ಕಂಟೈನರ್ ಲಾರಿ ಮಗುಚಿ ಬಿದ್ದು ಕಾರು ಅಪ್ಪಚ್ಚಿ: ಐವರನ್ನು ಪಾರು ಮಾಡಿದ “ವಾಂತಿ ಸಮಸ್ಯೆ’
Team Udayavani, Aug 11, 2024, 6:55 AM IST
ಉಪ್ಪಿನಂಗಡಿ: ಪ್ರಯಾಣದ ಮಧ್ಯೆ ವಾಂತಿ ಮಾಡುವುದೆಂದರೆ ದೊಡ್ಡ ಕಿರಿಕಿರಿ. ಆದರೆ ಅದೇ ವಾಂತಿಯು ಇಲ್ಲಿ ಐವರ ಜೀವ ಉಳಿಸಿದೆ!
ಕಂಟೈನರ್ ಲಾರಿಯೊಂದು ಶನಿವಾರ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಬರ್ಚಿನಹಳ್ಳದಲ್ಲಿ ದಾವಣಗೆರೆ ಮೂಲದವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಆದರೆ ಈ ಹೊತ್ತಿನಲ್ಲಿ ಕಾರಿನಲ್ಲಿ ಯಾರೂ ಇರಲಿಲ್ಲ. ಅದರಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ವಾಂತಿ ಬಂದ ಕಾರಣ ಎಲ್ಲರೂ ಕೆಳಗಿಳಿದಿದ್ದರು. ಆದ್ದರಿಂದಲೇ ಇವರೆಲ್ಲರೂ ಜೀವ ಉಳಿಸಿಕೊಂಡರು.
ದಾವಣಗೆರೆಯ ನಿವಾಸಿಗರಾದ ಗಣೇಶ, ಶಿವು, ಕಾವ್ಯಾ, ದಂಡ್ಯಮ್ಮ ಅವರು ಚಾಲಕ ಅಬ್ದುಲ್ ರಹಿಮಾನ್ ಮುಲ್ಲಾ ಅವರೊಂದಿಗೆ ಶುಕ್ರವಾರ ಧರ್ಮಸ್ಥಳ ಕ್ಷೇತ್ರಕ್ಕೆ ಬಂದವರು ಶನಿವಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಸಂದರ್ಶನ ಮಾಡಿ ಊರಿಗೆ ಹಿಂದಿರುಗುವ ವೇಳೆ 11.30ಕ್ಕೆ ಬರ್ಚಿನಹಳ್ಳದಲ್ಲಿ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಕಾವ್ಯಾ ಎಂಬವರಿಗೆ ವಾಂತಿ ಬರುತ್ತಿದೆ ಎಂದು ತಿಳಿಸಿದ ಕಾರಣಕ್ಕೆ ಹೆದ್ದಾರಿ ಬದಿಯಲ್ಲಿ ಕಾರನ್ನು ನಿಲ್ಲಿಸಿ ಕಾವ್ಯಾಳನ್ನು ಉಪಚರಿಸಲು ಎಲ್ಲರೂ ಇಳಿದಿದ್ದರು. ಚಾಲಕ ಮೂತ್ರ ವಿಸರ್ಜನೆಗೆ ಹೋಗಿದ್ದರು. ಈ ವೇಳೆ ಎಲ್ಲರ ಕಣ್ಣೆದುರೇ ಅವರ ಕಾರಿನ ಮೇಲೆ ಕಂಟೈನರ್ ಲಾರಿ ಮಗುಚಿ ಬಿದ್ದು ಕಾರು ಅಪ್ಪಚ್ಚಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.