ಚೆಂಡೆತಡ್ಕ ಚಾರಿತ್ರಿಕ ಕಳೆಂಜನ ಗುಂಡಿಗೂ ತಟ್ಟಿದ ಬರ


Team Udayavani, May 14, 2019, 5:07 PM IST

sudi-2

ಮಾಧವ ನಾಯಕ್‌ ಕೆ.

ಪಾಣಾಜೆ : ಕೇರಳ ಕರ್ನಾಟಕ ಗಡಿ ಭಾಗದ ಆರ್ಲಪದವು ಸನಿಹದ ರಕ್ಷಿತಾರಣ್ಯ ವಲಯದ ಚೆಂಡೆತ್ತಡ್ಕ ಹಲವು ಐತಿಹ್ಯಗಳನ್ನು ಮಡಿಲಲ್ಲಿ ಇಟ್ಟುಕೊಂಡ ಪ್ರದೇಶ. ಸದಾ ನೀರಿನ ಸೆಲೆ ಇರುವ ಇಲ್ಲಿನ ಚಾರಿತ್ರಿಕ ಕಳೆಂಜನ ಗುಂಡಿಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ನೀರು ಬತ್ತಿದೆ!

12 ವರ್ಷಕ್ಕೊಮ್ಮೆ ಲಕ್ಷಾಂತರ ಭಕ್ತರ ಸಮಾಗಮದೊಂದಿಗೆ ನಡೆಯುವ ಐತಿಹಾಸಿಕ ಜಾಂಬ್ರಿ ಗುಹಾ ಪ್ರವೇಶದ ಸನಿಹದಲ್ಲಿ ಕಳೆಂಜನ ಗುಂಡಿ ಇದೆ. ಮುಳಿಹುಲ್ಲು ಆವರಿಸಿರುವ ಇಲ್ಲಿ ಜಾನುವಾರು ಮೇವಿಗೆಂದು ಬರುತ್ತಿದ್ದವರ ಬಾಯಾರಿಕೆ ತಣಿಸಲು ಈ ಹೊಂಡ ಆಶ್ರಯಿಸಿದ್ದರು. ಕಾಡು ಪ್ರಾಣಿ, ಜಾನುವಾರುವಿನ ದಾಹವನ್ನೂ ನೀಗಿಸುತ್ತಿತ್ತು. ಪ್ರತಿ ವರ್ಷ ಮಳೆ ಸುರಿದು ಜಾಂಬ್ರಿ ಕೆರೆ ತುಂಬಿ ಕಳೆಂಜನ ಗುಂಡಿ ಭರ್ತಿ ಆಗುತಿತ್ತು. ವರ್ಷವಿಡಿ ನೀರಿನ ಒರತೆ ತುಂಬಿ ಜಲಚರಗಳ ದಾಹ ತಣಿಸುತ್ತಿತ್ತು.

ಕಳೆಂಜನ ಗುಂಡಿಯ ಐತಿಹ್ಯ

ಕಳೆಂಜನ ಗುಂಡಿಗೆ ಒಂದು ಇತಿಹಾಸ ಇದೆ. ತುಳುನಾಡಿನ ಕರ್ಕಾಟಕ ಮಾಸ ಮನೆಗಳಿಗೆ ತೆರಳಿ ಕಷ್ಟಗಳನ್ನು ಕಳೆಯುವ ಆಟಿ ಕಳೆಂಜ ದಾನ ಧರ್ಮಗಳನ್ನು ಪಡೆಯುವ ತಿಂಗಳು. ಆದರೆ ಆಟಿ ಕಳೆಂಜನೋರ್ವ ಆಟಿ ತಿಂಗಳು ಕಳೆದು ಸಿಂಹ ಸಂಕ್ರಾಂತಿ ಬಂದರೂ ಯಾತ್ರೆ ಮುಂದುವರಿಸುತ್ತಾನೆ. ಸಿಂಹ ಮಾಸದಲ್ಲಿ ಧರ್ಮ ಬೇಡುವುದು ನಿಷಿದ್ಧವಾದರೂ ಕಟ್ಟಳೆಯನ್ನು ಮೀರಿ ಸಿಂಹ ಮಾಸದ ಮೊದಲ ದಿನ ಚೆಂಡೆತ್ತಡ್ಕ ಜಾಂಬ್ರಿ ಗುಹೆ ಸಮೀಪ ಬಂದಾಗ ಅದೃಶ್ಯನಾಗುತ್ತಾನೆ. ಈ ಪ್ರದೇಶ ಕಳೆಂಜನ ಗುಂಡಿ ಎಂದು ಜನಜನಿತವಾಗಿದೆ ಎನ್ನುತ್ತದೆ ಇತಿಹಾಸ. ಇದೇ ಹೊಂಡ ಹತ್ತಿರ ಕಳೆಂಜ ತನ್ನ ಒಲಿಯ ಕೊಡೆಯನ್ನು ಊರಿದ ಸ್ಥಳವೆಂದು ಹೇಳಲಾಗುವ ಚಿಕ್ಕ ರಂಧ್ರವಿದೆ.

ಊರಲ್ಲೂ ನೀರಿಗೆ ಬರ

ಚೆಂಡೆತ್ತಡ್ಕ ಸನಿಹದ ಪುತ್ತೂರು ತಾಲೂಕಿಗೆ ಸೇರಿರುವ ಗಿಳಿಯಾಲು ಪರಿಸರದಲ್ಲಿಯು ನೀರಿನ ಸಮಸ್ಯೆ ಉಂಟಾಗಿದೆ. ಕೃಷಿ ತೋಟಕ್ಕೆ ನೀರಿಲ್ಲದೆ ಜನರು ಸಮಸ್ಯೆಗೆ ಒಳಗಾಗಿದ್ದಾರೆ. ಪರಿಸ್ಥಿತಿ ಈ ತೆರನಾಗಿ ಮುಂದುವರಿದರೆ ಕುಡಿಯುವ ನೀರಿಗೂ ಬರ ಬಂದೊಗುವ ಸಾಧ್ಯತೆ ಇದೆ ಅನ್ನುತ್ತಾರೆ ಸ್ಥಳೀಯರು.

ಎರಡು ವರ್ಷ ಹಿಂದೆ ನಡೆದ ಜಾಂಬ್ರಿ ಮಹೋತ್ಸವ ಸಂದರ್ಭ ಕಳೆಂಜನ ಗುಂಡಿ ನೀರಿನಿಂದ ತುಂಬಿತ್ತು. ಇತಿಹಾಸದಲ್ಲಿ ಪ್ರಥಮ ಬಾರಿ ಎಂಬಂತೆ ಬತ್ತಿರುವುದು ಪ್ರಕೃತಿ ನೀಡುವ ಬರಗಾಲದ ಸೂಚನೆ. ಎಲ್ಲೆಂದರಲ್ಲಿ ಕೊಳವೆ ಬಾವಿ ನಿರ್ಮಾಣ ಕಳೆಂಜನ ಗುಂಡಿ ಒರತೆ ನಿಲ್ಲಲು ಕಾರಣವಾಗಿರಬಹುದು ಅನ್ನುತ್ತಾರೆ ಸ್ಥಳೀಯ ನಿವಾಸಿಗಳು.

ಚೆಂಡೆತಡ್ಕ ಚಾರಿತ್ರಿಕ ಕಳೆಂಜನ ಗುಂಡಿಗೂ ತಟ್ಟಿದ ಬರ!

ಜಾಂಬ್ರಿ ಗುಹಾ ಪ್ರವೇಶ ಸಮೀಪ ಇತಿಹಾಸದಲ್ಲೇ ಮೊದಲ ಸಲ ಬತ್ತಿದೆ ನೀರು ನೀರಿಲ್ಲದೆ ಬತ್ತಿದೆಬೇಸಗೆಯಲ್ಲಿಯೂ ಈ ಹೊಂಡದಲ್ಲಿ ನೀರಿರುತ್ತಿತ್ತು. ಕೈಯಲ್ಲೇ ತೆಗೆದು ಕುಡಿಯಲು ಸಾಧ್ಯವಿರು ವಷ್ಟರ ಮಟ್ಟಿಗೆ ಮೇಲ್ಭಾಗದಲ್ಲಿ ನೀರು ಕಾಣುತ್ತಿತ್ತು. ಈ ಬಾರಿ ಬತ್ತಿದೆ. ಇದಕ್ಕೆ ಬರಗಾಲವೂ ಕಾರಣ. ಹೊಂಡ ತುಂಬಲು ಮಳೆ ಬರಬೇಕಷ್ಟೆ.
– ನಾರಾಯಣ ಪ್ರಕಾಶ ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.