿ ಇಲ್ಲದ ಕಾರಣ ಕೆಲವು ದಿನಗಳ ಹಿಂದೆ ಹೊಳೆ ದಾಟಲು ತೆರಳಿದ್ದ ವ್ಯಕ್ತಿ ನೂರು ಮೀಟರ್‌ ಕೊಚ್ಚಿಕೊಂಡು ಹೋಗಿ ಪೊದೆ ಹಿಡಿದು ರಕ್ಷಣೆಗೆ ಮೊರೆ ಇಟ್ಟ ಸಂದರ್ಭ ಸ್ಥಳೀಯರು ರಕ್ಷಿಸಿದ್ದರು. ಅದಾದ ಬಳಿಕ ಗ್ರಾ.ಪಂ. ಸಹಾಯದಿಂದ ಊರವರು ಸೇರಿ ತೂಗು ಸೇತುವೆ ದುರಸ್ತಿ ಮಾಡಿ ತಾತ್ಕಾಲಿಕ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
– ತೇಜಕುಮಾರ್‌ ಎಂ.ಕೆ. ಅರಮನೆಗಾಯ ನಿವಾಸಿ

ಅನುದಾನ ಲಭ್ಯವಿಲ್ಲ
ಅರೆಮನೆಗಾಯ ತೂಗು ಸೇತುವೆಗೆ ಬದಲಿಯಾಗಿ ಹೊಸ ಸೇತುವೆ ನಿರ್ಮಾಣಕ್ಕೆ ಜಿಲ್ಲಾ ಪಂಚಾಯತ್‌ ಇಲಾಖೆ ವ್ಯಾಪ್ತಿಯಲ್ಲಿ ಅನುದಾನ ಮಂಜೂರಾತಿ ಆಗಿಲ್ಲ. ಈ ಹಿಂದೆ ಸಣ್ಣ ನೀರಾವರಿ ಇಲಾಖೆ ಮೂಲಕ ಅಲ್ಲಿ ವೆಂಟೆಡ್‌ ಡ್ಯಾಂ ಸಹಿತ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
-ಹನುಮಂತರಾಯಪ್ಪ ಜಿಲ್ಲಾ ಪಂಚಾಯತ್‌ ಎಂಜಿನಿಯರ್‌, ಸುಳ್ಯ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.